13 ವಿದ್ಯಾರ್ಥಿಗಳು ಕ್ಯಾಂಪಸ್ ಸಂದರ್ಶನಕ್ಕೆ ಆಯ್ಕೆ
Team Udayavani, Dec 2, 2018, 11:09 AM IST
ಕಲಬುರಗಿ: ಸಾಫ್ಟವೇರ್ ಕ್ಷೇತ್ರದ ಪ್ರಮುಖ ಕಂಪನಿ ಎಂಫ್ ಸಿಸ್ ಶರಣಬಸವ ವಿವಿ ಆವರಣದಲ್ಲಿ ನಡೆಸಿದ ಕ್ಯಾಂಪಸ್
ಸಂದರ್ಶನದಲ್ಲಿ ನಗರದ ಅಪ್ಪಾ ಇನ್ಸಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಹಾಗೂ ಗೋದುತಾಯಿ ಮಹಿಳಾ ಇಂಜಿನಿಯರಿಂಗ್ ಕಾಲೇಜಿನ ಅಂತಿಮ ವರ್ಷದ 13 ವಿದ್ಯಾರ್ಥಿಗಳು ಕ್ಯಾಂಪಸ್ ಸಂದರ್ಶನದಲ್ಲಿ ಅಸೋಷಿಯೇಟ್ ಸಾಫ್ಟವೇರ್ ಇಂಜಿನಿಯರ್ ಹುದ್ದೆಗೆ ಆಯ್ಕೆಯಾಗಿದ್ದಾರೆ. ಇದರಲ್ಲಿ ಒಂಭತ್ತು ಬಾಲಕಿಯರು ಹಾಗೂ ನಾಲ್ವರು ಬಾಲಕರು ಸೇರಿದ್ದಾರೆ.
ಆಯ್ಕೆಯಾದ ವಿದ್ಯಾರ್ಥಿಗಳು ಪ್ರತಿ ವರ್ಷ ಆರಂಭಿಕ 2.80 ಲಕ್ಷ ರೂ. ವೇತನ ಪಡೆಯಲಿದ್ದಾರೆ. ಬೆಂಗಳೂರಿನ ಎಂಫ್ಸಿಸ್ ಕಂಪನಿ ತಂಡವು ನಡೆಸಿದ ಕ್ಯಾಂಪಸ್ ಸಂದರ್ಶನದಲ್ಲಿ ಅಪ್ಪಾ ಇನ್ಸಿಟ್ಯೂಟ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ, ಗೋದುತಾಯಿ ಮಹಿಳಾ ಇಂಜಿನಿಯರಿಂಗ್ ಕಾಲೇಜು, ಬೀದರನ ಲಿಂಗರಾಜಪ್ಪ ಇಂಜಿನಿಯರಿಂಗ್ ಕಾಲೇಜು, ಯಾದಗಿರಿ ಜಿಲ್ಲೆಯ ಸುರಪುರದ ವೀರಪ್ಪ
ನಿಷ್ಟಿ ಇಂಜಿನಿಯರಿಂಗ್ ಕಾಲೇಜಿನ ಮತ್ತು ದೊಡ್ಡಪ್ಪ ಅಪ್ಪ ಇನ್ಸಟ್ಯೂಟ್ ಆಫ್ ಮಾಸ್ಟರ್ ಆಫ್ ಕಂಪ್ಯೂಟರ್ ಅಫ್ಲಿಕೇಷನ್ನ 324ಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳು ಕ್ಯಾಂಪಸ್ ಸಂದರ್ಶನದಲ್ಲಿ ಭಾಗವಹಿಸಿದ್ದರು.
ಆಯ್ಕೆಯಾದ ವಿದ್ಯಾರ್ಥಿಗಳು ಬೆಂಗಳೂರಿನ ಎಂಫಸಿಸ್ ಕಚೇರಿಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ. ಏಳನೇ ಸೆಮಿಸ್ಟರನ ವಿದ್ಯಾರ್ಥಿಗಳು ಯಶಸ್ವಿಯಾಗಿ ಕ್ಯಾಂಪನ್ ಸಂದರ್ಶನ ಎದುರಿಸಿದ್ದು ಅದರಲ್ಲಿ ಅಪ್ಪಾ ಇನ್ಸಿಟ್ಯೂಟ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿಯ ಕಂಪ್ಯೂಟರ್ ಸೈನ್ಸ್ ವಿಭಾಗದ ಮೇಘನಾ ಬಂಡಿ, ಮಹಿಮಾ ಚಿಲ್ಲಾಪುರ, ಪ್ರೇಮಸಾಗರ, ತೋಟೆಂದ್ರ ಮಠಪತಿ, ಶ್ರದ್ಧಾ ನೀಲಶೆಟ್ಟಿ, ಅಕ್ಷತಾ, ಅಂಜಲಿ ವಿಜಾಪುರೆ, ಸೌಮ್ಯ ರಾಜಗಿರಿ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ವಿಭಾಗದ ಸರ್ವೋತ್ತಮ ಕುಲಕರ್ಣಿ, ರಕ್ಷಿತ, ಸಭಾ, ಕೃಷ್ಣ ಮಹೇಂದ್ರಕರ್, ಗೋದುತಾಯಿ ಮಹಿಳಾ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಮೀನಾಕುಮಾರಿ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಹಾಗೂ ಕಾಲೇಜಿಗೆ ಕೀರ್ತಿ ತರಲು ಕಾರಣರಾದ
ಬೋಧಕ ಸಿಬ್ಬಂದಿಗಳನ್ನು ಶರಣಬಸವ ವಿಶ್ವವಿದ್ಯಾಲಯದ ಕುಲಾ ಧಿಪತಿ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಪರಮ ಪೂಜ್ಯ ಡಾ| ಶರಣಬಸವಪ್ಪ ಅಪ್ಪ ಹರ್ಷ ವ್ಯಕ್ತಪಡಿಸಿದ್ದಾರೆ.
ಕುಲಪತಿ ಡಾ| ನಿರಂಜನ ನಿಷ್ಟಿ, ಸಮ ಕುಲಪತಿ ಡಾ| ವಿ.ಡಿ. ಮೈತ್ರಿ, ಕುಲಸಚಿವ ಡಾ| ಅನಿಲಕುಮಾರ ಬಿಡವೆ, ಡೀನ್ ಡಾ| ಲಿಂಗರಾಜ ಶಾಸ್ತ್ರೀ, ಗೋದುತಾಯಿ ಮಹಿಳಾ ಇಂಜಿನಿಯರಿಂಗ್ ಕಾಲೇಜಿನ ಡೀನ್ ಪ್ರೊ| ಲಕ್ಷ್ಮೀ ಮಾಕಾ, ಪ್ಲೇಸ್ಮೆಂಟ್ ಸೆಲನ ಶಿವುಕುಮಾರ ಕಾಗಿ ವಿದ್ಯಾರ್ಥಿಗಳ ಸಾಧನೆಗೆ ಹರ್ಷ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್ಡಿಐಎ ಧ್ಯೇಯ: ಜೆ.ಪಿ. ನಡ್ಡಾ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ