1.20 ಲಕ್ಷ ಹೆಕ್ಟೇರ್‌ ಬಿತ್ತನೆ ಗುರಿ

•ಕೃಷಿ ಇಲಾಖೆಯಿಂದ ಅಗತ್ಯ ಬೀಜ ದಾಸ್ತಾನು•ಅತಿ ಹೆಚ್ಚು ತೊಗರಿ ಬಿತ್ತನೆ ನಿರೀಕ್ಷೆ

Team Udayavani, Jun 18, 2019, 2:25 PM IST

kalburgi-tdy-3..

ಚಿತ್ತಾಪುರ: ಮುಂಗಾರು ಹಂಗಾಮು ಬಿತ್ತನೆಗೆ ಭೂಮಿ ಹದಗೊಳಿಸುತ್ತಿರುವ ರೈತ.

ಚಿತ್ತಾಪುರ: ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೃಷಿ ಇಲಾಖೆ 1.20 ಲಕ್ಷ ಹೆಕ್ಟೇರ್‌ ಭೂಮಿಯಲ್ಲಿ ಬಿತ್ತನೆ ಗುರಿ ಇಟ್ಟು ಕೊಂಡಿದೆ.

ತೊಗರಿ 89,300 ಹೆಕ್ಟೇರ್‌, ಹೆಸರು13,000 ಹೆಕ್ಟೇರ್‌, ಉದ್ದು 7,000 ಹೆಕ್ಟೇರ್‌, ಹತ್ತಿ 3,000 ಹೆಕ್ಟೇರ್‌, ಸಜ್ಜೆ 1,900 ಹೆಕ್ಟೇರ್‌, ಭತ್ತ 85 ಹೆಕ್ಟೇರ್‌, ಸೂರ್ಯಕಾಂತಿ 1,500 ಹೆಕ್ಟೇರ್‌, ಔಡಲ 15 ಹೆಕ್ಟೇರ್‌, ಸೋಯಾಬೀನ್‌1,800 ಹೆಕ್ಟೇರ್‌, ಎಳ್ಳು 1,000 ಹೆಕ್ಟೇರ್‌ ಬಿತ್ತನೆಯಾಗುವ ಸಾಧ್ಯತೆಯಿದೆ.

ಕೃಷಿ ಇಲಾಖೆ ಅಗತ್ಯ ಬೀಜ ದಾಸ್ತಾನು ಮಾಡಿಕೊಂಡಿದೆ. ಬಿತ್ತನೆಗಾಗಿ ರೈತರು ಮಳೆ ನಿರೀಕ್ಷೆಯಲ್ಲಿದ್ದಾರೆ.

ಕಳೆದ ವರ್ಷ ಮಳೆ ಅಭಾವದಿಂದ ಹತ್ತಿ ಬಿತ್ತನೆಯಲ್ಲಿ ಹಿನ್ನಡೆಯಾಗಿತ್ತು. ಕಳೆದ ವರ್ಷ 91 ಸಾವಿರ ಹೆಕ್ಟೇರ್‌ ಭೂಮಿಯಲ್ಲಿ 85 ಹೆಕ್ಟೇರ್‌ನಷ್ಟು ಭತ್ತ, 1900 ಹೆಕ್ಟೇರ್‌ ಸಜ್ಜೆ, 13000 ಹೆಕ್ಟೇರ್‌ ಹೆಸರು, 72800 ಹೆಕ್ಟೇರ್‌ ತೊಗರಿ, 7000 ಹೆಕ್ಟೇರ್‌ ಉದ್ದು, 1500 ಹೆಕ್ಟೇರ್‌ ಸೂರ್ಯಕಾಂತಿ, 30 ಹೆಕ್ಟೇರ್‌ ನವಣೆ ಹಾಗೂ 15 ಹೆಕ್ಟೇರ್‌ ಔಡಲ ಬಿತ್ತನೆ ಮಾಡಲಾಗಿತ್ತು. ಆದರೆ ಪ್ರಸಕ್ತ ವರ್ಷದ ಮುಂಗಾರಿನಲ್ಲಿ ಹೆಸರು, ಉದ್ದು ಬಿತ್ತನೆ ಹೆಚ್ಚಳವಾಗುವ ಸಾಧ್ಯತೆ ಇದೆ.

130 ಕ್ವಿಂಟಲ್ ತೊಗರಿ ಬೀಜ, 04 ತಳಿ ಭತ್ತವನ್ನು ರಾಷ್ಟ್ರೀಯ ಮತ್ತು ರಾಜ್ಯ ಬೀಜ ನಿಗಮದಿಂದ ಸಂಗ್ರಹಿಸಿದೆ. 108 ಕ್ವಿಂಟಲ್ ಟಿಎಸ್‌3ಆರ್‌ ತಳಿ ತೊಗರಿ, 30 ಕ್ವಿಂಟಲ್ ಜಿಆರ್‌ಬಿ 811 ತಳಿ ತೊಗರಿ, 80 ಬಿಜಿಎಸ್‌ ತಳಿ ಹೆಸರು, 20 ಕ್ವಿಂಟಲ್ ಸಜ್ಜೆ, 10 ಕ್ವಿಂಟಲ್ ಸೂರ್ಯಕಾಂತಿ, 200 ಕ್ವೀಂಟಲ್ ಸೋಯಾಬಿನ್‌, 30 ಕ್ವಿಂಟಲ್ ಉದ್ದು, 30 ಕ್ವಿಂಟಲ್ ಭತ್ತವನ್ನು ಈಗಾಗಲೇ ಆರ್‌ಎಸ್‌ಕೆಗಳಲ್ಲಿ ಸಂಗ್ರಹಿಸಿ ರೈತರಿಗೆ ಸಹಾಯಧನದಲ್ಲಿ ವಿತರಿಸಲಾಗುತ್ತಿದೆ. ಚಿತ್ತಾಪುರ, ಮಾಡಬೂಳ, ನಾಲವಾರ, ಶಹಾಬಾದ, ಕಾಳಗಿ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜಗಳ ದಾಸ್ತಾನು ಮಾಡಲಾಗಿದೆ. ಸರ್ಕಾರ ಅನುಮೂದಿಸಿದ ಸಂಸ್ಥೆಗಳಿಂದ ಬೀಜ ಪಡೆದು ರೈತರಿಗೆ ವಿತರಿಸಲಾಗುತ್ತಿದೆ.

ಪ್ರಸಕ್ತ ವರ್ಷ 85 ಹೆಕ್ಟೇರ್‌ನಲ್ಲಿ ಭತ್ತವನ್ನು ನೇರ ಕೂರಿಗೆ ಬಿತ್ತನೆ ಗುರಿ ಹೊಂದಲಾಗಿದೆ. ನೀರಾವರಿಯಾಶ್ರಿತ ಪ್ರದೇಶದಲ್ಲಿ ನೇರ ಕೂರಿಗೆ ಬಿತ್ತನೆಗೆ ಮುಂದಾಗುವುದು ಸೂಕ್ತ. ರೈತರು ರಾಸಾಯನಿಕ ಗೊಬ್ಬರಕ್ಕೆ ಹೆಚ್ಚು ಮೊರೆ ಹೋಗದೆ ಹಸಿರೆಲೆ ಹಾಗೂ ಸಾವಯುವ ಗೊಬ್ಬರ ಬಳಸಬೇಕು. ಈಗಾಗಲೇ ತೊಗರಿಯಲ್ಲಿ ಅಂತರ ಬೆಳೆಯಾಗಿ ತೃಣಧಾನ್ಯ ಬೆಳೆಯಲು ಜಾಗೃತಿ ಮೂಡಿಸಲಾಗುತ್ತಿದೆ. ಇಳುವರಿ ಹೆಚ್ಚಿನ ಪ್ರಮಾಣದಲ್ಲಿ ಪಡೆಯಬಹುದು. ಹೋಬಳಿ ಮಟ್ಟದಿಂದ ಕೃಷಿ ಅಭಿಯಾನ ಕೈಗೊಂಡು ರೈತರು ತೊಗರಿ ಬಿತ್ತನೆ ಬದಲಿಗೆ ಕಾಳು ಊರಲು ಪ್ರೋತ್ಸಾಹ, ಬಿಟಿ ಹತ್ತಿಯಲ್ಲಿ ಗುಲಾಬಿ ಕಾಯಿಕೊರಕ ತಡೆಯಲು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ತಿಳಿವಳಿಕೆ ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ಕೃಷಿ ಇಲಾಖೆ ಮಾಹಿತಿ ನೀಡಿದೆ.

ಪ್ರಸಕ್ತ ವರ್ಷ ತೊಗರಿ ಕೈಗಾರು ಬಿತ್ತನೆ ಪದ್ಧತಿಗೆ ರೈತರು ಮುಂದಾಗಬೇಕು. ತೊಗರಿ ಬಿತ್ತನೆಗಿಂತ ಮೊದಲು ರೈತ ಕೇಂದ್ರ ಸಂಪರ್ಕ ಕೇಂದ್ರಗಳಿಂದ ಬೀಜದ ಜತಗೆ ಟ್ರೈಕೋಡರ್ಮಾ ಪಡೆದು ಬೀಜೋಪಚಾರ ಮಾಡಿ ಬಿತ್ತಬೇಕು. ತೊಗರಿ ಕಾಯಿ ಕೊರಕ ಹುಳದ ಹತೋಟಿಗೆ ಸೂಕ್ತ ಕ್ರಮ ಅನುಸರಿಸುವುದರ ಜತೆಗೆ ತೃಣಧಾನ್ಯ ಬೆಳೆಯಬೇಕು. •ಎಸ್‌.ಎಚ್. ಗಡಗಿಮನಿ, ಸಹಾಯಕ ಕೃಷಿ ನಿರ್ದೇಶಕ.
•ಎಂ.ಡಿ ಮಶಾಖ್‌

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.