ಇಂದು ಜಿಪಂ ಸಭೆ: ಕೆಡಿಪಿ ಸಭೆ ಯಾವಾಗ?

ವರ್ಷದಲ್ಲಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದಿದ್ದು ಒಂದೇ ಸಭೆ•ಅಜೆಂಡಾ ಪ್ರಕಾರ ನಡೆಯಲಿ ಸಭೆ

Team Udayavani, Jun 15, 2019, 9:49 AM IST

15-June-1

ಹಣಮಂತರಾವ ಭೈರಾಮಡಗಿ
ಕಲಬುರಗಿ:
ಬರೊಬ್ಬರಿ ಆರು ತಿಂಗಳ ನಂತರ ಶನಿವಾರ ಜಿಲ್ಲಾ ಪಂಚಾಯತ್‌ ಸಾಮಾನ್ಯ ಸಭೆ ನಡೆಯುತ್ತಿದ್ದು, ಈಗಲಾದರೂ ಆಡಳಿತದ ಕಾರ್ಯವೈಖರಿ ಚುರುಕುಗೊಳ್ಳುವುದೇ ಎಂದು ಸಭೆ ನಿರೀಕ್ಷೆ ಹುಟ್ಟಿಸಿದೆ.

ಈ ವರ್ಷದ ಆರಂಭದ ಜನೆವರಿ 19ರಂದು ಸಾಮಾನ್ಯ ಸಭೆ ನಡೆದ ನಂತರ ಈಗ ಜೂನ್‌ 15ರಂದು ಸಭೆ ನಡೆಯುತ್ತಿದೆ. ಸಭೆ ಆರಂಭವಾಗುತ್ತಿದ್ದಂತೆ ಯಾವುದೋ ಒಂದು ವಿಷಯ ಮುಂದಿಟ್ಟುಕೊಂಡು ಅದನ್ನೇ ಜಾಸ್ತಿ ಎಳೆದು ಅರ್ಧ ದಿನ ತೆಗೆದುಕೊಂಡು ಹೋಗುವ ಚಾಳಿಗೆ ಶನಿವಾರ ಸಭೆ ಇತಿಶ್ರೀ ಹಾಡುವುದೇ ಎನ್ನುವುದು ಎಲ್ಲರನ್ನು ಕಾಡುತ್ತಿದೆ. ಸಭೆಯು ಅಜೆಂಡಾ ಪ್ರಕಾರ ನಡೆದರೆ ಚರ್ಚೆಗೆ ಹಾಗೂ ಎಲ್ಲ ಇಲಾಖೆಗಳ ಕುರಿತಾಗಿ ಮಾಹಿತಿ ಪಡೆಯಲು ಸಾಧ್ಯವಾಗುತ್ತದೆ.

ಜಿಲ್ಲಾ ಪಂಚಾಯಿತಿಯ ಪ್ರಸಕ್ತ ಚುನಾಯಿತ ಆಡಳಿತದ ಅವಧಿಯ 15ನೇ ಸಾಮಾನ್ಯ ಸಭೆ ಇದಾಗಿದೆ. ಹಿಂದಿನ ಸಭೆಯಲ್ಲಿ ತೆಗೆದುಕೊಂಡ ಕೆಲವು ನಿರ್ಣಯಗಳು ಸರ್ಕಾರದ ಮಟ್ಟದಲ್ಲಿ ಹೋಗದೇ ಇಲ್ಲೇ ಉಳಿದಿರುವ ಘಟನೆಗಳು ಕಣ್ಣೆದುರಿಗೆ ಇವೆ. ಇನ್ಮುಂದೆಯಾದರೂ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳು ಕಾರ್ಯರೂಪಕ್ಕೆ ಬರಲಿ ಎನ್ನುವುದೇ ಸರ್ವ ಸದಸ್ಯರ ಅಭಿಪ್ರಾಯವಾಗಿದೆ.

ಸಚಿವರ ಅಧ್ಯಕ್ಷತೆಯ ಕೆಡಿಪಿ ಸಭೆಗೆ ಕಾರ್ಮೋಡ: ಜಿಲ್ಲಾ ಉಸ್ತುವಾರಿ ಅಧ್ಯಕ್ಷತೆಯಲ್ಲಿ ಪ್ರತಿ ಮೂರು ತಿಂಗಳಿಗೊಮ್ಮೆಯಾದರೂ ಕೆಡಿಪಿ ಸಭೆ ನಡೆಯಬೇಕು. ಆದರೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಸಚಿವರಾಗಿ ಒಂದು ವರ್ಷವಾಗಿದೆ. ಈ ಅವಧಿಯಲ್ಲಿ ಒಂದೇ ಕೆಡಿಪಿ ಸಭೆ ನಡೆಸಿದ್ದಾರೆ.

ಎರಡೂವರೆ ತಿಂಗಳು ನೀತಿ ಸಂಹಿತೆ ಇರುವ ಹಿನ್ನೆಲೆಯಲ್ಲಿ ಸಭೆ ನಡೆಸಲಿಕ್ಕೆ ಆಗಿರಲಿಲ್ಲ. ಈಗ ನೀತಿ ಸಂಹಿತೆ ಮುಗಿದು ಒಂದು ತಿಂಗಳಾಗುತ್ತಾ ಬರುತ್ತಿದೆ. ಈಗಲಾದರೂ ಸಚಿವರು ಕೆಡಿಪಿ ಸಭೆಗೆ ಮುಂದಾಗಬೇಕೆಂಬುದು ಸಾರ್ವಜನಿಕರು ಒಕ್ಕೊರಲಿನಿಂದ ಆಗ್ರಹಿಸಿದ್ದಾರೆ. ಲೋಕಸಭೆ ಚುನಾವಣೆ ಮುಗಿದ ನಂತರವೇ ಹೈ.ಕ ಭಾಗದ ಆಯಾ ಜಿಲ್ಲಾ ಉಸ್ತುವಾರಿ ಸಚಿವರು ಕೆಡಿಪಿ ಸಭೆ ನಡೆಸಿ ಅಭಿವೃದ್ಧಿ ಕಾರ್ಯಗಳನ್ನು ಪರಾಮರ್ಶಿಸಿದ್ದಾರೆ. ಕಳೆದ ವರ್ಷ 2018ರ ಸೆಪ್ಟೆಂಬರ್‌ 12ರಂದು ತ್ತೈಮಾಸಿಕ ಕೆಡಿಪಿ ಸಭೆ ನಡೆಸಿದ ನಂತರ ಮಗದೊಂದು ಅಂದರೆ ಎರಡನೇ ಸಭೆ ನಡೆದಿಲ್ಲ. ಪ್ರಥಮ ಸಭೆಯಲ್ಲೇ ಸಚಿವರು ಅಧಿಕಾರಿಗಳ ಬೆವರು ಇಳಿಸಿದ್ದರಲ್ಲದೇ ಆವಾಜ್‌ ಸಹ ಹಾಕಿದ್ದರು. ಸಚಿವರು ಕೆಡಿಪಿ ಸಭೆ ನಡೆಸದಿದ್ದರೂ ಅಭಿವೃದ್ಧಿ ಕಾರ್ಯಗಳ ಪರಿಶೀಲನಾ ಸಭೆ ಹಾಗೂ ಬೃಹತ್‌ ಜನಸ್ಪಂದನ ಸಭೆ ನಡೆಸಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದ್ದರು. ಆದರೆ ಹಲವಾರು ಪ್ರಮುಖ ಸಮಸ್ಯೆಗಳಿಗೆ ಅದರಲ್ಲೂ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಜತೆಗೆ ಅಕ್ರಮ ಮರಳುಗಾರಿಕೆಗೆ ಕಡಿವಾಣ ಹಾಕಲು ಶ್ರಮಿಸಲಿಲ್ಲ ಎನ್ನುವ ಕೂಗು ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದೆ.

ಅಲ್ಲದೇ ಜಿಲ್ಲಾಧಿಕಾರಿ ಕಚೇರಿಯಲ್ಲೂ ಸಣ್ಣ-ಸಣ್ಣ ಕೆಲಸದ ಅರ್ಜಿಗಳಿಗೆ ಬಹಳ ದಿನವಾದರೂ ಮುಕ್ತಿ ಸಿಕ್ತಾ ಇಲ್ಲ ಎನ್ನುವ ದೂರುಗಳು ಕೇಳಿಬರುತ್ತಿವೆ. ಉದ್ಯೋಗ ಖಾತ್ರಿ ಅನುಷ್ಠಾನ, ಶುದ್ಧ ಕುಡಿಯುವ ನೀರಿನ ಘಟಕ ನಿರ್ವಹಣೆ, ಈಗ ಮಳೆಗಾಲ ಆರಂಭವಾಗುತ್ತಿರುವುರಿಂದ ಬಿತ್ತನೆ ಸಿದ್ಧತೆ ಸೇರಿದಂತೆ ಇತರ ವಿಷಯಗಳ ಕುರಿತಾಗಿ ಚರ್ಚಿಸಿ ಆಡಳಿತಕ್ಕೆ ಚುರುಕು ಮುಟ್ಟಿಸುವುದು ಸಚಿವರ ಕಾರ್ಯವಾಗಿದೆ. ಇದೆಲ್ಲ ಕೆಡಿಪಿ ಸಭೆ ನಡೆದರೆ ಸೂಕ್ತ ವೇದಿಕೆಯಾಗುತ್ತದೆ.

ಈ ವಿಷಯ ಚರ್ಚೆಗೆ ಬರಲಿ
ಕಳೆದ ಜನೆವರಿ 19ರಂದು ನಡೆದ ಜಿಲ್ಲಾ ಪಂಚಾಯತ್‌ ಸಾಮಾನ್ಯ ಸಭೆಯಲ್ಲಿ ಅಂಗನವಾಡಿ ಕೇಂದ್ರಗಳಿಗೆ ಪೂರೈಕೆಯಾಗುವ ಆಹಾರದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬುದಾಗಿ ಚರ್ಚೆ ಯಾಗಿ ಲೆಕ್ಕಾಧಿಕಾರಿಯಿಂದ ತನಿಖೆಗೆ ಒಳಪಡಿಸಲಾಗುವುದು ಎಂದು ಸಿಇಒ ಸಭೆಯಲ್ಲಿ ಪ್ರಕಟಿಸಿದ್ದರು. ಈಗ ತನಿಖೆ ಏನಾಗಿದೆ, ಭ್ರಷ್ಟಾಚಾರದಲ್ಲಿ ಯಾರ್ಯಾರು ಬಾಗಿ ಆಗಿದ್ದಾರೆ ಎನ್ನುವುದು ಬಹಿರಂಗಗೊಳ್ಳಬೇಕಾಗಿದೆ. ಈ ಕುರಿತು ಶನಿವಾರದ ಸಭೆಯಲ್ಲಿ ಚರ್ಚೆಗೆ ಬರುವುದು ಅಗತ್ಯವಾಗಿದೆ. ಹೀಗಾದಲ್ಲಿ ಮಾತ್ರ ಸಭೆಗೆ ಒಂದು ಅರ್ಥ ಹಾಗೂ ಮಹತ್ವ ಬಂದಂತಾಗುತ್ತದೆ.

ಸಚಿವರ ಕೆಡಿಪಿ ಸಭೆ ಮುಂದಿರುವ ಸಮಸ್ಯೆಗಳು
ಬಿತ್ತನೆ ಶುರುವಾಗುವ ಲಕ್ಷಣಗಳು ಕಂಡು ಬರುತ್ತಿವೆ. ಹೀಗಾಗಿ ಬೀಜ, ಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲು ಸಚಿವರ ಅಧ್ಯಕ್ಷ ತೆಯ ಕೆಡಿಪಿ ಸಭೆ ಅಗತ್ಯವಾಗಿದೆ. ವಾರದ ಹಿಂದೆ ಜಿಲ್ಲೆಯಲ್ಲಿ ನಕಲಿ ರಸಗೊಬ್ಬರ ಮಾರಾಟ ಪ್ರಕರಣ ಕೇಳಿ ಬಂತು. ಈ ಸಂಬಂಧ ಮಾದನಹಿಪ್ಪರಗಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತೇ ಎಂಬುದಾಗಿ ಕೃಷಿ ಅಧಿಕಾರಿಗಳು ತಿಳಿಸಿದ್ದರು. ಆದರೆ ನಂತರ ಪ್ರಕರಣವೇ ದಾಖಲಾಗಲಿಲ್ಲ. ಇನ್ನುಳಿದಂತೆ ಆಡಳಿತ ವೈಫ‌ಲ್ಯದಿಂದ ಸೂಪರ್‌ಸೀಡ್‌ಗೆ ಬಂದು ನಿಂತಿರುವ ಕಲಬುರಗಿ-ಯಾದಗಿರಿ ಜಿಲ್ಲಾ ಸಹಕಾರಿ ಕೇಂದ್ರ (ಡಿಸಿಸಿ) ಬ್ಯಾಂಕ್‌ ಪುನಶ್ಚೇತನಗೊಳಿಸುವ ಹೊಣೆಗಾರಿಕೆಯೂ ಸಚಿವರ ಮೇಲಿದೆ. ಈ ಕುರಿತು ಸಭೆ ನಡೆದು ಪರಿಹಾರ ಕ್ರಮ ಕೈಗೊಳ್ಳುವುದು ಜರೂರಾಗಿದೆ. ಕಲಬುರಗಿ ಮಹಾನಗರದಲ್ಲಿ 10-15 ದಿನಗಳಿಗೊಮ್ಮೆ ನೀರು ಪೂರೈಕೆಯಾಗುತ್ತಿದೆ. ಕೆಲವು ಪ್ರದೇಶಗಳಿಗೆ ಎರಡ್ಮೂರು ದಿನಕ್ಕೊಮ್ಮೆ ನೀರು ಪೂರೈಕೆಯಾಗುತ್ತಿದೆ. ಇದರ ತಾರತಮ್ಯ ನಿವಾರಿಸುವ ಕಾರ್ಯ ಸಚಿವರ ಮುಂದಿದೆ. ಇನ್ನುಳಿದಂತೆ ಹಲವು ಇಲಾಖೆಗಳಲ್ಲಿ ಅಧಿಕಾರಿಗಳ ಹಲವು ಹುದ್ದೆಗಳು ಖಾಲಿ ಬಿದ್ದಿವೆ. ಈಗಂತು ಅಪರ ಜಿಲ್ಲಾಧಿಕಾರಿ ಹುದ್ದೆಯೇ ಖಾಲಿ ಇದೆ. ಎನ್‌ಇಕೆಎಸ್‌ಆರ್‌ಟಿಸಿ ಎಂಡಿ, ಪಶು ಸಂಗೋಪನಾ ಇಲಾಖೆ ನಾಲ್ಕು ಉಪನಿರ್ದೇಶಕರು, ಜಿಲ್ಲಾ ಪಂಚಾಯತ್‌ದಲ್ಲಿ ಉಪಕಾರ್ಯದರ್ಶಿ, ಸಹಾಯಕ ಕಾರ್ಯದರ್ಶಿ, ರೇಷ್ಮೆ ಹಾಗೂ ಮಹಿಳಾ ಮತ್ತು ಕಲ್ಯಾಣ ಇಲಾಖೆಯ ಡಿಡಿ, ಯುವಜನ ಸೇವಾ ಇಲಾಖೆಯ ಎಡಿ ಸೇರಿದಂತೆ ಹಲವಾರು ಹುದ್ದೆಗಳು ಖಾಲಿ ಇವೆ. ಇವೆಲ್ಲ ಭರ್ತಿ ಮಾಡುವ ಜವಾಬ್ದಾರಿ ಉಸ್ತುವಾರಿ ಸಚಿವರ ಮೇಲಿದೆ. ಈ ಎಲ್ಲ ಖಾಲಿ ಹುದ್ದೆಗಳು ಅರಿವಿಗೆ ಬರಬೇಕಾದರೆ ಕೆಡಿಪಿ ಸಭೆ ನಡೆದಲ್ಲಿ ಮಾತ್ರ ಸಾಧ್ಯವಾಗುತ್ತದೆ.

ಟಾಪ್ ನ್ಯೂಸ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.