ಅಭಿವೃದ್ಧಿ ಪಡಿಸಿದ್ದರೆ ಹೈಕ ಏಕೆ ಹಿಂದುಳಿಯುತ್ತಿತ್ತು ?

ಹೊಸ ಯೋಜನೆಗಾಗಿ ಜಾಧವ ಆಯ್ಕೆ ಮಾಡಿಉಗ್ರರಿಗೆ ಬಿರಿಯಾನಿ ತಿನ್ನಿಸಿದ್ದೇ ಕಾಂಗ್ರೆಸ್‌ ಸಾಧನೆ

Team Udayavani, Apr 10, 2019, 1:28 PM IST

10-April-16

ಕಲಬುರಗಿ: ಮಧ್ಯಪ್ರದೇಶ ಮಾಜಿ ಸಿಎಂ ಶಿವರಾಜ್‌ಸಿಂಗ್‌ ಚವ್ಹಾಣ ಮಂಗಳವಾರ ನಗರದಲ್ಲಿ ರೋಡ್‌ ಶೋ ನಡೆಸಿದರು.

ಕಲಬುರಗಿ: ಮಲ್ಲಿಕಾರ್ಜುನ ಖರ್ಗೆ 50 ವರ್ಷದಿಂದ ಅಧಿಕಾರದಲ್ಲಿದ್ದರೂ ಈ ಭಾಗ ಏಕೆ ಹಿಂದುಳಿಯಿತು? ಜಿಲ್ಲೆಯ ಸಮಗ್ರ ಅಭಿವೃದ್ಧಿ ಬದಲು ಕೇವಲ ತಮ್ಮ ಅಭಿವೃದ್ಧಿ ಮಾಡಿಕೊಂಡಿರುವುದೇ ಸಾಧನೆಯಾಗಿದೆ ಎಂದು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಶಿವರಾಜಸಿಂಗ್‌ ಚವ್ಹಾಣ ಟೀಕಿಸಿದರು.

ಮಂಗಳವಾರ ನಗರದ ಸೂಪರ್‌ ಮಾರ್ಕೆಟ್‌, ಗಣೇಶ ನಗರದಲ್ಲಿ ರೋಡ ಶೋ ನಡೆಸಿ ಮಾತನಾಡಿದ ಅವರು, ಕಲಬುರಗಿ ಸಮಗ್ರ ವಿಕಾಸ ಹಾಗೂ ಹೊಸ ಯೋಜನೆಗಳು ಬರುವಂತಾಗಲು ಈ ಸಲ ಬಿಜೆಪಿ ಅಭ್ಯರ್ಥಿ ಡಾ| ಉಮೇಶ ಜಾಧವ ಅವರನ್ನು ಗೆಲ್ಲಿಸುವಂತೆ ಮನವಿ ಮಾಡಿದರು. ಈ ಹಿಂದೆ ಯುಪಿಎ ಸರ್ಕಾರ ಇದ್ದಾಗ ಮುಂಬೈ ದಾಳಿಯಾದಾಗ ಉಗ್ರರ ವಿರುದ್ಧ ಏನೂ ಕ್ರಮ ಕೈಗೊಳ್ಳಲಿಲ್ಲ.

ಉಗ್ರರಿಗೆ ಬಿರಿಯಾನಿ ತಿನ್ನಿಸಿದ್ದೇ ಇವರ ಸಾಧನೆ. ಆದರೆ ಇವತ್ತು ಮೋದಿ ಸರ್ಕಾರ ಪುಲ್ವಾಮಾ ದಾಳಿ ಖಂಡಿಸಿ ಏರ್‌ ಸ್ಟ್ರೆಕ್‌ ಮಾಡಿ ಸುಮಾರು 400ಕ್ಕಿಂತ ಹೆಚ್ಚು ಉಗ್ರರಿಗೆ ತಕ್ಕಪಾಠ ಕಲಿಸಿದ್ದಾರೆ. ಇಡೀ ವಿಶ್ವವೇ ಮೆಚ್ಚುಗೆ ವ್ಯಕ್ತಪಡಿಸಿದರೆ ನಮ್ಮ ವಿರೋಧ ಪಕ್ಷಗಳು ಸಾಕ್ಷಿ ಕೇಳುತ್ತಿರುವುದು ದುರಂತ ಎಂದು ವಾಗ್ಧಾಳಿ ನಡೆಸಿದರು.

ಇನ್ನೂ ರಾಜ್ಯದ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಯಾವಾಗಲೂ ಅಳುತ್ತಾರೆ. ಇಂತಹ ಅಳುವ ಸಿಎಂನ್ನು ತಾವೆಂದೂ ನೋಡಿಲ್ಲ. ಅವರಿಗೆ ಏನಿದ್ದರೂ ರಾಜ್ಯದ ಹಿತಕ್ಕಿಂತ ತಮ್ಮ ಕುಟುಂಬವೇ ಹಿತವೆನಿಸುತ್ತಿದೆ ಎಂಬುದು ರಾಜ್ಯದ ಜನರಿಗೆ ಈಗಾಗಲೇ ಮನವರಿಕೆಯಾಗಿದೆ ಎಂದರು. ಮಹಾಘಟಬಂದನ್‌ ದಿನೇ-ದಿನೇ ಕುಸಿಯುತ್ತಿದೆ. ಯಾರು ಈ ದೇಶದ ಪ್ರಧಾನಿಯಾಗುತ್ತಾರೆಂದು ಗೊತ್ತಿಲ್ಲ.

ಮಾಯಾವತಿ, ಚಂದ್ರಬಾಬು ನಾಯ್ಡು, ದೇವೇಗೌಡ ಸೇರಿದಂತೆ ದಿನಕ್ಕೊಬ್ಬರು ಆಡಳಿತ ನಡೆಸಬಹುದು. ಆದರೆ ಕೇಂದ್ರದಲ್ಲಿ ಬಿಜೆಪಿ ಮತ್ತೂಮ್ಮೆ ಸುಭದ್ರ ಸರ್ಕಾರವಾಗಿ ಹೊರಹೊಮ್ಮಲಿದೆ. ಪ್ರಣಾಳಿಕೆ ದೇಶದ ಅಭಿವೃದ್ಧಿಪೂರಕವಾಗಿವೆ ಎಂದು ಹೇಳಿದರು.
ಲೋಕಸಭಾ ಅಭ್ಯರ್ಥಿ ಡಾ| ಉಮೇಶ ಜಾಧವ, ಮಾಜಿ ಸಚಿವ ಮಾಲೀಕಯ್ಯ ವಿ. ಗುತ್ತೇದಾರ, ಶಾಸಕರಾದ ದತ್ತಾತ್ರೇಯ ಪಾಟೀಲ ರೇವೂರ, ಬಿ.ಜಿ.ಪಾಟೀಲ, ಬಸವರಾಜ ಮತ್ತಿಮಡು, ವಿಧಾನ ಪರಿಷತ್‌ ಸದಸ್ಯ ಎನ್‌. ರವಿಕುಮಾರ, ಎಂಎಸ್‌ಐಎಲ್‌ ಮಾಜಿ ಅಧ್ಯಕ್ಷ ಡಾ| ವಿಕ್ರಂ ವೈಜನಾಥ ಪಾಟೀಲ ಮುಂತಾದವರಿದ್ದರು.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.