ಶೇ.50 ರೈತರಿಗೆ ಇನ್ನೂ ಸಿಕ್ಕಿಲ್ಲ ರಸಗೊಬ್ಬರ


Team Udayavani, Jun 12, 2022, 12:58 PM IST

9farmers

ಆಳಂದ: ಇನ್ನೇನು ಮಳೆ ಬಂದರೆ ವಾರದಲ್ಲಿ ಸಂಪೂರ್ಣ ಮುಂಗಾರು ಬಿತ್ತನೆ ಕೈಗೊಳ್ಳಬೇಕು ಎಂದುಕೊಂಡ ಶೇ.50 ರೈತ ಸಮುದಾಯಕ್ಕೆ ಇನ್ನು ರಸಗೊಬ್ಬರವೇ ದೊರೆಯದೇ ನಿತ್ಯ ಅಲೆದಾಡುವಂತೆ ಮಾಡಿದೆ.

ಕೃಷಿಯನ್ನೇ ನಂಬಿರುವ ರೈತ ಸಮುದಾಯಕ್ಕೆ ಸಕಾಲಕ್ಕೆ ಬೀಜ, ಗೊಬ್ಬರ ದೊರೆಯದೇ ಇದ್ದಲ್ಲಿ ಕೃಷಿ ಉತ್ಪಾದನೆ ಮೇಲೆ ಪ್ರತಿಕೂಲ ಪರಿಣಾಮ ಬೀಳುವ ಸಾಧ್ಯತೆಯಿದೆ. ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದ ಹತ್ತಾರು ಖಾಸಗಿ ರಸಗೊಬ್ಬರ ಅಂಗಡಿಗಳಲ್ಲಿ ರೈತರಿಗೆ ಬೇಕಾದ ಗೊಬ್ಬರ ಕೇಳಲು ಹೋದ ರೈತರಿಗೆ ಇನ್ನೂ ಬಂದಿಲ್ಲ ಎನ್ನುವ ಸಿದ್ಧ ಉತ್ತರ ಕೇಳಿ ಸುಸ್ತಾಗಿ ಹೋಗಿದೆ.

ರವಿವಾರ (ಜೂ.12) ಪಟ್ಟಣಕ್ಕೆ ಆಗಮಿಸಲಿರುವ ರಸಗೊಬ್ಬರ ಖಾತೆ ಕೇಂದ್ರ ಸಚಿವ ಭಗವಂತ ಖೂಬಾ ಇಲ್ಲಿನ ರೈತರ ರಸಗೊಬ್ಬರ ಬೇಡಿಕೆಯನ್ನು ನೀಗಿಸುವರೇ ಎಂದು ಕಾಯ್ದು ನೋಡಬೇಕಿದೆ. ರಸಗೊಬ್ಬರ ಕೊರತೆ ಇಲ್ಲ ಎಂದು ಮಾಧ್ಯಮಗಳಲ್ಲಿ ಹೇಳಿಕೆ ನೀಡುತ್ತಲೇ ಇದ್ದಾರೆ. ಆದರೆ ವಾಸ್ತವದಲ್ಲಿ ರೈತರಿಗೆ ಬೇಡಿಕೆಯಾದ ಡಿಎಪಿ ರಸಗೊಬ್ಬರ ಇಲ್ಲಿನ ಮಾರುಕಟ್ಟೆಯಲ್ಲಿ ದಾಸ್ತಾನಿಲ್ಲ. ಅಲ್ಲದೇ ಅಂಗಡಿಗಳ ಬೇಡಿಕೆಯಂತೆ ಮೇಲಿನಿಂದಲೇ ಪೂರೈಕೆ ಆಗುತ್ತಿಲ್ಲ. ಹೀಗಾಗಿ ಗೊಬ್ಬರಕ್ಕಾಗಿ ಪರದಾಡುವಂತೆ ಆಗಿದೆ.

ಕಳೆದ ಸಾಲಿನಲ್ಲಿ ಗೊಬ್ಬರ ಸಂಖ್ಯೆ 20:20:13 ಬೆಲೆ 1180 ಬದಲು 1470 ಮತ್ತು 12:32:16 ಗೊಬ್ಬರ ಬೆಲೆ 1250ರ ಬದಲು 1470ರೂ. ಹೆಚ್ಚಾಗಿದೆ. ಅತಿ ಹೆಚ್ಚು ಬೇಡಿಕೆ ಮತ್ತು ಅಭಾವ ಸೃಷ್ಟಿಯಾದ ಡಿಎಪಿ ಗೊಬ್ಬರ ಬೆಲೆ 1250ರ ಬದಲು 1350ರೂ. 10:26:26 ಗೊಬ್ಬರ ಸ್ಥಳೀಯ ಮಾರುಕಟ್ಟೆಗೆ ಇನ್ನೂ ಬಂದೇ ಇಲ್ಲವಂತೆ, ಯೂರಿಯಾ 266ರ ಬದಲು 350ರೂ.ಗಳಲ್ಲಿ ರೈತರು ಖರೀದಿಸುವಂತಾಗಿದೆ. ಇದಕ್ಕೆ ಹೊರತಲ್ಲ ಎನ್ನುವಂತೆ ರೈತ ಸಂಪರ್ಕ ಕೇಂದ್ರಗಳಲ್ಲಿನ ರಿಯಾಯ್ತಿ ಬೀಜ ಮತ್ತು ಆಗ್ರೋ ಕೇಂದ್ರಗಳಲ್ಲಿನ ವಿವಿಧ ರೀತಿಯ ಬೀಜಗಳ ಬೆಲೆಯ 200ರಿಂದ 500ರೂ.ಗಳಿಗೆ ಹೆಚ್ಚಿನ ಬೆಲೆಯಲ್ಲಿ ದೊರೆಯುತ್ತಿದ್ದು, ಇದರಿಂದ ರೈತರ ಜೇಬಿಗೆ ಕತ್ತರಿ ಬೀಳುತ್ತಿದೆ.

ದೊರೆಯದ ಸ್ಪಿಂಕ್ಲರ್‌: ಮಳೆ ಮುಂದೂಡತೊಡಗಿದೆ. ಇಂಥ ವೇಳೆ ರಿಯಾಯ್ತಿ ದರದಲ್ಲಿ ದೊರೆಯುವ ಸ್ಪಿಂಕ್ಲರ್‌ ಪೈಪ್‌ನಿಂದಾದರೂ ನೀರುಣಿಸಿ ಬಿತ್ತನೆ ಮಾಡಬೇಕೆಂದ ರೈತರಿಗೆ ಸಕಾಲಕ್ಕೆ ಪೈಪ್‌ಗ್ಳು ದೊರೆಯುತ್ತಿಲ್ಲ. ಇದಕ್ಕಾಗಿ ಅರ್ಜಿ ಸಲ್ಲಿಸಿ ವರ್ಷ ಎರಡು ವರ್ಷವಾದರೂ ಸರಣಿಯಂತೆ ಪೈಪ್‌ಗ್ಳು ದೊರೆಯದೇ ಕೃಷಿಗೆ ಹಿನ್ನಡೆಯಾಗಿದೆ.

ಕಳೆನಾಶ ಕೊರತೆ: ಬಿತ್ತನೆ ಪೂರ್ವ ಮತ್ತು ಬಿತ್ತನೆಯಾದ ಬಳಿಕ ರೈತರಿಗೆ ಬೇಕಾದ ಕಳೆನಾಶಕ ಔಷಧಗಳು ರೈತ ಸಂಪರ್ಕ ಕೇಂದ್ರಗಳಲ್ಲಿ ಮುಗಿದಿವೆ. ಬರುವುದಿದೆ ಎಂದು ಹೇಳುತ್ತಲೇ ದಿನದೂಡಲಾಗುತ್ತಿದೆ. ಖಾಸಗಿ ಅಂಗಡಿಗಳಲ್ಲಿ ಕಳೆನಾಶಕ ಖರೀದಿಗೆ ಮುಂದಾದರೆ ಬೆಲೆ ದುಪ್ಪಾಟ್ಟಾಗಿದೆ. ಬೀಜ, ಕಳೆನಾಶಕ ಮತ್ತು ಕೃಷಿ ಪರಿಕರ ದರ ಇಳಿಕೆ ಮಾಡಿ ರೈತರಿಗೆ ವಿತರಿಸುವ ಕೆಲಸವಾಗಬೇಕು ಎಂದು ರೈತ ಮುಖಂಡರು ಒತ್ತಾಯಿಸುತ್ತಲೇ ಬಂದಿದ್ದಾರೆ. ಈ ಕುರಿತು ಶಾಸಕರು, ಸಚಿವರು ಗಂಭೀರವಾಗಿ ಪರಿಗಣಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕಿದೆ.

ಗೊಬ್ಬರ ಬೇಡಿಕೆಯ ಪಟ್ಟಿ ಆಧರಿಸಿ ಫೆಡರೇಷನ್‌ ಮತ್ತು ಕೆಎಸಎಸಿ ಮೂಲಕ ಮಾರಾಟ ಅಂಗಡಿಗಳಿಗೆ ಗೊಬ್ಬರ ಪೂರೈಕೆ ಆಗುತ್ತಿದೆ. 21 ಅಂಗಡಿಗಳಿಗೆ ಎರಡು ದಿನಗಳಲ್ಲಿ ಗೊಬ್ಬರ ಪೂರೈಕೆ ಆಗಲಿದೆ. ಈ ಹಿಂದೆಯೂ ಗೊಬ್ಬರ ದಾಸ್ತಾನು ಆದಂತೆ ರೈತರು ಖರೀದಿಸಿದ್ದಾರೆ. ಗೊಬ್ಬರ ಬೇಡಿಕೆಯಿಟ್ಟು ಹಣ ಕಟ್ಟಿದ ಅಂಗಡಿಯವರಿಗೆ ನೇರವಾಗಿ ಗೊಬ್ಬರ ಪೂರೈಕೆಯಾಗುತ್ತದೆ. ಕಿಪ್ಕೋ ಮತ್ತು ಐಪಿಎಲ್‌ ಗೊಬ್ಬರ ಮಾರಾಟ ನಡೆಯಲಿದೆ. ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲಾಗುತ್ತಿದೆ. ಶರಣಗೌಡ ಪಾಟೀಲ, ಸಹಾಯಕ ಕೃಷಿ ನಿರ್ದೇಶಕರು, ಆಳಂದ

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.