ಹಣ್ಣು-ತರಕಾರಿ ಮಾರಾಟಕ್ಕೆ ಸಂಚಾರಿ ವಾಹನ

ತೋಟಗಾರಿಕೆ ಬೆಳೆ ರೈತರಿಗಾಗಿ ವಿಶೇಷ ವಿನ್ಯಾಸ•ಉತ್ಪನ್ನ ತಾಜಾತನ ಉಳಿಸಲು ಕೂಲಿಂಗ್‌ ವ್ಯವಸ್ಥೆ

Team Udayavani, Aug 23, 2019, 1:33 PM IST

23-April-25

ಕಲಬುರಗಿ: ತೋಟಗಾರಿಗೆ ಉಪನಿರ್ದೇಶಕರ ಕಾರ್ಯಾಲಯ ಆವರಣದಲ್ಲಿ ನಿಂತಿರುವ ಮೊಬೈಲ್ ವೆಂಡಿಂಗ್‌ ವಾಹನ.

ರಂಗಪ್ಪ ಗಧಾರ
ಕಲಬುರಗಿ:
ರೈತರು ತಾವು ಬೆಳೆದ ಹಣ್ಣು, ತರಕಾರಿಯನ್ನು ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡುವ ನಿಟ್ಟಿನಲ್ಲಿ ಮೊಬೈಲ್ ವೆಂಡಿಂಗ್‌ ವಾಹನವನ್ನು ರಾಜ್ಯ ತೋಟಗಾರಿಕೆ ಇಲಾಖೆ ಪರಿಚಯಿಸಿದೆ.

ಹಣ್ಣು ಮತ್ತು ತರಕಾರಿ ತಾಜಾತನ ಉಳಿಸಲು ವಿಶೇಷವಾಗಿ ವಾಹನ ಸಿದ್ಧಪಡಿಸಲಾಗಿದೆ. ಸಣ್ಣ ಮಾರಾಟ ಮಳಿಗೆ ರೂಪದಲ್ಲಿ ವಾಹನ ವಿನ್ಯಾಸಗೊಳಿಸಲಾಗಿದೆ.

ನಗರದ ತೋಟಗಾರಿಕೆ ಉಪನಿರ್ದೇಶಕರ ಕಾರ್ಯಾಲಯದ ಆವರಣದಲ್ಲಿ ನಡೆಯುತ್ತಿರುವ ಸಸ್ಯ ಸಂತೆಯಲ್ಲಿ ಸಂಚಾರಿ ವಾಹನವನ್ನು ರೈತರಿಗೆ ಪರಿಚಯಿಸಲಾಗುತ್ತಿದೆ.

ಸಂತೆ, ಮಾರುಕಟ್ಟೆ ಹಾಗೂ ಬಡಾವಣೆಗಳಿಗೆ ರೈತರೇ ಸ್ವಯಂ ತೆರಳಿ ತಮ್ಮ ಉತ್ಪನ್ನಗಳನ್ನು ಗ್ರಾಹಕರಿಗೆ ತಲುಪಿಸಿ ಆದಾಯ ಗಳಿಸಲು ವಾಹನ ಸಹಕಾರಿಯಾಗಿದೆ.

ಅತ್ಯಾಧುನಿಕ ವ್ಯವಸ್ಥೆ: ಈ ಸಂಚಾರಿ ಹಣ್ಣು-ತರಕಾರಿ ವಾಹನ ಆತ್ಯಾಧ್ಯುನಿಕ ವ್ಯವಸ್ಥೆಯಿಂದ ಕೂಡಿದೆ. ವಿಶ್ವಬ್ಯಾಂಕ್‌ ಮತ್ತು ರಾಜ್ಯ ಸರ್ಕಾರದ ಆರ್ಥಿಕ ನೆರವಿನಲ್ಲಿ ‘ಸುಜಲಾ’ ಯೋಜನೆಯಡಿ ರೈತರಿಗೆ ವಾಹನ ನೀಡಲಾಗುತ್ತಿದೆ.

ರೈತರು ಉತ್ಪನ್ನದ ತಾಜಾತನ ಉಳಿಸಲು ವಾಹನವು ನೀರು ಸಿಂಪರಣೆಯ ಕೂಲಿಂಗ್‌ ಚೇಂಬರ್‌ ಹೊಂದಿದೆ. ಗ್ರಾಹಕರ ಗಮನ ಸೆಳೆಯಲು ಮೈಕ್‌ ವ್ಯವಸ್ಥೆ ಅಳವಡಿಸಲಾಗಿದೆ. ಮಾರಾಟಕ್ಕೆ ಲಭ್ಯ ಇರುವ ಹಣ್ಣು, ತರಕಾರಿಗಳು ಹಾಗೂ ಅವುಗಳ ದರ ಪಟ್ಟಿ , ತೋಟಗಾರಿಕೆ ಬೆಳೆಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲು ಎಲ್ಇಡಿ ಪರದೆ ಇದೆ.

ಸೋಲಾರ್‌ ಪವರ್‌ ಸಾಕು: ವಾಹನದಲ್ಲಿರುವ ಕೂಲಿಂಗ್‌ ಚೇಂಬರ್‌ನಲ್ಲಿ ಎರಡು ಟನ್‌ಗಳಷ್ಟು ತರಕಾರಿ ಹಾಗೂ ಹಣ್ಣು ಇಡಬಹುದಾಗಿದೆ. ವಾಹನದ ಎಡ ಮತ್ತು ಬಲ ಭಾಗಗಳಲ್ಲಿ 20 ಕೆಜಿ ಸಾಮರ್ಥ್ಯದ ತಲಾ 20 ಬುಟ್ಟಿಗಳನ್ನು ಜೋಡಿಸಲಾಗಿದೆ. ಬುಟ್ಟಿಯಲ್ಲಿರುವ ಉತ್ಪನ್ನ ಮತ್ತು ಗುಣಮಟ್ಟ ಸುಲಭವಾಗಿ ಗ್ರಾಹಕರು ನೋಡುವ ವ್ಯವಸ್ಥೆ ಮಾಡಲಾಗಿದೆ.

ಉತ್ಪನ್ನಗಳ ತಾಜಾತನ ಹಾಳಾಗದಂತೆ ನೋಡಿಕೊಳ್ಳಲು ನೀರು ಸಿಂಪಡಿಸುವ ಸ್ವಯಂ ಚಾಲಿತ ವ್ಯವಸ್ಯೆಯನ್ನೂ ವಾಹನ ಹೊಂದಿದೆ. ಇದರ ನಿರ್ವಹಣೆಗೆ ಹೆಚ್ಚುವರಿ ಇಂಧನ ವ್ಯಯಿಸುವ ಅವಶ್ಯಕತೆ ಇಲ್ಲ. ವಾಹನದ ಮೇಲ್ಭಾಗದಲ್ಲಿ ಸೋಲಾರ್‌ ಘಟಕ ಅಳವಡಿಸಲಾಗಿದೆ. ಇಡೀ ಕೂಲಿಂಗ್‌ ಚೇಂಬರ್‌ ಸೋಲಾರ್‌ ಪವರ್‌ ಮೇಲೆ ನಡೆಯುತ್ತಿದೆ.

ವಾಹನದ ಮತ್ತೂಂದು ವಿಶೇಷವೆಂದರೆ ಜಿಪಿಎಸ್‌ ವ್ಯವಸ್ಥೆ ಅಳವಡಿಸಲಾಗಿದೆ. ವಾಹನ ಯಾವ ಪ್ರದೇಶದಲ್ಲಿ ವಾಹನ ಸಂಚರಿಸುತ್ತದೋ, ಆ ಪ್ರದೇಶದ ತಾಪಮಾನದ ಅನುಗುಣವಾಗಿ ಜಿಪಿಎಸ್‌ ಕಾರ್ಯ ನಿರ್ವಹಿಸುತ್ತದೆ. ಅಂದರೆ, ಅಲ್ಲಿನ ತಾಪಮಾನ ಗ್ರಹಿಸಿಯೇ ಉತ್ಪನ್ನಗಳ ಮೇಲೆ ನೀರು ಸಿಂಪರಣೆ ಆಗುತ್ತದೆ. ಇದು ವಾಹನದ ವಿಶೇಷತೆ ಮತ್ತು ಆಕರ್ಪಣೆಯಾಗಿದೆ. ಸಿಂಪರಣೆ ನೀರು ಸಂಗ್ರಹಿಸಲು ವಾಹನದ ಹಿಂಭಾಗದಲ್ಲಿ 20 ಲೀಟರ್‌ ಸಾಮರ್ಥ್ಯದ ಟ್ಯಾಂಕ್‌ ಅಳವಡಿಸಲಾಗಿದೆ.

ಸೋಲಾರ್‌ ಘಟಕವನ್ನು ಮೂರು ಗಂಟೆ ಚಾರ್ಜ್‌ ಮಾಡಿದರೆ, ಇಡೀ ಒಂದು ದಿನ ನಡೆಯುತ್ತಿದೆ. ಒಂದು ಸೋಲಾರ್‌ ಕೆಲಸ ಮಾಡದಿದ್ದಲ್ಲಿ ವಿದ್ಯುತ್‌ ಮೂಲಕ ಚಾರ್ಜ್‌ ಮಾಡಬಹುದಾಗಿದೆ.

ಮಧ್ಯವರ್ತಿಗಳ ಹಾವಳಿ ತಡೆಯುವುದು, ರೈತರಿಗೆ ಹಾಗೂ ಗ್ರಾಹಕರಿಗೆ ಸರಿಯಾದ ಬೆಲೆ ಸಿಗುವಂತೆ ಮಾಡುವುದು. ಹಣ್ಣು, ತರಕಾರಿ ಬೆಳೆಯುವ ರೈತರಿಗೆ ಮಾರುಕಟ್ಟೆ ವ್ಯವಸ್ಥೆ ಒದಗಿಸುವುದು ಈ ವಾಹನದ ಉದ್ದೇಶವಾಗಿದೆ ಎನ್ನುತ್ತಾರೆ ತೋಟಗಾರಿಕೆ ಅಧಿಕಾರಿಗಳು.

ಟಾಪ್ ನ್ಯೂಸ್

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.