ಯಶಸ್ವಿಗೆ ಪಂಚ ಸೂತ್ರ ಅಳವಡಿಸಿಕೊಳ್ಳಿ

ಓದಿನೊಂದಿಗೆ ಸಂಸ್ಕಾರ ಬೆಳೆಸಿಕೊಳ್ಳಿ ಕನಸು ಸಾಧಿಸುವ ಹುಚ್ಚು ಹಿಡಿಸಿಕೊಳ್ಳಿ

Team Udayavani, Nov 7, 2019, 10:55 AM IST

7-November-1

ಕಲಬುರಗಿ: ಮನುಷ್ಯ ತನ್ನ ಜೀವನದಲ್ಲಿ ಶಿಸ್ತು, ಶ್ರದ್ಧೆ, ವೃತ್ತಿ, ಪ್ರಾಮಾಣಿಕತನ, ಸತತ ಪ್ರಯತ್ನ ಎನ್ನುವ ಪಂಚ ಸೂತ್ರ ಅಳವಡಿಸಿಕೊಂಡರೆ ಮಾತ್ರ ಯಶಸ್ಸು ಕಾಣಲು ಸಾಧ್ಯ ಎಂದು ಕ್ಲಾರಿಯೋನೇಟ್‌ ವಾದಕ ಡಾ| ಪಂಡಿತ ನರಸಿಂಹಲು ವಡವಾಟಿ ಹೇಳಿದರು.

ಗುಲಬರ್ಗಾ ವಿಶ್ವವಿದ್ಯಾಲಯದ ಡಾ| ಬಿ.ಆರ್‌. ಅಂಬೇಡ್ಕರ್‌ ಭವನದಲ್ಲಿ ಬುಧವಾರದಿಂದ ಆರಂಭವಾದ ಮೂರು ದಿನಗಳ ಅಂತರ್‌ ಮಹಾವಿದ್ಯಾಲಯಗಳ ಯುವಜನೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.

ಓದಿ ಡಾಕ್ಟರ್‌, ಇಂಜಿನಿಯರ್‌ ಅಥವಾ ಮತ್ತೂಂದಾಗಿ ಬಾಳುವುದಲ್ಲ. ಓದಿನ ಜತೆಗೆ ಸಂಸ್ಕಾರವೂ ಇರಬೇಕು. ವಿದ್ಯಾವಂತರಿಗೆ ಸಂಸ್ಕಾರವೇ ಇರದಿದ್ದರೆ, ಅವನು ಬುದ್ಧಿವಂತ ಪಿಶಾಚಿ ಆಗುತ್ತಾನೆ. ಮಹಾನ್‌ ನಾಯಕರ, ಸಾಧಕರ ಪುಸಕ್ತಗಳನ್ನು ಓದಿ, ಧಾರ್ಮಿಕ ವಿಚಾರಗಳನ್ನು ತಿಳಿದುಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ವ್ಯಕ್ತಿ ಮತ್ತು ಮನಸ್ಸಿನ ನಡುವೆ ವ್ಯತ್ಯಾಸ ಇದೆ. ಸನ್ನಿವೇಶಕ್ಕೆ ಅನುಗುಣವಾಗಿ ಮನಸ್ಸು ಬದಲಾಗಬಹುದು. ಆದರೆ, ವ್ಯಕ್ತಿ ಬದಲಾಗಲಾರ. ವ್ಯಕ್ತಿತ್ವ ನಿರ್ಮಾಣ ಮಾಡಿಕೊಳ್ಳಲು ಸ್ವಾಮಿ ವಿವೇಕಾನಂದರ ಪುಸ್ತಕಗಳನ್ನು ಓದಿ. ಜೀವನದಲ್ಲಿ ಎದುರಾಗುವ ಅಡೆ-ತಡೆಗಳನ್ನು ಮೆಟ್ಟಿ ನಿಲ್ಲಲು ಅಬ್ರಾಹಂ ಲಿಂಕನ್‌ರ ಜೀವನ ಚರಿತ್ರೆ ಓದಬೇಕು ಎಂದರು.

ಜೀವನದಲ್ಲಿ ಛಲ ಇರಬೇಕು. ಛಲ ಅಳವಡಿಸಿಕೊಂಡರೆ ದೊಡ್ಡ ಸಾಧನೆ ಮಾಡಲು ಸಾಧ್ಯ. ಗುರುಗಳ ಅಂತಃಕರಣದಿಂದ ಆರ್ಶೀವಾದ ಪಡೆಯುವ ಶಿಷ್ಯರಾಗಬೇಕು. ಸಣ್ಣ ಕನಸು ಕಾಣುವ ಬದಲು ದೊಡ್ಡ ಕನಸು ಕಾಣಬೇಕು. ಏನಾದರೂ ಸಾಧಿಸುತ್ತೇನೆಂಬ ಹುಚ್ಚುತನ ಹೊಂದಿದ್ದರೆ ಮಾತ್ರ ಸಾಧಿಸಲು ಸಾಧ್ಯವಾಗುತ್ತದೆ ಎಂದು ಪ್ರತಿಪಾದಿಸಿದರು.

ಅಧ್ಯಕ್ಷತೆ ವಹಿಸಿದ್ದ ಕುಲಪತಿ ಪ್ರೊ| ಪರಿಮಳಾ ಅಂಬೇಕರ್‌ ಮಾತನಾಡಿ, ಗುವಿವಿ ವ್ಯಾಪ್ತಿಯಲ್ಲಿ ಸುಮಾರು 490 ವಿದ್ಯಾಲಯಗಳು ಬರುತ್ತವೆ. ಆದರೆ, ಪ್ರತಿ ವರ್ಷವೂ ಕೇವಲ 25ರಿಂದ 30 ಕಾಲೇಜುಗಳು ಮಾತ್ರ ಭಾಗವಹಿಸುವುದು ದುಃಖದ ಸಂಗತಿ. ಮುಂದಿನ ದಿನಗಳಲ್ಲಾದರೂ ಹೆಚ್ಚಿನ ವಿದ್ಯಾಲಯಗಳು ಪಾಲ್ಗೊಳ್ಳಲಿ ಎನ್ನುವ ಆಶಯ ವ್ಯಕ್ತಪಡಿಸಿದರು.

ಕನ್ನಡ ಅಧ್ಯಯನ ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕ ಪ್ರೊ|ಎಚ್‌.ಟಿ.ಪೋತೆ ಉದ್ಘಾಟಕರಾದ ಪಂಡಿತ್‌ ವಡವಾಟಿ ಅವರ ಪರಿಚಯ ವಾಚಿಸಿ, ರಾಯಚೂರಿನ ನರಸಿಂಹಲು ವಡವಾಟಿ ಅವರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದಿದ್ದು ಈ ಭಾಗದ ಹೆಮ್ಮೆ. ಅವರ ಜನ್ಮ ದಿನವಾದ ಜ.21ರಂದು ದೇಶಾದ್ಯಂತ ‘ಕಲಾವಿದರ ದಿನ’ವನ್ನಾಗಿ ಆಚರಿಸುತ್ತಿರುವುದು ವಡವಾಟಿ ಅವರ ಸಾಧನೆ ನಿರೂಪಿಸುತ್ತದೆ ಎಂದರು.

ಸಿಂಡಿಕೇಟ್‌ ಸದಸ್ಯ ವಿಜಯ ಭಾಸ್ಕರ್‌, ವಿದ್ಯಾವಿಷಯಕ ಪರಿಷತ್‌ ಸದಸ್ಯ ಪ್ರೊ| ಸಿ.ಎಸ್‌. ಬಸವರಾಜ, ಕುಲಸಚಿವ ಪ್ರೊ| ಸಿ. ಸೋಮಶೇಖರ, ಮೌಲ್ಯಮಾಪನ ಕುಲಸಚಿವ ಪ್ರೊ| ಸಂಜೀವಕುಮಾರ ಕೆ.ಎಂ, ವಿತ್ತಾಧಿಕಾರಿ ಪ್ರೊ| ಬಿ. ವಿಜಯ, ವಿದ್ಯಾರ್ಥಿ ಕಲ್ಯಾಣಾಧಿಕಾರಿ ಪ್ರೊ| ಕೆ. ಸಿದ್ದಪ್ಪ ಹಾಗೂ ವಿಶ್ವದ್ಯಾಲಯ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಇದ್ದರು.

ಗಮನ ಸೆಳೆದ ಮೆರವಣಿಗೆ: ಇದಕ್ಕೂ ಮುನ್ನ ಯುವಜನೋತ್ಸವ ಅಂಗವಾಗಿ ವಿಶ್ವವಿದ್ಯಾಲಯ ಆವರಣದಲ್ಲಿ ಸಂಭ್ರಮದ ಮೆರವಣಿಗೆ ನಡೆಯಿತು. ವಿವಿಧ ಜಿಲ್ಲೆಗಳಿಂದ ಬಂದಿದ್ದ ವಿದ್ಯಾರ್ಥಿಗಳು ಅನೇಕ ವೇಷಭೂಷಣ ತೊಟ್ಟು ಕುಣಿದು ಕುಪ್ಪಳಿಸಿದರು.

ಡಾ| ಪಂಡಿತ ನರಸಿಂಹಲು ವಡವಾಟಿ, ಕುಲಪತಿ ಪ್ರೊ|ಪರಿಮಳಾ ಅಂಬೇಕರ್‌ ಹಾಗೂ ಪ್ರಾಧ್ಯಾಪಕರು ವಿದ್ಯಾರ್ಥಿಗಳೊಂದಿಗೆ ಹೆಜ್ಜೆ ಹಾಕಿ, ಮೆರವಣಿಗೆಗೆ ಮತ್ತಷ್ಟು ಮೆರಗು ತುಂಬಿದರು. ಡೊಳ್ಳು ಕೊರಳಿಗೆ ಹಾಕಿಕೊಂಡು ಬಾರಿಸಿ ವಿದ್ಯಾರ್ಥಿಗಳಲ್ಲಿ ಹುಮ್ಮಸ್ಸು ಹೆಚ್ಚಿಸಿದರು.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.