ಮೂಲಸೌಲಭ್ಯ ಕೊರತೆಯಿಂದ ಬಳಲುತ್ತಿದೆ ಭರತನೂರ


Team Udayavani, Nov 16, 2019, 10:45 AM IST

16-November-2

„ಭೀಮರಾಯ ಕುಡ್ಡಳ್ಳಿ
ಕಾಳಗಿ:
ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ತುಂಬೆಲ್ಲ ಹೊಂಡಗಳು, ಸ್ವಾಗತಿಸುವ ಬಯಲು ಶೌಚಾಲಯ, ರಸ್ತೆ ಮೇಲೆ ಹರಿಯುವ ಚರಂಡಿ ನೀರು, ಕುಡಿಯಲು ಶುದ್ಧ ನೀರಿನ ಕೊರತೆ ಸೇರಿದಂತೆ ಅನೇಕ ಮೂಲ ಸೌಕರ್ಯಗಳಿಂದ ವಂಚಿತವಾಗಿ ಸಮಸ್ಯೆಗಳ ಸುಳಿಯಲ್ಲಿ ಸಿಲುಕಿರುವ ಭರತನೂರ ಗ್ರಾಮವನ್ನು ಕೇಳುವರೇ ಇಲ್ಲದಂತಾಗಿದೆ.

ಕಾಳಗಿ ಜಿಲ್ಲಾ ಪಂಚಾಯತಿ, ರಾಜಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಭರತನೂರ ಗ್ರಾಮದಲ್ಲಿ ಸುಮಾರು 550 ಮನೆಗಳಿದ್ದು, 2000ಕ್ಕೂ ಹೆಚ್ಚಿನ ಜನಸಂಖ್ಯೆಯಿದೆ. ಇಬ್ಬರು ಗ್ರಾಮ ಪಂಚಾಯತಿ ಸದಸ್ಯರಿದ್ದಾರೆ. ಕಾಳಗಿ ಪಟ್ಟಣದಿಂದ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ 3ಕಿ.ಮೀ ರಸ್ತೆಯಲ್ಲಿ 2ಕಿ.ಮೀ ರಸ್ತೆಯಲ್ಲಿ ತಗ್ಗು ಗುಂಡಿಗಳು ಬಿದ್ದು, ಮಳೆ ನೀರು ತುಂಬಿಕೊಂಡಿದೆ. ಬೈಕ್‌ ಸವಾರರು ಪ್ರತಿದಿನ ರಸ್ತೆ ಮೇಲೆ ಹರಸಾಹಸ ಪಡುವಂತಾಗಿದೆ. ಗ್ರಾಮದಲ್ಲಿ ಸಾರ್ವಜನಿಕ ಮಹಿಳಾ ಶೌಚಾಲಯವಿಲ್ಲ. ಹೀಗಾಗಿ ರಸ್ತೆ ಬದಿಯಲ್ಲೇ ಪ್ರಕೃತಿ ಕರೆಗೆ ಓಗುಡುವಂತ ದಯನೀಯ ಸ್ಥಿತಿ ಇಲ್ಲಿದೆ.

ಗ್ರಾಮದಲ್ಲಿ ಚರಂಡಿ ಇಲ್ಲದೇ ಇರುವುದರಿಂದ ಮನೆಯ ಚರಂಡಿ ನೀರು ನೇರವಾಗಿ ರಸ್ತೆಗೆ ಹರಿದು, ರಸ್ತೆಯೆಲ್ಲ ಕೆಸರು ಗದ್ದೆಯಂತಾಗಿದೆ. ಸೊಳ್ಳೆಗಳು ಈ ಜಾಗವನ್ನೇ ತಮ್ಮ ಆವಾಸಸ್ಥಾನ ಮಾಡಿಕೊಂಡಿವೆ. ಇದರಿಂದಾಗಿ ಜನರು ರೋಗ ಹರಡುವ ಭೀತಿಯಲ್ಲಿದ್ದಾರೆ. ದಿನನಿತ್ಯ ಶಾಲೆಗೆ ಹೊಗುವ ಮಕ್ಕಳು, ವೃದ್ಧರು, ಮಹಿಳೆಯರು ಇದೇ ರಸ್ತೆಯಲ್ಲಿ ಓಡಾಡುತ್ತಿದ್ದಾರೆ. ಹಲವಾರು ಜನರು ಚರಂಡಿ ನೀರಿನಲ್ಲಿ ಬಿದ್ದು ಕೈ, ಕಾಲುಗಳಿಗೆ ಗಾಯ ಮಾಡಿಕೊಂಡಿದ್ದಾರೆ.

ನೀರುಪಯುಕ್ತ ನೀರಿನ ಟ್ಯಾಂಕ್‌: ಭರತನೂರ ಗ್ರಾಮದಲ್ಲಿ 2012-13ನೇ ಸಾಲಿನಲ್ಲಿ ಜಿ.ಪಂನ ನೀರು ಸರಬರಾಜು ಯೋಜನೆ ಅಡಿಯಲ್ಲಿ 16 ಲಕ್ಷ ರೂ. ವೆಚ್ಚದ 50 ಸಾವಿರ ಲೀಟರ್‌ ಸಾಮರ್ಥ್ಯವಿರುವ ನೀರಿನ ಟ್ಯಾಂಕ್‌ ನಿರ್ಮಿಸಲಾಗಿದೆ. ಇದು ಕಳಪೆ ಮಟ್ಟದಿಂದ ಕೂಡಿದ್ದು ತುಕ್ಕು ಹಿಡಿಯುತ್ತಿದೆ. ಆದರೂ ಇಲ್ಲಿಯ ವರೆಗೆ ಗ್ರಾಮದಲ್ಲಿ ಪೈಪ್‌ ಲೈನ್‌ ವ್ಯವಸ್ಥೆ ಮಾಡಿಲ್ಲ. ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸಿ ವರ್ಷಗಳೇ ಕಳೆದಿವೆ. ಆದರೂ ಪ್ರಾರಂಭವಾಗಿಲ್ಲ. ಪ್ರತ್ಯೇಕ ಬೋರವೆಲ್‌ ವ್ಯವಸ್ಥೆ ಇದ್ದರೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಶುದ್ಧ ಕುಡಿಯುವ ನೀರಿನ ಘಟಕ ಸಂಪೂರ್ಣ ಹಾಳು ಬಿದ್ದು, ಗಾಜುಗಳೆಲ್ಲ ಪುಡಿಪುಡಿಯಾಗಿವೆ. ಸುತ್ತಮುತ್ತ ಚರಂಡಿ ನೀರು ಸಂಗ್ರಹವಾಗಿ ದುರ್ನಾತ ಬೀರುತ್ತಿದೆ. ಗ್ರಾ.ಪಂಗೆ ಕೇಳಿದರೆ ಇದು ನಮಗೆ ಸಂಬಂಧ ಪಡುವುದಿಲ್ಲ ಎನ್ನುತ್ತಾರೆ.

ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ದಿನನಿತ್ಯ ಅಶುದ್ಧ ನೀರನ್ನೇ ಕುಡಿಯುವಂತಾಗಿದೆ ಎಂದು ಶಿವಾನಂದರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮದ ಹೊರವಲಯದ ನದಿ ದಂಡೆಯ ಕೊಳವೆ ಬಾವಿಯಿಂದ ಕುಡಿಯುವ ನೀರು ಸರಬರಾಜು ಮಾಡುತ್ತಿದ್ದಾರೆ. ನೀರಿನ ಪೈಪುಗಳು ಎಲ್ಲೆಂದರಲ್ಲಿ ಒಡೆದಿರುವುದರಿಂದ, ಚರಂಡಿ ನೀರು ಮಿಶ್ರಣವಾಗಿ ಸರಬರಾಜಾಗುತ್ತಿದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.