ಕೊರೊನಾ ಭೀತಿ: ಮೃತಪಟ್ಟ ಕಲಬುರಗಿ ವ್ಯಕ್ತಿಯ ಮಗನ ಸಂದರ್ಶನ ಮಾಡಿದ್ದ ಪತ್ರಕರ್ತರ ಮೇಲೂ ನಿಗಾ
Team Udayavani, Mar 14, 2020, 3:30 PM IST
ಜಿಲ್ಲಾಧಿಕಾರಿ
ಕಲಬುರಗಿ: ಕೊರೊನಾ ಸೋಂಕಿನಿಂದಾಗಿ ಮೃತಪಟ್ಟ ಕಲುಬುರಗಿಯ ವ್ಯಕ್ತಿಯ ಮಗನ ಸಂದರ್ಶನ ನಡೆಸಿದ್ದ ಪತ್ರಕರ್ತರ ಮೇಲೂ ನಿಗಾ ಇಡಲಾಗುವುದು ಎಂದು ಕಲಬುರಗಿ ಜಿಲ್ಲಾಧಿಕಾರಿ ಶರತ್ ಬಿ ಹೇಳಿದರು.
ಇಂದು ಸುದ್ದಿಗೋಷ್ಟಿ ನಡೆಸಿದ ಅವರು ಜಿಲ್ಲೆಯ ಕೊರೊನಾ ವಿರುದ್ಧ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಸೋಂಕಿತನ ಮಗನ ಸಂದರ್ಶನ ನಡೆಸಿದ ಇಬ್ಬರು ವರದಿಗಾರರು ಮತ್ತು ಕ್ಯಾಮೆರಾಮನ್ ಅವರನ್ನು ಸುದ್ದಿಗೋಷ್ಠಿಯಲ್ಲಿ ಪ್ರತ್ಯೇಕವಾಗಿ ಕುಳಿತುಕೊಳ್ಳಲು ಸೂಚಿಸಿದರು. ನಂತರದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿಗಳ ಮೂಲಕ ತಪಾಸಣೆ ನಡೆಸಿ, ಮನೆಯಲ್ಲಿ ನಿಗಾವಣೆಯಲ್ಲಿ ಇರುವಂತೆ ಹೇಳಿದರು.
ಓರ್ವ ಸ್ಥಳೀಯ ಚಾನೆಲ್ ವರದಿಗಾರ, ಓರ್ವ ರಾಜ್ಯ ಮಟ್ಟದ ಚಾನೆಲ್ ವರದಿಗಾರ ಮತ್ತು ಕ್ಯಾಮರಾಮನ್ ಸಂದರ್ಶನ ನಡೆಸಿದ್ದರು. ಇವರಿಗೆ 14 ದಿನಗಳ ಕಾಲ ಮನೆಯಲ್ಲಿಯೂ ಪ್ರತ್ಯೇಕವಾಗಿ ಇರುವಂತೆ ಜಿಲ್ಲಾಧಿಕಾರಿ ಸೂಚಿಸಿದರು.
ಕೊರೊನಾ ಸೋಂಕು ಗಾಳಿಯಿಂದ ಹರಡುವುದಿಲ್ಲ. ಆದ್ದರಿಂದ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಮನೆಯ ಸುತ್ತ-ಮುತ್ತಲಿನ ನಿವಾಸಿಗಳು ಅನಗತ್ಯವಾಗಿ ಆತಂಕಕ್ಕೆ ಒಳಗಾಗಬಾರದು ಎಂದೂ ಅವರು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ