ನಗರ ಸೌಂದರ್ಯಕ್ಕೆ 1.50 ಕೋಟಿ ಅನುದಾನ ಬಿಡುಗಡೆ
Team Udayavani, Mar 3, 2018, 10:45 AM IST
ಜೇವರ್ಗಿ: ಪಟ್ಟಣದಲ್ಲಿ ಬೀದಿದೀಪ, ರಸ್ತೆ ವಿಭಜಕ ಹಾಗೂ ಸೌಂದರ್ಯಕ್ಕೆ ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ಧಿ ನಿಗಮದ ವತಿಯಿಂದ 1.50 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ಡಾ| ಅಜಯಸಿಂಗ್ ಹೇಳಿದರು.
ಪಟ್ಟಣದ ನರಿಬೋಳ ರಸ್ತೆಯಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ವಿಜಯಪುರ ಕ್ರಾಸ್ನಿಂದ ನೂರಂದೇಶ್ವರ ಕಾಲೇಜುವರೆಗೆ 50 ಲಕ್ಷ ರೂ. ವೆಚ್ಚದ ರಸ್ತೆ ನಿರ್ಮಾಣ ಹಾಗೂ 1.50 ಕೋಟಿ ರೂ. ವೆಚ್ಚದ ಬೀದಿದೀಪ ಅಳವಡಿಕೆ ಕಾಮಗಾರಿಗೆ ಅಡಿಗಲ್ಲು ನೆರವೇರಿಸಿ ಅವರು ಮಾತನಾಡಿದರು.
ಪಟ್ಟಣ ಪಂಚಾಯಿತಿಯಿಂದ ಪುರಸಭೆಯಾಗಿ ಮೇಲ್ದರ್ಜೆಗೇರಿದ ನಂತರ ಜೇವರ್ಗಿಗೆ ಕೋಟ್ಯಂತರ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಧರ್ಮಸಿಂಗ್ ಫೌಂಡೇಶನ್ ವತಿಯಿಂದ ರಸ್ತೆ ಮಧ್ಯದಲ್ಲಿ ಗಿಡ ನೆಡಲಾಗಿದೆ. ಪ್ರತಿ ವಾರ್ಡ್ಗಳಲ್ಲಿ ಸಿಸಿ ರಸ್ತೆ, ಚರಂಡಿ, ಸಾಮೂಹಿಕ ಶೌಚಾಲಯ, ಬೀದಿ ದೀಪ ಸೇರಿದಂತೆ ಮೂಲಭೂತ ಸೌಕರ್ಯಗಳಿಗೆ ಸಾಕಷ್ಟು ಅನುದಾನ ನೀಡಿ ಕಾಮಗಾರಿಗೆ
ಈಗಾಗಲೇ ಚಾಲನೆ ನೀಡಲಾಗಿದ್ದು, ಗುಣಮಟ್ಟದ ಹಾಗೂ ಕಳಪೆಯಾಗದಂತೆ ಅಧಿಕಾರಿಗಳು ಎಚ್ಚರವಹಿಸಬೇಕು ಎಂದು ಸೂಚಿಸಿದರು.
ಪುರಸಭೆ ಅಧ್ಯಕ್ಷೆ ಶರಣಮ್ಮ ಯಶವಂತ್ರಾಯ ಕೋಳಕೂರ, ಮುಖಂಡರಾದ ರಾಜಶೇಖರ ಸೀರಿ, ನೀಲಕಂಠ ಅವುಂಟಿ, ಗುರುಲಿಂಗಯ್ಯ ಯನಗುಂಟಿ, ರಹೇಮಾನ ಪಟೇಲ, ಕಾಶಿರಾಯಗೌಡ ಯಲಗೋಡ, ಮಹಿಮೂದ್ ನೂರಿ, ರೌಫ್ ಹವಾಲ್ದಾರ್, ರಾಯಪ್ಪ ಬಾರಿಗಿಡ, ಮಲ್ಲಯ್ಯ ಸುಬೇದಾರ, ರುಕುಂ ಪಟೇಲ್, ಸುದರ್ಶನ ಅಲಬಾಳ, ಸುರೆಂದ್ರ ವಕೀಲ, ಮರೆಪ್ಪ ಸರಡಗಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ