ಸರಸಂಬಾ ಧನಲಕ್ಷ್ಮೀ ಸಹಕಾರಿಗೆ 42 ಲಕ್ಷ ಲಾಭ


Team Udayavani, Sep 22, 2022, 3:03 PM IST

7-bank

ಆಳಂದ: ತಾಲೂಕಿನ ಸರಸಂಬಾ ಗ್ರಾಮದ ಶ್ರೀ ಧನಲಕ್ಷ್ಮೀ ಸೌಹಾರ್ದ ಸಹಕಾರಿಯ ಹಿರೋಳಿ ಗ್ರಾಮ ಶಾಖೆಯ ದಶಮಾನೋತ್ಸವ ಹಾಗೂ 2021-22ನೇ ಸಾಲಿನ 20ನೇ ವಾರ್ಷಿಕ ಮಹಾಸಭೆ ಮತ್ತು ವಿವಿಧ ಕ್ಷೇತ್ರಗಳಲ್ಲಿನ ಸಾಧಕರಿಗೆ ಸನ್ಮಾನ ಸೆ.24ರಂದು ಹಿರೋಳಿಯ ಗ್ರಾಮದ ಸೋಮೇಶ್ವರ ದೇವಸ್ಥಾನದಲ್ಲಿ ಬೆಳಗ್ಗೆ 10:30ಗಂಟೆಗೆ ನಡೆಯಲಿದೆ ಎಂದು ಸೌಹಾರ್ದ ಸಹಕಾರಿ ಅಧ್ಯಕ್ಷ ಮಹಾಂತಪ್ಪ ಆಲೂರೆ ತಿಳಿಸಿದರು.

ಪಟ್ಟಣದ ಸರಸಂಬಾ ಧನಲಕ್ಷ್ಮೀ ಸೌಹಾರ್ದ ಶಾಖೆಯಲ್ಲಿ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಅವರು, ಸಮಾರಂಭದಲ್ಲಿ ಮಾದನಹಿಪ್ಪರಗಾ ವಿರಕ್ತ ಮಠದ ಶ್ರೀ ಅಭಿನವ ಶಿವಲಿಂಗ ಮಹಾ ಸ್ವಾಮೀಜಿ ಸಾನ್ನಿಧ್ಯ, ಹಿರೋಳಿ ವಿರಕ್ತ ಮಠದ ಶ್ರೀ ಅಭಿನವ ಶಿವಬಸವ ಮಹಾ ಸ್ವಾಮಿಗಳ ನೇತೃತ್ವದಲ್ಲಿ ಸಮಾರಂಭ ನಡೆಯಲಿದೆ ಎಂದು ತಿಳಿಸಿದರು.

ವಿಜಯಪುರದ ಶಾಸಕ ಮತ್ತು ಸಿದ್ಧಶ್ರೀ ಸೌಹಾರ್ದ ಸಹಕಾರಿ ಅಧ್ಯಕ್ಷ ಬಸವನೌಡ ಪಾಟೀಲ ಯತ್ನಾಳ ಉದ್ಘಾಟಿಸಿ, ಪುಸ್ತಕ ಬಿಡುಗಡೆ ಕೈಗೊಳ್ಳುವರು ಎಂದು ಹೇಳಿದರು.

ಶಾಸಕ ಸುಭಾಷ ಆರ್‌. ಗುತ್ತೇದಾರ, ಸಹಕಾರಿ ಉಪ ನಿಬಂಧಕ ರವೀಂದ್ರ ಗುರುಮಿಠಕಲ್‌, ಕಲಬುರಗಿ ಸಿದ್ಧಿವಿನಾಯಕ ಸೌಹಾರ್ದ ಪತ್ತಿನ ಸಹಾಕಾರಿ ಅಧ್ಯಕ್ಷ ಸಂಜೀವ ಮಹಾಜನ್‌, ಸಹಕಾರಿ ಒಕ್ಕೂಟ ಜಿಲ್ಲಾ ಅಧ್ಯಕ್ಷ ಎಸ್‌.ಎಸ್‌. ಪಾಟೀಲ ಮುಖ್ಯ ಅತಿಥಿಗಳಾಗಿ ಆಗಮಿಸುವರು ಎಂದರು.

ಸೌಹಾರ್ದ ಕಾನೂನು ವ್ಯವಸ್ಥಾಪಕ ಸೂರ್ಯಕಾಂತ ರ್ಯಾಕಲೆ ಅತಿಥಿಯಾಗಿ ಆಗಮಿಸುವರು. ಉಪನ್ಯಾಸಕ ಪ್ರೊ|ನಾಗೇಂದ್ರ ಶಿ. ಚಕ್ಕಳ್ಳಿ, ಪ್ರೊ|ಸುಜಾತಾ ನಾ. ಚಿಕ್ಕಳ್ಳಿ ಪಾಲ್ಗೊಳ್ಳುವರು. ಸರಸಂಬಾ ಧನಲಕ್ಷ್ಮೀ ಸೌ.ಸ.ನಿ. ಅಧ್ಯಕ್ಷ ಮಹಾಂತಪ್ಪ ಆಲೂರೆ ಅಧ್ಯಕ್ಷತೆ ವಹಿಸುವರು. ಮಧ್ಯಾಹ್ನ 2ಗಂಟೆಗೆ ನೆಡೆಯುವ ವಾರ್ಷಿಕ ವರದಿ ಮಂಡನೆ ಮತ್ತು ತರಬೇತಿ ಕಾರ್ಯಕ್ರಮದ ಸಾನ್ನಿಧ್ಯವನ್ನು ಹಿರೋಳಿ ವಿರಕ್ತ ಮಠದ ಶ್ರೀ ಅಭಿನವ ಶಿವಬಸವ ಮಹಾಸ್ವಾಮಿಗಳ ವಹಿಸುವರು. ಸೌಹಾರ್ದ ರಾಜ್ಯ ನಿರ್ದೇಶಕಿ ಶೈಲಜಾ ತಪಲಿ ಉದ್ಘಾಟಿಸುವರು ಎಂದು ವಿವರಿಸಿದರು.

ಸೂರ್ಯಕಾಂತ ರ್ಯಾಕಲೆ ಸಹಕಾರ ಕ್ಷೇತ್ರದ ಪ್ರಚಲಿತ ವಿದ್ಯಮಾನಗಳು ಮತ್ತು ಸದಸ್ಯರ ಹಕ್ಕು ಕರ್ತವ್ಯ, ಜವಾಬ್ದಾರಿ ಕುರಿತು ಉಪನ್ಯಾಸ ನೀಡುವರು. ಸಹಕಾರಿ ಮುಖ್ಯ ಕಾರ್ಯನಿರ್ವಾಣಾ ಕಾರಿ ಸೋಮನಾಥ ನಿಂಬರಗಿ ವಾರ್ಷಿಕ ವರದಿ ಮಂಡಿಸುವರು. ತಾವು ಅಧ್ಯಕ್ಷತೆ ವಹಿಸಲಿದ್ದು, ಯೋಗಿರಾಜ ಮಾಡ್ಯಾಳೆ ಮತ್ತು ಬಸವರಾಜ ಎಂ. ಬೆಳಮಗಿ ಸಭೆ ನಿರ್ವಹಿಸಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಸರ್ವ ಸದಸ್ಯರು ಮತ್ತು ನಿರ್ದೇಶಕರು ಭಾಗವಹಿಸಬೇಕು ಎಂದು ಕೋರಿದರು.

ಒಟ್ಟು ಸೌಹಾರ್ದ ಅಡಿಯಲ್ಲಿ 10ಕೋಟಿ ರೂ. ದುಡಿಯುವ ಬಂಡವಾಳವಿದ್ದು, 10 ಕೋಟಿ ವಾರ್ಷಿಕ ರೂ. ವಹಿವಾಟು ನಡೆಸಿ ಪ್ರಸಕ್ತ ಸಾಲಿಗೆ 42ಲಕ್ಷ ರೂ.ಗಳ ನಿವ್ವಳ ಲಾಭ ಗಳಿಸಿದೆ. ಅಲ್ಲದೆ, ಎಸ್ಸೆಸ್ಸೆಲ್ಸಿಯಲ್ಲಿ ತಾಲೂಕಿಗೆ ಟಾಪರ್‌ ಬಂದವರಿಗೆ 10ಸಾವಿರ ರೂ., ಸದಸ್ಯರಿಗೆ ಮರಣಾಂತರ ನಿಧಿ 25ರಿಂದ 50ಸಾವಿರ ರೂ. ಸೇರಿ ಹೀಗೆ ಹಲವು ಯೋಜನೆಗಳನ್ನು ಒದಗಿಸುತ್ತಾ ಬರಲಾಗಿದೆ ಎಂದು ಹೇಳಿದರು.

ಟಾಪ್ ನ್ಯೂಸ್

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.