ಎರಡು ಸಾವಿರ ರೈತರಿಗೆ 6 ಕೋಟಿ ರೂ. ಸಾಲ ವಿತರಣೆ


Team Udayavani, Oct 24, 2021, 10:07 AM IST

4former

ಕಲಬುರಗಿ: ಬೇರೆ ಜಿಲ್ಲೆಗಳಲ್ಲಿ ರೈತರಿಗೆ ಹೆಚ್ಚಿನ ಪ್ರಮಾಣದಲ್ಲಿ ಬೆಳೆ ಸಾಲ ಸಿಗುತ್ತಿದೆ. ಹೀಗಾಗಿ ಜಿಲ್ಲೆಯಲ್ಲೂ ಈಗ ನೀಡಲಾಗುತ್ತಿರುವ ಸಾಲದ ಪ್ರಮಾಣ ಹತ್ತು ಪಟ್ಟು ಹೆಚ್ಚಿಗೆ ದೊರಕುವಂತೆ ಆಗಲು ತಾವು ಯತ್ನಿಸುತ್ತೇವೆ ಎಂದು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ, ದಕ್ಷಿಣ ಮತಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಹೇಳಿದರು.

ನಗರದ ಆಳಂದ ರಸ್ತೆಯ ಬೆಣ್ಣೂರು ಕಲ್ಯಾಣ ಮಂಟಪದಲ್ಲಿ ದಕ್ಷಿಣ ಮತಕ್ಷೇತ್ರದ ಸಿಂದಗಿ, ಪಟ್ಟಣ, ಭೀಮಳ್ಳಿ, ಸಾವಳಗಿ, ಕೋಟನೂರ ಡಿ, ಹುಣಸಿಹಡಗಿಲ್‌, ಶರಣಸಿರಸಗಿ, ಹೀರಾಪುರ, ಮಿಣಜಗಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಎರಡು ಸಾವಿರ ರೈತರಿಗೆ ಆರು ಕೋಟಿ ರೂ, ಬಡ್ಡಿ ರಹಿತ ಬೆಳೆಸಾಲ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ರೈತರಿಗೆ ಹೆಚ್ಚಿನ ಪ್ರಮಾಣದ ಸಾಲ ದೊರಕಬೇಕೆಂದರೆ ಬ್ಯಾಂಕ್‌ ಪುನಶ್ಚೇತನಗೊಳ್ಳಬೇಕು. ಪಡೆದ ಸಾಲ ಸಕಾಲಕ್ಕೆ ಮರುಪಾವತಿಸಬೇಕು. ಈ ಹಿಂದೆ ರೈತರಿಗೆ ಸಾಲವನ್ನು ಅತ್ಯಂತ ಕನಿಷ್ಟವಾಗಿ ನೀಡಲಾಗುತ್ತಿತ್ತು. ಈಗ ಹೆಚ್ಚಿಗೆ ಮಾಡಲಾಗಿದೆ. ಇದು ತಮ್ಮ ಸರ್ಕಾರ ರೈತಪರ ಎಂಬುದನ್ನು ನಿರೂಪಿಸುತ್ತದೆ ಎಂದರು.

ಉಪಾಧ್ಯಕ್ಷ ಸುರೇಶ ಸಜ್ಜನ್‌ ಮಾತನಾಡಿ, ಬ್ಯಾಂಕ್‌ ಈಗ ಸುಧಾರಣೆಯತ್ತ ಹೆಜ್ಜೆ ಹಾಕುತ್ತಿದೆ. ಹೀಗಾಗಿ ರೈತರಲ್ಲಿ ಮಂದಹಾಸ ಮೂಡಿದೆ. ಮುಂದಿನ ದಿನಗಳಲ್ಲಿ ಹಿರಿಯ ನಿರ್ದೇಶಕ ಶರಣಬಸಪ್ಪ ಪಾಟೀಲ ಅಷ್ಠಗಾ ಅಧ್ಯಕ್ಷರಾಗಲಿದ್ದಾರೆ ಎಂದರು.

ಯುಕೆಪಿ ಕಾಡಾ ಆಡಳಿತಾಧಿಕಾರಿ ಶರಣಬಸಪ್ಪ ಬೆಣ್ಣೂರು ಮಾತನಾಡಿ, ಸಹಕಾರಿ ಕ್ಷೇತ್ರದ ಬಲವರ್ಧನೆಯಲ್ಲಿ ಪ್ರಾಮಾಣಿಕತೆ ಯೇ ಮುಖ್ಯ. ಹೀಗಾಗಿ ಪಡೆದ ಸಾಲ ಸಕಾಲದಲ್ಲಿ ಮರು ಪಾವತಿಸುವುದು ಮುಖ್ಯವಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ಲೆಹೆಂಗದಲ್ಲಿ ವಿದೇಶಕ್ಕೆ ಮಾದಕ ವಸ್ತುಗಳ ರಫ್ತು

ಪ್ರಾಸ್ತಾವಿಕವಾಗಿ ಮಾತನಾಡಿದ ಡಿಸಿಸಿ ಬ್ಯಾಂಕ್‌ ನಿರ್ದೇಶಕ ಶರಣಬಸಪ್ಪ ಪಾಟೀಲ ಅಷ್ಠಗಾ, ರೈತರಿಗೆ ಸಾಲ ನೀಡದಿರುವ ಮಟ್ಟಿಗೆ ತಲುಪಿದ್ದ ಬ್ಯಾಂಕ್‌ ಪುನಶ್ಚೇತನಗೊಳ್ಳಲು ಹಿಂದಿನ ಸಿಎಂ ಬಿ.ಎಸ್‌. ಯಡಿಯೂರಪ್ಪ ಹಾಗೂ ಹಾಲಿ ಸಿಎಂ ಬಸವರಾಜ ಬೊಮ್ಮಾಯಿ ಇಚ್ಛಾಶಕ್ತಿ ಕಾರಣವಾಗಿದೆ. ಮಧ್ಯಾಮಾವಧಿ ಸಾಲ ಮನ್ನಾ ಮಾಡಿರುವುದು ಹಾಗೂ 10 ಕೋಟಿ ರೂ. ಶೇರು ನೀಡಿರುವುದು, ಜತೆಗೆ 200 ಕೋಟಿ ರೂ. ಅಪೆಕ್ಸ್‌ ದಿಂದ ಸಾಲ ದೊರಕಿಸುವಂತೆ ಮಾಡಿರುವುದೇ ಕಾರಣ ಎಂದರು.

ಮತ್ತೋರ್ವ ನಿರ್ದೇಶಕ ಅಶೋಕ ಸಾವಳೇಶ್ವರ ಮಾತನಾಡಿದರು. ಡಿಸಿಸಿ ಬ್ಯಾಂಕ್‌ ಎಂಡಿ ಚಿದಾನಂದ ನಿಂಬಾಳ, ಜನರಲ್‌ ಮ್ಯಾನೇಜರ ಮುತ್ತುರಾಜ, ತಹಶೀಲ್ದಾರ್‌ ಪ್ರಕಾಶ ಕುದುರೆ, ಸಹಾಯಕ ಕೃಷಿ ಸಹಾಯಕ ನಿರ್ದೇಶಕ ಚಂದ್ರಕಾಂತ ಜೀವಣಗಿ, ಪ್ರಮುಖರಾದ ರಾಜೇಂದ್ರ ಕರೇಕಲ್‌, ವಿವಿಧ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಹಣಮಂತರಾವ ಭೈರಾಮಡಗಿ, ಲಿಂಗರಾಜ ಧುಳಗೊಂಡ, ಸಂಗಮೇಶ್ವರ ಚೋರಗಸ್ತಿ, ಶಿವರಾಯ ಶಿವಮೂರ್ತಿ, ಶಿವರಾಜ ಎಸ್‌. ಸಿರಸಗಿ ಕೋಟನೂರ, ಪ್ರಭುಲಿಂಗ ಮೂಲಗೆ, ಗಂಗಾಧರ ಪೊಲೀಸ್‌ ಪಾಟೀಲ, ಲಿಂಗಣಗೌಡ ಪಾಟೀಲ, ಬ್ಯಾಂಕ್‌ ಅಧಿಕಾರಿಗಳಾದ ಬಸವರಾಜ ಕಲ್ಲೂರ, ರುದ್ರಗೌಡ, ಸದಲಾಪುರ, ಪ್ರವೀಣ, ಮಲ್ಲಿಕಾರ್ಜುನ, ಗಣಪುರ, ಪೂಜಾರಿ ಮುಂತಾದವರಿದ್ದರು.

ಇದೇ ಸಂದರ್ಭದಲ್ಲಿ 250 ರೈತರಿಗೆ ಬೀಜ, ಎಂ.ಎನ್‌. ಲಿಕ್ವಿಡ್‌ ಕೀಟನಾಶಕ ಹಾಗೂ 94 ಸಿ ಅಡಿಯಲ್ಲಿ ರೈತರಿಗೆ ಹಕ್ಕುಪತ್ರಗಳನ್ನು ಕೆಕೆಆರ್‌ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ವಿತರಿಸಿದರು. ಶಿವಶಂಕರ ಬಿರಾದಾರ ನಿರೂಪಿಸಿದರು, ಬಿ.ಜಿ. ಕಲ್ಲೂರ ಸ್ವಾಗತಿಸಿದರು.

ಟಾಪ್ ನ್ಯೂಸ್

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.