ಕಲ್ಯಾಣ ಕರ್ನಾಟಕಕ್ಕೆ ಇನ್ನೂ 3-4 ಸಚಿವ ಸ್ಥಾನ: ಮಲ್ಲಿಕಾರ್ಜುನ ಖರ್ಗೆ
Team Udayavani, May 22, 2023, 12:10 PM IST
ಕಲಬುರಗಿ: ಆಡಳಿತಾತ್ಮಕ ಅನುಮೋದನೆಯ ಹಿನ್ನೆಲೆಯಲ್ಲಿ ಕೇವಲ ಎಂಟು ಜನ ಸಚಿವರ ಸರ್ಕಾರ ರಚನೆ ಮಾಡಲಾಗಿದೆ. ಪೂರ್ಣ ಪ್ರಮಾಣದ ಸಚಿವ ಸಂಪುಟ ಶೀಘ್ರವೇ ವಿಸ್ತರಣೆಯಾಗಲಿದ್ದು ಕಲ್ಯಾಣ ಕರ್ನಾಟಕಕ್ಕೆ ಇನ್ನೂ ನೂರು ನಾಲ್ಕು ಸಚಿವ ಸ್ಥಾನ ಸಿಗಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭರವಸೆ ನೀಡಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕ, ಮುಂಬೈ ಕರ್ನಾಟಕ ಭಾಗಗಳಲ್ಲೂ ಕೂಡ ಜಾತಿವಾರು ಪ್ರಾತಿನಿಧ್ಯದ ಆಧಾರದ ಮೇಲೆ ಮತ್ತು ಸಣ್ಣ ಸಣ್ಣ ಸಮುದಾಯಗಳಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಸಚಿವ ಸ್ಥಾನಗಳ ಘೋಷಣೆ ಸಾಧ್ಯತೆಯಿದೆ ಎಂದು ಇಂಗಿತ ವ್ಯಕ್ತಪಡಿಸಿದರು.
ಈಗಾಗಲೇ ನಾವು ರಾಜ್ಯದಲ್ಲಿ ಜನರಿಗೆ ಮಾತು ಕೊಟ್ಟಂತೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ 5 ಪ್ರಮುಖ ಭರವಸೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಪ್ರಾಥಮಿಕ ಹಂತದ ಅನುಮೋದನೆ ನೀಡಲಾಗಿದೆ. ಶೀಘ್ರವೇ ಕಾನೂನಾಗಿ ಜಾರಿಯಾಗಲಿದೆ ಎಂದರು.
ಕಲಬುರಗಿಗೆ ಇನ್ನೂ ಸಚಿವ ಸ್ಥಾನ ಸಿಗಲಿಗೆ ಸಿಗಲಿದೆ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು ಸಾಮಾಜಿಕ ನ್ಯಾಯವನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಜಾತಿವಾರು ಸಚಿವ ಸ್ಥಾನ ನೀಡುವ ಉದ್ದೇಶ ಇರುವುದರಿಂದ ಸಾಧ್ಯತೆ ಇದೆ ಎಂದರು.
ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಚುನಾವಣೆಗಳಲ್ಲಿ ನೀಡಿರುವ ಭರವಸೆಯನ್ನು ಈಡೇರಿಸುವ ನಿಟ್ಟಿನಲ್ಲಿ ಸಚಿವ ಸಂಪುಟ ಸಭೆಯಲ್ಲಿ ಪ್ರಮುಖ ಐದು ನಿರ್ಣಯಗಳನ್ನು ಈಗಾಗಲೇ ಕೈ ಕೊಡಲಾಗಿದೆ. ಇದರಿಂದ ಜನತೆಗೆ ಭರವಸೆ ಉಂಟಾಗಿದೆ. ಸಿದ್ದರಾಮಯ್ಯ ನೇತೃತ್ವದಲ್ಲಿ ಉತ್ತಮ ಕೆಲಸಗಳು ನಡೆಯುವ ಆಶಯವಿದೆ ಎಂದರು.
ರಾಜ್ಯದಲ್ಲಿನ ಗೆಲುವು ಕಾಂಗ್ರೆಸ್ ಗೆಲುವಲ್ಲ ಇದು ಜನ ಜನರ ಗೆಲುವಾಗಿದೆ ಎಂದ ಅವರು, ಈ ಚುನಾವಣೆಯ ಪ್ರತಿಕೂಲ ಪರಿಣಾಮ ಮುಂದಿನ ಲೋಕಸಭೆಯ ಚುನಾವಣೆ ಮೇಲೆ ಬೀರುತ್ತದೆ ಎನ್ನುವುದು ಸ್ಪಷ್ಟವಾಗಿ ಹೇಳಲು ಸಾಧ್ಯವಿಲ್ಲ ಎಂದರು.
ಈ ವೇಳೆಯಲ್ಲಿ ಡಿಸಿಸಿ ಅಧ್ಯಕ್ಷ ಜಗದೇವ ಗಯತ್ತೇದಾರ, ರಾಜಗೋಪಾಲರೆಡ್ಡಿ ಮುದಿರಾಜ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ
Kalaburagi:ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ
Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್
MUST WATCH
ಹೊಸ ಸೇರ್ಪಡೆ
ಮಂಡ್ಯದಲ್ಲಿ ಐಸ್ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ
Panaji: ಸರಕಾರದ ಆ್ಯಪ್ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ
Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ