![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-415x276.jpg)
5ದಿನಗಳಲ್ಲಿ 2386 ಮಾನವ ದಿನ ಸೃಷ್ಟಿ
Team Udayavani, Feb 18, 2017, 3:21 PM IST
![gul1.jpg](https://www.udayavani.com/wp-content/uploads/2017/02/18/gul1.jpg)
ಕಲಬುರಗಿ: ಇದೊಂದು ಹೊಸ ನಡೆ, ಬರದ ಅಬ್ಬರ ಕಡಿಮೆ ಮಾಡಲು ಜಿಲ್ಲಾ ಪಂಚಾಯಿತಿ ಪುನಃ ಕೆರೆಗಳಿಗೆ ಹೆಜ್ಜೆ ಇಟ್ಟಿದೆ. ಕೇವಲ ಐದು ದಿನಗಳಲ್ಲಿ 2386 ಮಾನವ ದಿನಗಳನ್ನು ಸೃಷ್ಟಿ ಮಾಡಲಾಗಿದೆ. ಈ ಮುಖೇನ ಗುಳೆ ಹೋಗುವುದನ್ನು ತಪ್ಪಿಸುವಲ್ಲಿ ಜಿಪಂ ಸಿಇಒ ಅನಿರುದ್ಧ ಅವರ ಉಪಾಯ ಫಲಿಸಿದೆ.
ಕಳೆದ ಎರಡು ವರ್ಷಗಳಿಂದ ಜಿಲ್ಲೆಯಲ್ಲಿನ ಕೆರೆ ಹೂಳೆತ್ತುವುದು ಹಾಗೂ ಅರಣ್ಯದ ಬದುಗಳಲ್ಲಿ ಕೆಲಸ ಮಾಡುವ ಮೂಲಕ ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಸೈಯದ್ ಚಿಂಚೋಳಿ ಕೆರೆಯಲ್ಲಿ ಹೂಳೆತ್ತುವ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಈ ಕೆರೆಯಲ್ಲಿ ಫೆ. 6 ರಿಂದ ಕೆಲಸ ಆರಂಭಿಸಲಾಗಿದೆ.
ದಿನೇ ದಿನೇ ಜನರು ಕೂಲಿಗಾಗಿ ಹೆಚ್ಚು ಹೆಚ್ಚು ಹೆಸರುಗಳನ್ನು ನೋಂದಾಯಿಸಿಕೊಳ್ಳುತ್ತಿದ್ದಾರೆ. ಅಂತಿಮವಾಗಿ 514 ಜನರು ಕೂಲಿ ಕೆಲಸಕ್ಕಾಗಿ ಹೆಸರು ನೋಂದಾಯಿಸಿಕೊಂಡಿದ್ದಾರೆ. ಇವರಲ್ಲಿ 300 ಹೆಣ್ಣು ಮತ್ತು 200ಕ್ಕೂ ಹೆಚ್ಚು ಗಂಡು ಕೂಲಿಯಾಳುಗಳು ಕೆಲಸ ಮಾಡುತ್ತಿದ್ದಾರೆ. ಕೂಲಿ ಪಾವತಿಯಲ್ಲೂ ಯಾವುದೇ ತೊಂದರೆಯಾಗಿಲ್ಲ.
ಉತ್ತಮವಾಗಿ ಕೆಲಸ ನಡೆಯುತ್ತಿದೆ. ಇದರಿಂದ ನಮಗೆ ಅನುಕೂಲವಾಗಿದೆ ಎಂದು ತಾಜ್ಸುಲ್ತಾನಪುರ ಭೀಮವ್ವ ಹಾಗೂ ಮಕಬೂಲ್ “ಉದಯವಾಣಿ”ಗೆ ತಿಳಿಸಿದರು. ಕಳೆದ ವರ್ಷ ಇದೇ ಸೈಯದ್ ಚಿಂಚೋಳಿ ಕೆರೆಯಲ್ಲಿ ಹೂಳೆತ್ತುವ ಕೆಲಸ ಆರಂಭಿಸುವ ಮೂಲಕ ಗುಳೆ ಹೋಗುವುದನ್ನು ತಡೆಯಲಾಗಿತ್ತು.
ಆದರೆ, ಈ ವರ್ಷ ಬೇಸಿಗೆ ಆರಂಭಕ್ಕೂ ಮುನ್ನವೇ ಜಿಪಂ ಸಿಇಒ ಅನಿರುದ್ಧ ಶ್ರವಣ ಕೆಲಸ ಆರಂಭಿಸಿದ್ದಾರೆ. ಇದಕ್ಕೆ ವ್ಯಾಪಕ ಬೆಂಬಲವೂ ಸಿಕ್ಕಿದೆ. ಒಟ್ಟು 514 ಜನ ಶುಕ್ರವಾರ ಕೆಲಸ ಮಾಡಿದರು. ಇದರಿಂದ ಕಳೆದ ಐದು ದಿನಗಳಲ್ಲಿ ಒಟ್ಟು 2386 ಮಾನವ ದಿನಗಳ ಸೃಷ್ಟಿಯಾಗಿದೆ. ಇದರಿಂದ ಕೂಲಿ ಕಾರ್ಮಿಕರಿಗೆ ಕೆಲಸ ಸಿಕ್ಕಂತಾಗಿದೆ.
ಅರಣ್ಯ ಮತ್ತು ಕೆರೆ ಹೂಳೆತ್ತುವ ಕಾಮಗಾರಿಗಳಲ್ಲಿ ಈಗಾಗಲೇ 100 ದಿನಗಳ ಕೆಲಸವನ್ನು ಸೃಷ್ಟಿ ಮಾಡಲಾಗಿದೆ. ಒಟ್ಟು 150 ದಿನಗಳ ಕೆಲಸದ ವಾಗ್ಧಾನವನ್ನು ಪೂರ್ಣ ಮಾಡಿ ಹೆಚ್ಚುವರಿ ಮಾನವ ದಿನಗಳ ಸೃಷ್ಟಿ ಮಾಡುವ ಮೂಲಕ ಜನರಿಗೆ ಕೆಲಸ ನೀಡಿ ಗುಳೇ ಹೋಗುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಈ ಕೆಲಸ ಭಾರಿ ಪ್ರಶಂಸೆಗೆ ಕಾರಣವಾಗಿದೆ.
* ಸೂರ್ಯಕಾಂತ ಎಂ.ಜಮಾದಾರ
ಟಾಪ್ ನ್ಯೂಸ್
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-415x276.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![13-sedam](https://www.udayavani.com/wp-content/uploads/2024/07/13-sedam-150x90.jpg)
Sedam: ಕರ್ತವ್ಯ ನಿರತ ವೈದ್ಯರ ಮೇಲೆ ಹಲ್ಲೆ, ಆರೋಪಿಗಳ ಬಂಧನಕ್ಕೆ ಆಗ್ರಹ
![1-sci](https://www.udayavani.com/wp-content/uploads/2024/07/1-sci-150x91.jpg)
Agricultural scientist ತಳಿ ಸಂಶೋಧಕ ಡಾ. ಎಸ್.ಎ.ಪಾಟೀಲ್ ನಿಧನ
![ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿದ್ದ ಶೆಡ್ ನೆಲಸಮ ಮಾಡಿದ ಅಧಿಕಾರಿಗಳು](https://www.udayavani.com/wp-content/uploads/2024/07/chikk1-150x83.jpg)
Kaduru; ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿದ್ದ ಶೆಡ್ ನೆಲಸಮ ಮಾಡಿದ ಅಧಿಕಾರಿಗಳು
![Serial Thief: ಚಿತ್ತಾಪುರ ಪಟ್ಟಣದ ಐದು ಮನೆಗಳಲ್ಲಿ ಕಳ್ಳತನ; ಸಿಸಿಟಿವಿಯಲ್ಲಿ ದೃಶ್ಯ ಸೆರೆ](https://www.udayavani.com/wp-content/uploads/2024/07/chittapura-1-150x84.jpg)
Serial Thief: ಚಿತ್ತಾಪುರ ಪಟ್ಟಣದ ಐದು ಮನೆಗಳಲ್ಲಿ ಕಳ್ಳತನ, ಸಿಸಿಟಿವಿಯಲ್ಲಿ ದೃಶ್ಯ ಸೆರೆ
![Chittapura; ಹಾಡಹಗಲೇ ಕಳ್ಳತನ ಮಾಡಿದ ಆರೋಪಿಯ ಸೆರೆ, ಸೊತ್ತು ವಶ](https://www.udayavani.com/wp-content/uploads/2024/07/chittapura-150x94.jpg)
Chittapura; ಹಾಡಹಗಲೇ ಕಳ್ಳತನ ಮಾಡಿದ ಆರೋಪಿಯ ಸೆರೆ, ಸೊತ್ತು ವಶ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.