66 ಜನರ ರಕ್ತ ಮಾದರಿ ಪರೀಕ್ಷೆ


Team Udayavani, Jan 5, 2018, 11:47 AM IST

gul-8.jpg

ಚಿಂಚೋಳಿ: ತಾಲೂಕಿನ ಬೆಡಕಪಳ್ಳಿಯಲ್ಲಿ ಕಳೆದ ಮೂರು ದಿನಗಳ ಹಿಂದೆ ಜನರಲ್ಲಿ ಕಾಣಿಸಿಕೊಂಡ ಕೈಕಾಲು ನೋವು
ಕಾಯಿಲೆ ಬಗ್ಗೆ 66 ಜನರ ರಕ್ತ ಮಾದರಿ ಪರೀಕ್ಷೆ ಮಾಡಲಾಗಿದ್ದು, ಇದರಲ್ಲಿ 5 ಜನರಲ್ಲಿ ಚಿಕುನ್‌ ಗುನ್ಯಾ ಮತ್ತು ಒಬ್ಬರಲ್ಲಿ ಮಲೇರಿಯಾ ರೋಗ ಕಾಣಿಸಿಕೊಂಡಿದೆ. ಎಲ್ಲರಿಗೂ ಸೂಕ್ತ ಚಿಕಿತ್ಸೆ ನೀಡಲಾಗಿದ್ದು, ರೋಗ ನಿಯಂತ್ರಣದಲ್ಲಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ| ಮಹಮದ್‌ ಗಫಾರ್‌ ತಿಳಿಸಿದ್ದಾರೆ.

ಪಟ್ಟಣದ ತಾಲೂಕು ಆಸ್ಪತ್ರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಡಕಪಳ್ಳಿಯಲ್ಲಿ ಕೆಲವು ದಿನಗಳ
ಹಿಂದೆ ಜನರಲ್ಲಿ ಕೈಕಾಲು ನೋವು ಕಾಣಿಸಿಕೊಂಡಿತ್ತು. ಸುಲೇಪೇಟ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರೋಗಿಗಳು
ದಾಖಲಾಗುತ್ತಿರುವುದರಿಂದ ವೈದ್ಯರ ಮತ್ತು ಸಿಬ್ಬಂದಿ ತಂಡದೊಂದಿಗೆ ಗ್ರಾಮಕ್ಕೆ ಭೇಟಿ ನೀಡಿ ಮೊದಲ ದಿನ 55 ಜನರು ಹಾಗೂ ಮರು ದಿನ 11 ಜನರ ರಕ್ತ ಪರೀಕ್ಷೆ ಮಾಡಲಾಗಿದೆ.

ಇದರಲ್ಲಿ 5 ಚಿಕೂನ್‌ ಗುನ್ಯಾ ಮತ್ತು ಒಬ್ಬರಲ್ಲಿ ಮಲೇರಿಯಾ ರೋಗ ಕಾಣಿಸಿಕೊಂಡಿದೆ. ಅಲ್ಲದೇ ಜನರಲ್ಲಿ ಇರುವ
ರಕ್ತದೊತ್ತಡ ಮತ್ತು ಸಕ್ಕರೆ ಕಾಯಿಲೆ ಪರೀಕ್ಷೆ ಸಹ ನಡೆಸಲಾಗಿದೆ ಎಂದು ತಿಳಿಸಿದರು. ಬೆಡಕಪಳ್ಳಿಯಲ್ಲಿ 75 ಜನರ ರಕ್ತ ಲೇಪನ ಮಾಡಲಾಗಿದೆ. ಒಟ್ಟು 28 ಮನೆಗಳಿಗೆ ಭೇಟಿ ನೀಡಿ ಜನರಿಗೆ ಆರೋಗ್ಯ ತಿಳಿವಳಿಕೆ ಮತ್ತು ಸ್ವತ್ಛತೆ ಹಾಗೂ ಬಿಸಿಯೂಟ ಸೇವನೆ ಮಾಡಬೇಕು.

ಅಲ್ಲದೇ ಬ್ಯಾರೆಲ್‌ ಮತ್ತು ನೀರಿನ ತೊಟ್ಟಿಯಲ್ಲಿ ಹೆಚ್ಚು ನೀರು ಸಂಗ್ರಹ ಮಾಡಬಾರದಂತೆ ಜಾಗೃತಿ ಮೂಡಿಸಲಾಗಿದೆ. ಗ್ರಾಮದಲ್ಲಿ ಸೊಳ್ಳೆಗಳ ನಿಯಂತ್ರಣಕ್ಕಾಗಿ ಧೂಮೀಕರಣ(ಫಾಗಿಂಗ್‌) ಮಾಡಲಾಗಿದೆ. ಗ್ರಾಮದಲ್ಲಿ ಸಮುದಾಯ ಆರೋಗ್ಯ ಸಿಬ್ಬಂದಿಗಳಾದ ಅನೀಲಕುಮಾರ, ಮಲ್ಲಿಕಾರ್ಜುನ, ಚಾಂದಪಾಶಾ, ಮಹಾದೇವಿ, ಹಿರಿಯ ಆರೋಗ್ಯ ಸಹಾಯಕಿ ಸವಿತಾ, ಗುಂಡಪ್ಪ ಸರಸ್ವತಿ ಅಲ್ಲದೇ ಆಶಾ ಕಾರ್ಯಕರ್ತೆ ಕಲ್ಲಮ್ಮ ಬಿಡಾರ ಹೂಡಿ ಚಿಕಿತ್ಸೆ ನೀಡುತ್ತಿದ್ದಾರೆ. ಜಿಲ್ಲಾ ಆರೋಗ್ಯಾಧಿಕಾರಿ ಡಾ|ಅಂಬಾರಾಯ ರುದ್ರವಾಡಿ, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ| ಶಿವಶರಣಪ್ಪ, ಸುಲೇಪೇಟ ಪ್ರಾಥಮಿಕ ಕೇಂದ್ರ ಆರೋಗ್ಯಾಧಿಕಾರಿ ಡಾ| ಲಕ್ಷ್ಮಣ ಜಾಧವ ಭೇಟಿ ನೀಡಿದ್ದಾರೆ. ಗ್ರಾಮದಲ್ಲಿ ಮುಂಜಾಗ್ರತಾ ಕ್ರಮ ಕೈಕೊಳ್ಳಲಾಗಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

Ra

Congress; ಅಮೇಠಿಗೆ ರಾಹುಲ್‌: ಅಂತಿಮ ನಿರ್ಧಾರ ಖರ್ಗೆ ಹೆಗಲಿಗೆ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Ra

Congress; ಅಮೇಠಿಗೆ ರಾಹುಲ್‌: ಅಂತಿಮ ನಿರ್ಧಾರ ಖರ್ಗೆ ಹೆಗಲಿಗೆ

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.