ಪ್ರತಿ ಟನ್ ಕಬಿಗೆ 5 ಸಾವಿರ ರೂ. ನೀಡಿ
Team Udayavani, Feb 19, 2022, 1:10 PM IST
ಕಲಬುರಗಿ: ಪ್ರತಿ ಟನ್ ಕಬ್ಬಿಗೆ 5 ಸಾವಿರ ರೂ. ನೀಡಬೇಕು ಮತ್ತು ಕಬ್ಬು ಬೆಳೆಗಾರರಿಗೆ ಸಮಸ್ಯೆಗೆ ಸ್ಪಂದಿಸಬೇಕೆಂದು ಆಗ್ರಹಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಶುಕ್ರವಾರ ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ಕಬ್ಬಿನ ಸಮೇತವಾಗಿ ಪ್ರತಿಭಟನೆ ನಡೆಸಲಾಯಿತು.
ಜಿಲ್ಲೆಯಲ್ಲಿ ಕಬ್ಬು ಬೆಳೆಗಾರರಿಗೆ ಸಕ್ಕರೆ ಕಾರ್ಖಾನೆಗಳಿಂದ ನಿರಂತರವಾಗಿ ಅನ್ಯಾಯವಾಗಿದ್ದು, ಸೂಕ್ತ ಬೆಲೆ ನೀಡುತ್ತಿಲ್ಲ. ಉಪ ಉತ್ಪನ್ನಗಳ ಲಾಭವನ್ನು ರೈತರಿಗೆ ಹಂಚಿಕೆ ಮಾಡುತ್ತಿಲ್ಲ ಮತ್ತು ಬಾಕಿ ಹಣ ಪಾವತಿಸುತ್ತಿಲ್ಲ. ಆದರೂ, ಜಿಲ್ಲಾಡಳಿತ ರೈತರಿಗೆ ಸ್ಪಂದಿಸುತ್ತಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ತಕ್ಷಣವೇ ಸಕ್ಕರೆ ಕಾರ್ಖಾನೆಗಳ ಆಡಳಿತ ಮಂಡಳಿ, ರೈತರು, ಜಿಲ್ಲೆಯ ಜನಪ್ರತಿನಿಧಿಗಳ ಸಭೆ ನಡೆಸಿ ಜಿಲ್ಲಾಡಳಿತ ಕಬ್ಬು ಬೆಳೆಗಾರರ ಸಮಸ್ಯೆಗಳ ಬಗ್ಗೆ ಚರ್ಚಿಸಬೇಕು. ಕಬ್ಬು ಬೆಳೆಗಾರರ ಬಗ್ಗೆ ಜಿಲ್ಲೆಯ ಜನಪ್ರತಿನಿಧಿಗಳು ಸದನದಲ್ಲಿ ಧ್ವನಿ ಎತ್ತಬೇಕು. 2021-22ರ ಸಾಲಿಗೆ ಶೇ.9.5 ಇಳುವರಿಗೆ 5 ಸಾವಿರ ರೂ. ಪ್ರತಿ ಟನ್ ಕಬ್ಬಿಗೆ ನೀಡಬೇಕು. ರಾಜ್ಯ ಸರ್ಕಾರ ಸಲಹಾ ಬೆಲೆ ಕಬ್ಬು ನಾಟಿಗೆ ಮೊದಲೇ ಪ್ರತಿ ವರ್ಷ ಘೋಷಿಸಬೇಕೆಂದು ಒತ್ತಾಯಿಸಿದರು.
ಉಪ ಉತ್ಪನ್ನಗಳಾದ ಪ್ರಸ್ಮಡ್, ಬಗಾಸಸ್, ಎಥೆನಾಲ್ ಸೇರಿ ಮುಂತಾದವುಗಳ ಲಾಭ ರೈತರೊಂದಿಗೆ ಹಂಚಿಕೊಳ್ಳಬೇಕು. ಮುಚ್ಚಿರುವ ಕಾರ್ಖಾನೆಗಳನ್ನು ತೆರೆಯಬೇಕು, ಎಥೆನಾಲ್ ಉತ್ಪಾದನೆ ಹೆಚ್ಚಿಸಬೇಕು, ಸಹಕಾರಿ ಹಾಗೂ ಸಾರ್ವಜನಿಕ ಸಕ್ಕರೆ ಕಾರ್ಖಾನೆಗಳ ಖಾಸಗೀಕರಣ ಮಾಡಬಾರದು ಎಂದು ಒತ್ತಾಯಿಸಿದರು.
ಕಬ್ಬು ಬೆಲೆ ನಿರ್ಧರಿಸಲು ಆದಾಯ ಹಂಚಿಕೆ ಸೂತ್ರ ಶಾಸನ ರೂಪಿಸಲು ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ಪತ್ರ ಬರೆದಿದ್ದು, ಕೇಂದ್ರದ ಈ ಆದೇಶ ರದ್ದು ಮಾಡಬೇಕು. ಕಬ್ಬು ಖರೀದಿ ಹಣ ಕಂತುಗಳಲ್ಲಿ ಪಾವತಿಸುವ ಪ್ರಸ್ತಾಪ ವಾಪಸ್ ಪಡೆಯಬೇಕು ಮತ್ತು 14 ದಿನದಲ್ಲಿ ಬಾಕಿ ಹಣ ಪಾವತಿಸಬೇಕು. ರೈತರ ಕಬ್ಬು ಸಮಯಕ್ಕೆ ಸರಿಯಾಗಿ ಕಟಾವು ಮಾಡಬೇಕು. ಮಹಾರಾಷ್ಟ್ರ ಮತ್ತು ಪಕ್ಕದ ಜಿಲ್ಲೆಯ ಕಬ್ಬು ತಂದು ಇಲ್ಲಿ ನುರಿಸುತ್ತಿದ್ದು, ಜಿಲ್ಲೆಯ ರೈತರ ಕಬ್ಬು ಕಟಾವು ಮಾಡುತ್ತಿಲ್ಲ. ಇದರಿಂದ ನಿರಂತರ ಅನ್ಯಾಯವಾಗುತ್ತಿದೆ. ಇದನ್ನು ಸರಿಪಡಿಸಬೇಕೆಂದು ಪ್ರತಿಭಟನಾನಿರತರು ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಸಂಘದ ಜಿಲ್ಲಾಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ, ಮುಖಂಡರಾದ ಪಾಂಡುರಂಗ ಮಾವಿನಕರ, ಎಂ.ಬಿ.ಸಜ್ಜನ, ಅಮೃತರಾವ ಪಾಟೀಲ, ಸಿದ್ದರಾಮ ಧನ್ನೂರ, ಗುರು ಚಾಂದಕವಟೆ ಹಾಗೂ ಇನ್ನಿತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್