ದಂಡಗುಂಡ ದೇಗುಲ ನಿರ್ಮಾಣಕ್ಕೆ 4.60 ಕೋಟಿ
Team Udayavani, Aug 17, 2022, 3:52 PM IST
ಚಿತ್ತಾಪುರ: ತಾಲೂಕಿನ ದಂಡಗುಂಡ ಗ್ರಾಮದ ಬಸವಣ್ಣ ದೇವಸ್ಥಾನದ ನೂತನ ಕಟ್ಟಡದ ವಿನ್ಯಾಸವನ್ನು ಈಗಾಗಲೇ ಕಲಬುರಗಿಯ ಖಂಡೇರಾವ್ ರಚಿಸಿದ್ದು, 4.60ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಕಾರ್ಯ ಈಗಾಗಲೇ ಪ್ರಾರಂಭವಾಗಿದೆ ಎಂದು ಬಸವೇಶ್ವರ ದೇವಸ್ಥಾನ ಟ್ರಸ್ಟ್ ಕಮಿಟಿ ಅಧ್ಯಕ್ಷ ಭಾಗಣ್ಣಗೌಡ ಸಂಕನೂರ ತಿಳಿಸಿದರು.
ತಾಲೂಕಿನ ದಂಡಗುಂಡ ದೇವಸ್ಥಾನದ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವಸ್ಥಾನದ ಹುಂಡಿಯಲ್ಲಿ 23 ಲಕ್ಷ ರೂ. ಸಂಗ್ರಹವಾಗಿದ್ದು, ಈ ಹಣವನ್ನು ಬ್ಯಾಂಕಿನಲ್ಲಿ ಜಮೆ ಮಾಡಲಾಗಿದೆ. ಯಾವುದೇ ಹಣಕಾಸಿನ ವ್ಯವಹಾರವಾಗಲಿ ಚೆಕ್ ಮೂಲಕವೇ ಮಾಡಲಾಗುತ್ತಿದೆ. ಹೀಗಾಗಿ ಇಲ್ಲಿ ಯಾವುದೇ ಅವ್ಯವಹಾರಕ್ಕೆ ಆಸ್ಪದವಿಲ್ಲ ಎಂದು ಹೇಳಿದರು. ಕಟ್ಟಡ ನಿರ್ಮಾಣದ ಗುತ್ತಿಗೆದಾರರಿಗೆ 50ಲಕ್ಷ ರೂ. ಮುಂಗಡವಾಗಿ ನೀಡಲಾಗಿದೆ. ಮುಂದೆ ಹಂತ ಹಂತವಾಗಿ ಹಣ ನೀಡಲಾಗುವುದು. ಕಟ್ಟಡ ನಿರ್ಮಾಣ ಸೇರಿದಂತೆ ಇತರೆ ಅಭಿವೃದ್ಧಿ ಕೆಲಸಗಳಿಗೆ 8ರಿಂದ 10ಕೋಟಿ ರೂ. ಖರ್ಚಾಗಲಿದೆ. ಹೀಗಾಗಿ ದೇಣಿಗೆ ಸಂಗ್ರಹ ಮಾಡಲು ಪ್ರಮುಖರ ಎರಡು ತಂಡಗಳನ್ನು ಮಾಡಿ ಹಳ್ಳಿ ಹಳ್ಳಿಗೆ ಸಂಚರಿಸಿ ದೇಣಿಗೆ ಸಂಗ್ರಹ ಮಾಡಲಾಗುವುದು ಎಂದು ಹೇಳಿದರು.
ಟ್ರಸ್ಟ್ ಕಮಿಟಿ ಪದಾ ಕಾರಿಗಳಾದ ಬಿ.ಜಿ.ಪಾಟೀಲ, ಚಂದ್ರಶೇಖರ ಅವಂಟಿ, ಭೀಮಣ್ಣ ಸಾಲಿ, ಭೀಮರಾಯಗೌಡ ಚಾಮನೂರ, ಮಹಾಂತಗೌಡ ಪಾಟೀಲ, ಬಸವರಾಜಪ್ಪಗೌಡ, ರಾಜಶೇಖರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ