ಆಕ್ಷೇಪಾರ್ಹ ದೃಶ್ಯ ಪ್ರಸಾರವಾದ್ರೆ ದೂರು ನೀಡಿ

ಆಪರೇಟರ್‌ಗಳು ಹೆಚ್ಚು ಶುಲ್ಕ ಪಡೆದರೆ ತಿಳಿಸಿ ದೂರು ಪೆಟ್ಟಿಗೆ ಸ್ಥಾಪನೆಗೆ ಕ್ರಮ ಕೈಗೊಳ್ಳಲು ಸೂಚನೆ

Team Udayavani, Dec 6, 2019, 10:45 AM IST

6-December-1

ಕಲಬುರಗಿ: ಕೇಬಲ್‌, ಸೆಟಲೈಟ್‌ ಮೂಲಕ ಪ್ರಸಾರ ಹೊಂದಿರುವ ಟೆಲಿವಿಷನ್‌ ನ್ಯೂಸ್‌ ಮತ್ತು ಮನರಂಜನೆ ಟಿವಿ ಚಾನೆಲ್‌ಗ‌ಳಲ್ಲಿ ಆಕ್ಷೇಪಾರ್ಹ ದೃಶ್ಯಗಳು ಪ್ರಸಾರವಾದಲ್ಲಿ ಹಾಗೂ ಕೇಬಲ್‌ ಆಪರೇಟರ್‌ ಗಳು ಗ್ರಾಹಕರಿಂದ ಹೆಚ್ಚು ಶುಲ್ಕ ಪಡೆದಲ್ಲಿ ದೂರು ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಶರತ್‌. ಬಿ ತಿಳಿಸಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪನಿರ್ದೇಶಕರ ಕಚೇರಿಯಲ್ಲಿ ಕರೆದಿದ್ದ ಟೆಲಿವಿಷನ್‌ ನೆಟ್‌ವರ್ಕ್‌ (ರೆಗ್ಯುಲೇಷನ್‌) ಅಧಿನಿಯಮ-1995 ಮತ್ತು ನಿಯಮಗಳ ಜಾರಿಯ ಮೇಲ್ವಿಚಾರಣೆಗೆ ರಚಿಸಲಾಗಿರುವ ಜಿಲ್ಲಾಮಟ್ಟದ ನಿರ್ವಹಣಾ ಸಮಿತಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲಾಮಟ್ಟದ ನಿರ್ವಹಣಾ ಸಮಿತಿಗಳು ಇನ್ನು ಮುಂದೆ ಜಿಲ್ಲಾಮಟ್ಟದಲ್ಲಿ ದೂರುಗಳನ್ನು ದಾಖಲಿಸಲು ಅನುವಾಗುವಂತೆ ದೂರು ಕೋಶಗಳಾಗಿ ಕಾರ್ಯನಿರ್ವಹಿಸುವಂತೆ ಆದೇಶಿಸಿರುವ ಹಿನ್ನೆಲೆಯಲ್ಲಿ, ಜಿಲ್ಲೆಯಾದ್ಯಂತ ಗ್ರಾಹಕರಿಂದ ದೂರು ಪಡೆಯಲು ಜಿಲ್ಲಾಧಿಕಾರಿ ಕಚೇರಿ, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಪೊಲೀಸ್‌ ಆಯುಕ್ತಾಲಯ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಕಚೇರಿ, ಸಹಾಯಕ ಆಯುಕ್ತರ ಕಚೇರಿ, ತಹಶೀಲ್ದಾರ್‌ ಕಚೇರಿಗಳಲ್ಲಿ ಸಂಬಂ ಧಿಸಿದ ಇಲಾಖೆ ಅಧಿಕಾರಿಗಳು ತಕ್ಷಣವೇ ದೂರು ಪೆಟ್ಟಿಗೆ ಸ್ಥಾಪಿಸಲು ಕ್ರಮ ವಹಿಸಬೇಕು ಎಂದು ಸೂಚಿಸಿದರು.

ಸಾರ್ವಜನಿಕರು ಜಿಲ್ಲಾಧಿಕಾರಿ ಕಚೇರಿಯ ಇಮೇಲ್‌ ವಿಳಾಸ: [email protected] ಮತ್ತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಇಮೇಲ್‌ ವಿಳಾಸ: : [email protected], ಜೊತೆಗೆ ದೂರು ಪೆಟ್ಟಿಗೆ ಅಥವಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ಖುದ್ದಾಗಿ ಬಂದು ದೂರು ದಾಖಲಿಸಬಹುದಾಗಿದೆ ಎಂದು ಹೇಳಿದರು.

ಕೇಬಲ್‌ ಟೆಲಿವಿಷನ್‌ ನೆಟ್‌ವರ್ಕ್‌ (ರೆಗ್ಯುಲೇಷನ್‌) ಅಧಿನಿಯಮ-1995ರ ವ್ಯಾಪ್ತಿಗೊಳಪಡುವ ಕಾರ್ಯಕ್ರಮ ಸಂಕೇತ ಹಾಗೂ ಜಾಹೀರಾತು ಸಂಕೇತದ ಉಲ್ಲಂಘನಾ ಪ್ರಕರಣಗಳು, ಆಕ್ಷೇಪಾರ್ಹ ಅಂಶಗಳು, ಕೇಬಲ್‌ ಟಿ.ವಿಯಲ್ಲಿ ಪ್ರಸಾರವಾಗುವ ಕಾರ್ಯಕ್ರಮ ವೀಕ್ಷಿಸಲು ಮತ್ತು ಕೇಳಲು ಸಂಕೇತಾಕ್ಷರಗಳು ಗುಣಮಟ್ಟದಿಂದ ಕೂಡಿರದಿದ್ದಲ್ಲಿ ದೂರು ಸಲ್ಲಿಸಬೇಕು ಎಂದು ಮನವಿ ಮಾಡಿದರು.

ಹೆಚ್ಚು ಶುಲ್ಕ ಕೇಳಿದರೆ ದೂರು ನೀಡಿ: ಜಿಲ್ಲೆಯ ಕೇಬಲ್‌ ಆಪರೇಟರ್‌ಗಳು ಟ್ರಾಯ್‌ ನಿಗದಿಪಡಿಸಿರುವುದಕ್ಕಿಂತ ಹೆಚ್ಚಿನ ಕೇಬಲ್‌ ಶುಲ್ಕ ವಿ ಧಿಸಿದಲ್ಲಿ ಗ್ರಾಹಕರು ದೂರು ಪೆಟ್ಟಿಗೆಯಲ್ಲಿ ದೂರು ದಾಖಲಿಸಬಹುದು. ಇಲ್ಲವೇ ಖುದ್ದಾಗಿ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ಸಲ್ಲಿಸಬಹುದು ಎಂದು ಹೇಳಿದರು.

ಅಂಚೆ ಇಲಾಖೆಯಿಂದ ಜಿಲ್ಲೆಯ ಕೇಬಲ್‌ ಆಪರೇಟರ್‌ಗಳ ಪಟ್ಟಿ ಪಡೆಯಬೇಕು. ನಂತರ ಗ್ರಾಹಕರಿಗೆ ಯೋಜನೆಗೆ ಅನುಗುಣವಾಗಿ ಆಪರೇಟರ್‌ ಗಳು ವಿಧಿಸುತ್ತಿರುವ ಶುಲ್ಕದ ಮಾಹಿತಿ ಸಂಗ್ರಹಿಸಬೇಕು ಎಂದು ಸೂಚಿಸಿದರು.

ಪ್ರತಿ ಎರಡು ತಿಂಗಳಿಗೊಮ್ಮೆ ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿ ಸಭೆ ನಡೆಸಿ, ಆ ಅವಧಿಯಲ್ಲಿ ಸ್ವೀಕರಿಸಿದ ದೂರುಗಳನ್ನು ಸಮಿತಿ ಪರಾಮರ್ಶಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಅಲ್ಲದೇ ಹಿಂದಿನ ಸಭೆಗಳಲ್ಲಿ ತೆಗೆದುಕೊಂಡ ನಿರ್ಧಾರದಂತೆ ಕ್ರಮ ಕೈಗೊಂಡು, ಅನುಪಾಲನಾ ವರದಿಯನ್ನು ಸಂಬಂಧಪಟ್ಟ ಇಲಾಖೆಗಳು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪನಿರ್ದೇಶಕರಿಗೆ ಸಲ್ಲಿಸಬೇಕು ಎಂದು ತಿಳಿಸಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪನಿರ್ದೇಶಕರು, ಸಮಿತಿ ಸದಸ್ಯ ಕಾರ್ಯದರ್ಶಿಯಾದ ಜಿ.ಬಿ. ಸಿದ್ದೇಶ್ವರಪ್ಪ ಅವರು ಸಭೆಗೆ ಆಗಮಿಸಿದ ಸರ್ವರನ್ನು ಸ್ವಾಗತಿಸಿ, ಸಭೆಯಲ್ಲಿ ಚರ್ಚಿಸಬೇಕಾದ ವಿಷಯಗಳನ್ನು ಮಂಡಿಸಿದರು. ಸಭೆಯಲ್ಲಿ ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ಪ್ರಸನ್ನ ದೇಸಾಯಿ, ಗುಲಬರ್ಗಾ ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಪ್ರೊ| ಚಂದ್ರಕಾಂತ ಯಾತನೂರ, ಸರ್ಕಾರಿ ಮಹಿಳಾ ಪದವಿ ಕಾಲೇಜಿನ ಪ್ರಾಚಾರ್ಯ ಪ್ರೊ| ಖಂಡೇರಾವ್‌, ಕಮಲಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಚಾರ್ಯರಾದ ಡಾ| ಶಾಂತಾ ಅಸ್ಟಿಗೆ, ಅವ್ವಾ ಅಭಿವೃದ್ಧಿ ಸಂಸ್ಥೆ ಅಧ್ಯಕ್ಷ ಶಿವಾನಂದ ಅಣಜಗಿ, ಜಿಮ್ಸ್‌, ಮನಃಶಾಸ್ತ್ರಜ್ಞೆ ಡಾ| ರೇಣುಕಾ ಬಗಾಲೆ, ವಿಶ್ವ ಭಾರತಿ ಸೇವಾ ಸಂಸ್ಥೆ ಅಧ್ಯಕ್ಷೆ ಡಾ| ಶಾರದಾ ಯಾಕಾಪುರ ಹಾಜರಿದ್ದು, ತಮ್ಮ ಸಲಹೆ-ಅಭಿಪ್ರಾಯ ನೀಡಿದರು.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.