17.58 ಲಕ್ಷ ಉಳಿತಾಯ ಬಜೆಟ್
Team Udayavani, Feb 27, 2018, 10:35 AM IST
ಚಿತ್ತಾಪುರ: ಪಟ್ಟಣದ ಪುರಸಭೆಯ 2018-19ನೇ ಸಾಲಿನ ಬಜೆಟ್ ಮಂಡನೆಯಾಗಿದ್ದು, 17.58 ಲಕ್ಷ ರೂ. ಉಳಿತಾಯ ಬಜೆಟ್ ಮಂಡಿಸಲಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಂಜುನಾಥರೆಡ್ಡಿ ಘೋಷಿಸಿದರು.
ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಸೋಮವಾರ ನಡೆದ 2018-19ನೇ ಸಾಲಿನ ಬಜೆಟ್ ಸಭೆಯಲ್ಲಿ ಮಾತನಾಡಿದ ಅವರು, ವಿವಿಧ ಮೂಲಗಳಿಂದ 16.26 ಕೋಟಿ ರೂಪಾಯಿ ರಾಜಸ್ವ ಸ್ವೀಕೃತಿ ಗುರಿ ಹೊಂದಲಾಗಿದೆ. 16.24 ಕೋಟಿ ರೂ. ಖರ್ಚು ಮಾಡಲು ಅಂದಾಜಿಸಲಾಗಿದೆ. ಇದರಲ್ಲಿ 2.60 ಲಕ್ಷ ರೂ. ಉಳಿತಾಯವಾಗಲಿದೆ ಎಂದು ಹೇಳಿದರು.
ವಿವಿಧ ಬಂಡವಾಳ ಮೂಲಕ 28.45 ಕೋಟಿ ರೂ. ಜಮಾ ಆಗಲಿದೆ. 28.31 ಕೋಟಿ ರೂಪಾಯಿ ಖರ್ಚಾಗುವ ನಿರೀಕ್ಷೆಯಿದೆ. ಇದರಲ್ಲಿ 13.50 ಲಕ್ಷ ರೂ. ಉಳಿತಾಯವಾಗಲಿದೆ.
ಅಸಾಧಾರಣದಿಂದ 24.92 ಕೋಟಿ. ರೂ. ಜಮಾ ಆಗುವ ನಿರೀಕ್ಷೆಯಿದೆ. ಇದರಲ್ಲಿ 24.90 ಕೋಟಿ ರೂ. ಖರ್ಚಾಗುವ ನಿರೀಕ್ಷೆಯಿದೆ. 1.48 ಲಕ್ಷ ರೂ. ಉಳಿತಾಯವಾಗಲಿದೆ. ಆಸ್ತಿ ತೆರಿಗೆ, ನೀರಿನ ತೆರಿಗೆ, 14ನೇ ಹಣಕಾಸು ಹಾಗೂ ಎಸ್ಎಫ್ ಸಿಯಿಂದ ಹೆಚ್ಚು ಅನುದಾನ ಬರುವುದೆಂದು ನಿರೀಕ್ಷಿಸಲಾಗಿದೆ ಎಂದು ಅವರು ಹೇಳಿದರು.
ಪುರಸಭೆ ಅಧ್ಯಕ್ಷೆ ಅನ್ನಪೂರ್ಣ ಹೋತಿನಮಡಿ, ಉಪಾಧ್ಯಕ್ಷ ಮಹ್ಮದ ರಸೂಲ್ ಮುಸ್ತಫಾ, ಸದಸ್ಯರಾದ ಶಿವಕಾಂತ ಬೆಣ್ಣೂರಕರ್, ವಿನೋದ ಗುತ್ತೇದಾರ, ಶಿವಾಜಿ ಕಾಶಿ, ಸೈಯದ್ ಜಫರುಲ್ ಹಸನ್, ಮಲ್ಲಿಕಾರ್ಜುನ ಪೂಜಾರಿ, ಸಿದ್ರಾಮೇಶ್ವರ ಸಜ್ಜನಶೆಟ್ಟಿ, ನಾಗರಾಜ ಕಡಬೂರ್, ಸುರೇಶ ಬೆನಕನಳ್ಳಿ, ದಶರಥ ದೊಡ್ಮನಿ, ಹೀರು ರಾಠೊಡ, ಮಹಾಲಕ್ಷ್ಮೀ ಬಳಿಚಕ್ರ, ಜಗದೇವಿ ಮುಕ್ತೆದಾರ, ವನಮಾಲಮ್ಮ ಪಾಲಪ್, ಅನ್ನಪೂರ್ಣ ಕಲ್ಲಕ್ಕ, ಕಮಲಾಬಾಯಿ ಟೋಕಾಪುರ, ಶಾಂತಾಬಾಯಿ ಬಮ್ಮನಳ್ಳಿ, ರಹೀಮತ ಬೇಗಂ, ಲೆಕ್ಕಾಧಿಕಾರಿ ಕ್ರಾಂತಿದೇವಿ, ಮುತ್ತಣ್ಣ ಭಂಡಾರಿ, ವೆಂಕಟೇಶ ತೇಲಂಗ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
MUST WATCH
ಹೊಸ ಸೇರ್ಪಡೆ
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ