ವರ್ಗಾವಣೆ ಕೌನ್ಸೆಲಿಂಗ್‌ ಗೊಂದಲ

•ಹಿಂದಿನ ದಿನವೇ ತಿಳಿಸಿದರೆ ಬರುವುದು ಹೇಗೆ?•ತಂತ್ರಾಂಶದಲ್ಲಾಗುವ ತಪ್ಪು ತಿದ್ದುವಲ್ಲಿ ಅಲಕ್ಷ್ಯ

Team Udayavani, Jun 29, 2019, 11:49 AM IST

29-June-12

ಕಲಬುರಗಿ: ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತಾಲಯದ ಎದುರು ಪ್ರೌಢಶಾಲೆ ಹೆಚ್ಚುವರಿ ಶಿಕ್ಷಕರು ಪ್ರತಿಭಟನೆ ನಡೆಸಿದರು.

ಕಲಬುರಗಿ: ಸರ್ಕಾರಿ ಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಗೊಂದಲಾದ ಗೂಡಾಗಿ ಪರಿಣಮಿಸಿದ್ದು, ಹೆಚ್ಚುವರಿ ಶಿಕ್ಷಕರು ತಮಗೆ ಜಿಲ್ಲಾ ಹಂತದಲ್ಲೇ ಸ್ಥಳ ನಿಯುಕ್ತಿಗೊಳಬೇಕೆಂದು ಪಟ್ಟು ಹಿಡಿದಿದ್ದಾರೆ.

ಪ್ರೌಢಶಾಲೆಗಳಲ್ಲಿ ವಿಷಯವಾರು ಶಿಕ್ಷಕರನ್ನು ನಿಯೋಜಿಸಿ ಹೆಚ್ಚುವರಿಯಾಗಿರುವವರನ್ನು ಶಿಕ್ಷಕರ ಕೊರತೆ ಇರುವ ಶಾಲೆಗಳಿಗೆ ನಿಯುಕ್ತಿಗೊಳಿಸಲು ಕೌನ್ಸೆಲಿಂಗ್‌ ಪ್ರಕ್ರಿಯೆ ನಡೆಯುತ್ತಿದೆ. ಜಿಲ್ಲಾ ಮಟ್ಟದಲ್ಲಿ ವಿಷಯವಾರು ಶಿಕ್ಷಕರು ಭರ್ತಿಯಾದ ಹಿನ್ನೆಲೆಯಲ್ಲಿ ವಿಭಾಗ ಮಟ್ಟದಲ್ಲಿ ಕೌನ್ಸೆಲಿಂಗ್‌ ಮಾಡಲಾಗುತ್ತಿದೆ. ಒಂದು ಜಿಲ್ಲೆಯಿಂದ ಮತ್ತೂಂದು ಜಿಲ್ಲೆಗೆ ವರ್ಗಗೊಂಡರೆ ತೊಂದರೆ ಅನುಭವಿಸಬೇಕಾಗುತ್ತದೆ ಎಂದು ಶಿಕ್ಷಕರು ಅಳಲು ತೋಡಿಕೊಳ್ಳುತ್ತಿದ್ದಾರೆ.

ಕಲಬುರಗಿ ವಿಭಾಗದ ಆರು ಜಿಲ್ಲೆಗಳ 79 ಪ್ರೌಢಶಾಲೆ ಶಿಕ್ಷಕರನ್ನು ಹೆಚ್ಚುವರಿ ಎಂದು ಗುರುತಿಸಲಾಗಿದೆ. ಶುಕ್ರವಾರ ನಗರದ ಸಾರ್ವಜನಿಕ ಶಿಕ್ಷಕ ಇಲಾಖೆಯ ಆಯುಕ್ತಾಲಯದಲ್ಲಿ ವಿಭಾಗ ಮಟ್ಟದ ಕೌನ್ಸೆಲಿಂಗ್‌ ಹಮ್ಮಿಕೊಳ್ಳಲಾಗಿತ್ತು. ಆದರೆ, 79 ಶಿಕ್ಷಕರಲ್ಲಿ ಬಹುತೇಕ ಶಿಕ್ಷಕರು ಕೌನ್ಸೆಲಿಂಗ್‌ ವಿರೋಧಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತಾಲಯದ ಎದುರು ಕೆಲ ಹೊತ್ತು ಪ್ರತಿಭಟನೆ ನಡೆಸಿದರು.

ವಿಭಾಗ ಮಟ್ಟದಲ್ಲಿ ಜೂ.25ರಂದು ಪ್ರೌಢ ಶಾಲಾ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್‌ ನಡೆಯಬೇಕಿತ್ತು. ಸಿಎಂ ಗ್ರಾಮ ವಾಸ್ತವ್ಯ ಕಾರಣದಿಂದಾಗಿ ಮುಂದೂಡಲಾಗಿತ್ತು. ಆದರೆ, ಶುಕ್ರವಾರ ಕೌನ್ಸೆಲಿಂಗ್‌ ನಡೆಯುವ ಬಗ್ಗೆ ಮುಂಚೆಯೇ ಮಾಹಿತಿ ನೀಡಿಲ್ಲ. ಒಂದು ದಿನ ಮುಂಚೆ ಕೆಲವರಿಗೆ ಎಸ್‌ಎಂಎಸ್‌, ಮೇಲ್ ಮೂಲಕ ಮಾಹಿತಿ ನೀಡಲಾಗಿದೆ. ಬಳ್ಳಾರಿ, ಕೊಪ್ಪಳ ಜಿಲ್ಲೆಗಳಿಂದ ಬರುವುದು ಹೇಗೆ ಎಂದು ಶಿಕ್ಷಕರು ಪ್ರಶ್ನಿಸಿದರು.

ಟಿಡಿಎಸ್‌ನಿಂದ ಸಮಸ್ಯೆ: ಶಿಕ್ಷಕರ ಮಾಹಿತಿ ತಂತ್ರಾಂಶ (ಟಿಡಿಎಸ್‌)ದ ಆಧಾರ ಮೇಲೆ ವರ್ಗಾವಣೆ ಪ್ರಕ್ರಿಯೆ ನಡೆಸಲಾಗುತ್ತದೆ. ಮೊದಲ ಹಂತದಲ್ಲಿ ಶಿಕ್ಷಕರಿಗೆ ಮಾಹಿತಿ ಆಳವಡಿಸುವ ಅವಕಾಶ ನೀಡಲಾಗಿದೆ, ಆದರೆ, ಏನೇ ತಿದ್ದುಪಡಿ ಮಾಡಬೇಕಿದ್ದರೆ ಹಂತ-ಹಂತವಾಗಿ ಮುಖ್ಯ ಶಿಕ್ಷಕರು, ಬಿಇಒ ಮತ್ತು ಡಿಡಿಪಿಐ ಅವರ ಕೈಯಲ್ಲಿದೆ.

ಮೇಲಾಧಿಕಾರಿಗಳು ತಮಗೆ ಬೇಕಾದ ಶಿಕ್ಷಕರನ್ನು ಶಾಲೆಗಳಲ್ಲಿ ಉಳಿಸಿಕೊಂಡು ಬೇರೆವರೆಗೆ ಹೆಚ್ಚುವರಿ ತೋರಿಸುತ್ತಿದ್ದಾರೆ. ಕೆಲವೊಮ್ಮೆ ತಂತ್ರಾಂಶದಲ್ಲಿ ಶಿಕ್ಷಕರಿಂದಾದ ತಪ್ಪುಗಳನ್ನು ತಿದ್ದುಪಡಿ ಮಾಡುವಲ್ಲೂ ಅಲಕ್ಷ್ಯತನ ತೋರುತ್ತಿದ್ದಾರೆ ಎಂದು ಕೆಲ ಶಿಕ್ಷಕರು ಆರೋಪಿಸಿದರು.

ವಿನಾಯ್ತಿ ಇಲ್ಲ: ಶಿಕ್ಷಕರ ವರ್ಗಾವಣೆ ನಿಯಂತ್ರಣ ನಿಯಮಗಳ ಪ್ರಕಾರ ಗಂಭೀರ ಸ್ವರೂಪದ ಕಾಯಿಲೆ (ಹೃದಯ, ಕಿಡ್ನಿ ಸಂಬಂಧಿ, ಕ್ಯಾನ್ಸರ್‌, ಎಚ್ಐವಿ) ಹೊಂದಿದ ಹೆಚ್ಚುವರಿ ಶಿಕ್ಷಕರು ಅಥವಾ ಶಿಕ್ಷಕರ ಪತ್ನಿಯಾಗಲಿ, ಮಕ್ಕಳಾಗಲಿ ಇದ್ದರೆ ಅವರನ್ನು ವರ್ಗಾವಣೆಗೆ ಪರಿಗಣಿಸಲು ಸಾಧ್ಯವಿಲ್ಲ. ಶೇ.40ಕ್ಕಿಂತ ಹೆಚ್ಚಿನ ಅಂಗವಿಕಲತೆಯುಳ್ಳ ಶಿಕ್ಷಕರೂ ಕೂಡ ಕೌನ್ಸೆಲಿಂಗ್‌ನಲ್ಲಿ ಭಾಗವಹಿಸುವಂತಿಲ್ಲ. ಸರ್ಕಾರಿ ನೌಕರ ದಂಪತಿ (ಶಿಕ್ಷಕರ ಪತಿ ಅಥವಾ ಪತ್ನಿ)ಗೂ ವರ್ಗಾವಣೆಯಿಂದ ವಿನಾಯ್ತಿ ನೀಡಬೇಕು. ಆದರೆ, ಇದ್ಯಾವುದನ್ನು ಪರಿಗಣಿಸದೆ ಹೆಚ್ಚುವರಿ ಶಿಕ್ಷಕರ ವರ್ಗಾವಣೆ ನಡೆಸಲಾಗುತ್ತಿದೆ ಎಂದು ಇನ್ನು ಕೆಲ ಶಿಕ್ಷಕರು ದೂರಿದರು.

ನಮ್ಮ ಮಕ್ಕಳ ಭವಿಷ್ಯವೇನು?: ವರ್ಗಾವಣೆ ಕೌನ್ಸಿಲಿಂಗ್‌ ಪ್ರಕ್ರಿಯೆಗಾಗಿ ಕೆಲ ಶಿಕ್ಷಕರು ತಮ್ಮ ಪುಟ್ಟ ಮಕ್ಕಳೊಂದಿಗೆ ಬಂದಿದ್ದರು. ‘ಎಂಟು ವರ್ಷ ಕಾಲ ಬಳ್ಳಾರಿ ಜಿಲ್ಲೆಯಲ್ಲಿ ಸೇವೆ ಸಲ್ಲಿಸಿದ್ದೇವೆ. ಎರಡು ವರ್ಷಗಳ ಹಿಂದೆಯಷ್ಟೇ ಕಲಬುರಗಿಗೆ ಬಂದಿದ್ದೇನೆ. ಈಗ ಮತ್ತೆ ಹೆಚ್ಚುವರಿ ಶಿಕ್ಷಕರ ಹೆಸರಲ್ಲಿ ಮತ್ತೂಂದು ಜಿಲ್ಲೆಗೆ ವರ್ಗಾವಣೆಗೊಂಡರೆ ನನ್ನ ಮಕ್ಕಳ ಶಿಕ್ಷಣ, ಭವಿಷ್ಯದ ಗತಿಯೇನು’ ಎಂದು ಶಿಕ್ಷಕಿಯೊಬ್ಬರು ಪ್ರಶ್ನಿಸಿದರು.

ಮುಖ್ಯ ಶಿಕ್ಷಕರ ಬಡ್ತಿ ನೀಡಿ: ಕಳೆದ ನಾಲ್ಕು ವರ್ಷಗಳಿಂದ ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ ನೀಡಿಲ್ಲ. ಒಂದು ವೇಳೆ ಸಹ ಶಿಕ್ಷಕರಿಗೆ ಬಡ್ತಿ ನೀಡಿದಲ್ಲಿ ಹೆಚ್ಚುವರಿ ಶಿಕ್ಷಕರು ಎಂಬ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಆಯಾ ಶಾಲೆಗಳಲ್ಲೇ ಶಿಕ್ಷಕರು ಉಳಿಯುತ್ತಾರೆ. ಹೀಗಾಗಿ ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ ನೀಡುವ ಪ್ರಕ್ರಿಯೆಗೆ ಇಲಾಖೆ ಚಾಲನೆ ನೀಡಬೇಕೆಂಬ ವಾದವೂ ಕೇಳಿಬಂತು.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.