100 ಕೋಟಿ ಜನರಿಗೆ ಲಭಿಸಿದೆ ಲಸಿಕೆ ಲಾಭ
Team Udayavani, Oct 22, 2021, 10:54 AM IST
ಚಿಂಚೋಳಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಕೊರೊನಾಕ್ಕೆ ಲಸಿಕೆ ಕಂಡು ಹಿಡಿಯಲು ವಿಜ್ಞಾನಿಗಳಿಗೆ ಪ್ರೇರಣೆ ನೀಡಿದ್ದರಿಂದ 100 ಕೋಟಿ ಜನರಿಗೆ ಕೋವಿಡ್ ಲಸಿಕೆ ಲಭಿಸಿದೆ ಎಂದು ತಾಪಂ ಇಒ ಅನಿಲಕುಮಾರ ರಾಠೊಡ ಹೇಳಿದರು.
ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಗುರುವಾರ ಏರ್ಪಡಿಸಿದ್ದ ವೈದ್ಯರ ತಂಡದ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬೇರೆ ಕಡೆ ಕೆಲಸ ಅರಸಿ ಗುಳೆ ಹೋಗಿದ್ದ ಕಾರ್ಮಿಕರು ಮರಳಿ ತಮ್ಮ ಊರುಗಳಿಗೆ ಬಂದ ಸಂದರ್ಭದಲ್ಲಿ ಅವರಿಗೆ ಕ್ಯಾರಂಟೈನ್ ಮಾಡಲು ಸಮಾಜ ಕಲ್ಯಾಣ ಮತ್ತು ಬಿಸಿಎಂ ವಸತಿ ನಿಲಯದಲ್ಲಿ ವ್ಯವಸ್ಥೆ ಮಾಡಲಾಗಿತ್ತು. ತಾಲೂಕಿನ ಸಮಗ್ರ ಇಲಾಖೆಗಳ ಹಿರಿಯ ಅಧಿಕಾರಿ ಮತ್ತು ಸಿಬ್ಬಂದಿ, ಆಶಾ ಮತ್ತು ಅಂಗನವಾಡಿ, ಆರೋಗ್ಯ ಸಿಬ್ಬಂದಿ ಪರಿಶ್ರಮದಿಂದ ಸಾಧನೆ ಮಾಡಲಾಗಿದೆ ಎಂದರು.
ಇದನ್ನೂ ಓದಿ: ಆಸ್ಪತ್ರೆಗೆ 50ಲಕ್ಷ ಮೌಲ್ಯದ ಉಪಕರಣ ವಿತರಣೆ
ತಾಲೂಕು ಆರೋಗ್ಯಾಧಿಕಾರಿ ಮಹ್ಮದ್ ಗಫಾರ ಅಹಮೆದ್ ಮಾತನಾಡಿ, ದೇಶದಲ್ಲಿ ವಿಜ್ಞಾನಿಗಳು 3ನೇ ಅಲೆ ಹಬ್ಬಲಿದೆ ಎಂದು ಎಚ್ಚರಿಕೆ ನೀಡಿದ್ದರು. ಕೋವಿಡ್ ಲಸಿಕೆ ನೀಡಿರುವುದರಿಂದ ಅದನ್ನು ಹತೋಟಿಗೆ ತರಲಾಗಿದೆ. ಲಸಿಕೆ ನೀಡುವಲ್ಲಿ ಜಿಲ್ಲೆಯಲ್ಲಿ ತಾಲೂಕು 2ನೇ ಸ್ಥಾನ ಪಡೆದಿದೆ. ಒಟ್ಟು 1,84,050 ಜನರಿಗೆ ಮೊದಲ ಹಂತದ ಲಸಿಕೆ ನೀಡಲಾಗಿದ್ದು, ಶೇ. 71ರಷ್ಟು ಸಾಧನೆ ಮಾಡಲಾಗಿದೆ. ಎರಡನೇ ಡೋಸ್ 56,140 ಜನರಿಗೆ ನೀಡಲಾಗಿದ್ದು, ಒಟ್ಟು ಶೇ. 43ರಷ್ಟು ಸಾಧನೆ ಮಾಡಲಾಗಿದೆ ಎಂದು ಹೇಳಿದರು.
ತಹಶೀಲ್ದಾರ್ ಅಂಜುಮ ತಬ್ಸುಮ್ ಮಾತನಾಡಿ, ಜನರ ಮನವೊಲಿಸಿ ಲಸಿಕೆ ನೀಡಿ ಉತ್ತಮ ಸಾಧನೆ ಮಾಡಿರುವುದಕ್ಕೆ ಅಧಿಕಾರಿಗಳನ್ನು ಅಭಿನಂದಿಸಿದರು. ಸಿಡಿಪಿಒ ಗುರುಪ್ರಸಾದ, ಹಣಮಂತ ಭೋವಿ, ಪುರಸಭೆ ಮುಖ್ಯಾಧಿಕಾರಿ ಕಾಶಿನಾಥ ಧನ್ನಿ, ಇಂಜಿನಿಯರ್ ದೇವೇಂದ್ರಪ್ಪ ಕೋರವಾರ, ಮಂಜುನಾಥ ಹಾಗೂ ಆರೋಗ್ಯ ಸಿಬ್ಬಂದಿ ಭಾಗವಹಿಸಿದ್ದರು. ಆಸ್ಪತ್ರೆ ಆಡಳಿತಾಧಿಕಾರಿ ಡಾ| ಸಂತೋಷ ಪಾಟೀಲ ಸ್ವಾಗತಿಸಿದರು, ಸುಧಾ ಕುಲಕರ್ಣಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್
MUST WATCH
ಹೊಸ ಸೇರ್ಪಡೆ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ