ರಾಮರಾವ್‌ ಮಹಾರಾಜರ ದರ್ಶನ ಪಡೆದ ಅಭ್ಯರ್ಥಿಗಳು

ಇಬ್ಬರೂ ನೆಚ್ಚಿಕೊಂಡಿದ್ದಾರೆ ಬಂಜಾರ ಮತ •ತಮ್ಮನ್ನೇ ಬೆಂಬಲಿಸುವಂತೆ ಗುರುಗಳಲ್ಲಿ ಮನವಿ

Team Udayavani, May 2, 2019, 11:27 AM IST

2-MAY-9

ಚಿಂಚೋಳಿ: ಬಿಜೆಪಿ ಅಭ್ಯರ್ಥಿ ಡಾ| ಅವಿನಾಶ ಜಾಧವ ಮಹಾರಾಷ್ಟ್ರದ ಪೌರಾದೇವಿ ಶಕ್ತಿಪೀಠದ ಪೂಜ್ಯ ಡಾ|ರಾಮರಾವ್ ಮಹಾರಾಜರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಕಲಬುರಗಿ/ಚಿಂಚೋಳಿ: ಚಿಂಚೋಳಿ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಗೆಲ್ಲುವ ಜಿದ್ದಿನಲ್ಲಿರುವ ಕಾಂಗ್ರೆಸ್‌ ಮತ್ತು ಬಿಜೆಪಿ ಅಭ್ಯರ್ಥಿಗಳು ಬಂಜಾರ ಸಮುದಾಯದ ಮತಬೇಟೆಗೆ ಇಳಿದಿದ್ದು. ಪೌರಾದೇವಿ ಪೀಠದ ಪೀಠಾಧಿಪತಿಗಳಾದ ಡಾ| ರಾಮರಾವ್‌ ಮಹಾರಾಜರ ಮೊರೆ ಹೋಗಿದ್ದಾರೆ.

ಕಾಂಗ್ರೆಸ್‌ ಅಭ್ಯರ್ಥಿ ಸುಭಾಷ ರಾಠೊಡ ಮಹಾರಾಷ್ಟ್ರಕ್ಕೆ ತೆರಳಿ ರಾಮರಾವ್‌ ಮಹಾರಾಜರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಬೆನ್ನಲ್ಲೇ ಬಿಜೆಪಿ ಅಭ್ಯರ್ಥಿ ಡಾ| ಅವಿನಾಶ ಜಾಧವ ಕೂಡ ಆಶೀರ್ವಾದ ಪಡೆದಿದ್ದಾರೆ. ಬುಧವಾರ ಬೆಳಗ್ಗೆ ಸುಭಾಷ ರಾಠೊಡ ರಾಮರಾವ್‌ ಮಹಾರಾಜರನ್ನು ಭೇಟಿಯಾಗಿ ತಮ್ಮನ್ನು ಬೆಂಬಲಿಸುವಂತೆ ಗುರುಗಳಲ್ಲಿ ಮನವಿ ಮಾಡಿಕೊಂಡಿದ್ದರು ಎಂದು ಹೇಳಲಾಗಿತ್ತು.

ಇದಾದ ನಂತರ ಬುಧವಾರ ಸಂಜೆ ಬಿಜೆಪಿ ಅಭ್ಯರ್ಥಿ ಡಾ| ಅವಿನಾಶ ಜಾಧವ ಅವರು ಡಾ| ರಾಮರಾವ್‌ ಮಹಾರಾಜರನ್ನು ಭೇಟಿ ಮಾಡಿ ತಮ್ಮನ್ನು ಬೆಂಬಲಿಸುವಂತೆ ಕೋರಿದ್ದಾರೆ ಎನ್ನಲಾಗಿದೆ. ಚಿಂಚೋಳಿ ಕ್ಷೇತ್ರದಲ್ಲಿ ಬಂಜಾರಾ ಸಮುದಾಯದ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಅಲ್ಲದೇ, ಇಬ್ಬರೂ ಅಭ್ಯರ್ಥಿಗಳು ಬಂಜಾರಾ ಸಮುದಾಯಕ್ಕೆ ಸೇರಿದ್ದರಿಂದ ಸಮುದಾಯದ ಮತಗಳನ್ನು ಹೆಚ್ಚಾಗಿ ನೆಚ್ಚಿಕೊಂಡಿದ್ದಾರೆ.

ರಾಠೊಡಗೆ ಶುಭ ಹಾರೈಕೆ: ಮೀಸಲು ಚಿಂಚೋಳಿ ಮತಕ್ಷೇತ್ರಕ್ಕೆ ಸ್ಪರ್ಧಿಸಿದ ಕಾಂಗ್ರೆಸ್‌ ಅಭ್ಯರ್ಥಿ ಸುಭಾಶ ರಾಠೊಡ ನಾಮಪತ್ರ ಸಲ್ಲಿಸಿದ ಮರುದಿನವೇ ಮಹಾರಾಷ್ಟ್ರದ ಪೌರಾದೇವಿ ಬಳಿ ಸಮಾಜದ ಮುಖಂಡರೊಂದಿಗೆ ಭೇಟಿ ನೀಡಿ ಪೌರಾದೇವಿ ಶಕ್ತಿಪೀಠದ ಬಂಜಾರಾ ಧರ್ಮಗುರು ಪೂಜ್ಯ ಡಾ| ರಾಮರಾವ ಮಹಾರಾಜರ ಆಶೀರ್ವಾದ ಪಡೆದುಕೊಂಡಿದ್ದಾರೆ.

ಪೂಜ್ಯರು ಈ ಸಂದರ್ಭದಲ್ಲಿ ಮಾತನಾಡಿ, ಬಂಜಾರಾ ಸಮಾಜದ ಏಳ್ಗೆ, ಪ್ರಗತಿ ಹಾಗೂ ಅಭಿವೃದ್ದಿಗಾಗಿ ಕಳೆದ 25 ವರ್ಷಗಳಿಂದ ಸುಭಾಶ ರಾಠೊಡ ಹೋರಾಟ ನಡೆಸುತ್ತಲೇ ಬರುತ್ತಿದ್ದಾರೆ. ಒಳ್ಳೆಯ ಸಮಾಜದ ಕಾಳಜಿಯುಳ್ಳ ಸುಭಾಶ ರಾಠೊಡ ಅವರಿಗೆ ಯಶಸ್ಸು ಸಿಗಲಿ ಎಂದು ಹಾರೈಸಿದ್ದಾರೆ ಎಂದು ಸಮಾಜದ ಮುಖಂಡ ತುಕಾರಾಮ ಪವಾರ ತಿಳಿಸಿದ್ದಾರೆ. ತಾಲೂಕು ಬಂಜಾರಾ ಸಮಾಜದ ಮುಖಂಡರಾದ ಜಗನ್ನಾಥ ರಾಠೊಡ, ಮೇಘರಾಜ ರಾಠೊಡ, ಚಂದರ ಕಾರಬಾರಿ, ತಾಲೂಕು ಬಂಜಾರಾ ಸಮಾಜದ ಅಧ್ಯಕ್ಷ ರಾಮಶೆಟ್ಟಿ ಪವಾರ, ಸುನೀಲ ರಾಠೊಡ, ಅಶೋಕ ಚವ್ಹಾಣ, ಪ್ರೇಮಸಿಂಗ ಜಾಧವ ಹಾಗೂ ಇನ್ನಿತರರು ಈ ಸಂದರ್ಭದಲ್ಲಿದ್ದರು.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.