ಚಂದ್ರಂಪಳ್ಳಿ ಅಭಿವೃದ್ಧಿಗೆ 7.50 ಕೋಟಿ ರೂ.
ಚಂದ್ರಂಪಳ್ಳಿ ಪ್ರವಾಸಿ ತಾಣವನ್ನಾಗಿ ಮಾಡುವ ನನ್ನ ಕನಸು ಈಡೇರಿದೆ.
Team Udayavani, Sep 26, 2022, 5:10 PM IST
ಚಿಂಚೋಳಿ: ಜಿಲ್ಲೆಯಲ್ಲೇ ಅತಿ ಹೆಚ್ಚು ಅರಣ್ಯ ಪ್ರದೇಶ ಹೊಂದಿರುವ ಮಿನಿ ಮಲೆನಾಡು ಪ್ರದೇಶವೆಂದೇ ಪ್ರಖ್ಯಾತಿ ಪಡೆದಿರುವ ಕುಂಚಾವರಂ ವನ್ಯಜೀವಿಧಾಮ ಮತ್ತು ಚಂದ್ರಂಪಳ್ಳಿ, ಗೊಟ್ಟಂಗೊಟ್ಟ ಪ್ರವಾಸಿ ತಾಣಗಳನ್ನು ಅಭಿವೃದ್ಧಿ ಪಡಿಸುವುದಕ್ಕೆ ಕೆಕೆಆರ್ಡಿಬಿ ಮತ್ತು ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದಿಂದ 5ಕೋಟಿ ರೂ., ಪ್ರವಾಸೋದ್ಯಮ ಇಲಾಖೆಯಿಂದ 2.50 ಕೋಟಿ ರೂ. ಮಂಜೂರಾಗಿದ್ದು, ಒಟ್ಟು 7.50 ಕೋಟಿ ರೂ.ಗೆ ಆಡಳಿತಾತ್ಮಕ ಅನುಮೋದನೆ ದೊರಕಿದೆ.
ಮಾಜಿ ಸಚಿವ ಸಿ.ಪಿ.ಯೋಗೇಶ್ವರ ಗೊಟ್ಟಂಗೊಟ್ಟ, ಎತ್ತಪೋತ ಜಲಧಾರೆ, ಚಂದ್ರಂಪಳ್ಳಿ ಜಲಾಶಯ ಸುತ್ತಲಿನ ಅರಣ್ಯ ಪ್ರದೇಶಕ್ಕೆ ಹಿಂದೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ಪ್ರವಾಸಿತಾಣ ಅಭಿವೃದ್ಧಿಗಾಗಿ 2ಕೋಟಿ ರೂ. ಮಂಜೂರು ಮಾಡುವುದಾಗಿ ಭರವಸೆ ನೀಡಿದ್ದರು. ಬಿಡುಗಡೆಯಾಗಿದೆ. ಚಂದ್ರಂಪಳ್ಳಿ ನಿಸರ್ಗಧಾಮದಲ್ಲಿ ಜಂಗಲ್ ಲಾಡ್ಜ್ ನಿರ್ಮಾಣಕ್ಕೆ 2ಕೋಟಿ ರೂ. ಅನುದಾನ ಪ್ರವಾಸೋದ್ಯಮ ಇಲಾಖೆಯಿಂದ
ಮಂಜೂರಾಗಿದೆ. ಚಂದ್ರಂಪಳ್ಳಿ ಜಲಾಶಯದಲ್ಲಿ ಬೋಟಿಂಗ್ ಮತ್ತು ಜಲಕ್ರೀಡೆಗಾಗಿ ಪ್ರತ್ಯೇಕವಾಗಿ 50ಲಕ್ಷ ರೂ. ಮಂಜೂರಾಗಿದೆ.
ಚಂದ್ರಂಪಳ್ಳಿ ಜಲಾಶಯ ಸುತ್ತಮುತ್ತ ಪ್ರವಾಸಿಗರು ನಡೆದಾಡಲು ಎರಡು ರಸ್ತೆ, ನಾಲ್ಕು ಪರಗೋಲಾ, ಮಕ್ಕಳ ಆಟದ ಮೈದಾನ, ಮರಳು ಹಾಸಿಗೆ, ಮಕ್ಕಳ
ಆಟಿಕೆ ಸಾಮಗ್ರಿ ಮತ್ತು ಮರಳು ಹಾಸಿಗೆ ಎಂಪಿ ಥಿಯೇಟರ್, ಪ್ರವೇಶ ದ್ವಾರ, ಟಿಕೆಟ್ ಕೌಂಟರ್, ಕಾವಲುಗಾರನ ಕೊಠಡಿ, ಪಾರ್ಕಿಂಗ್, ಶೌಚಾಲಯ, ಭೋಜನಾಲಯ ಕೋಣೆ, ಸೋಲಾರ್ ವಿದ್ಯುತ್ ದೀಪಗಳ ವ್ಯವಸ್ಥೆ, ಬೆಂಚುಗಳು, ವಿಶ್ರಾಂತಿ ಕೋಣೆ, ಶುದ್ಧ ನೀರಿನ ಘಟಕ ಸೇರಿದಂತೆ ಇನ್ನಿತರೆ ಸೌಲಭ್ಯ ಒದಗಿಸಲಾಗುತ್ತಿದೆ.
ಚಿಂಚೋಳಿ ತಾಲೂಕಿನ ನಿಸರ್ಗದ ಪ್ರಕೃತಿ ಮಡಿಲಿನಲ್ಲಿರುವ ಚಂದ್ರಂಪಳ್ಳಿ ಜಲಾಶಯ ಸುತ್ತಮುತ್ತಲಿನ ಪ್ರದೇಶವನ್ನು ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿ ಪಡಿಸಲು ಕಳೆದ ಮೂರು ವರ್ಷಗಳಿಂದ ಸಾಕಷ್ಟು ಪ್ರಯತ್ನಿಸಿದ ಫಲವಾಗಿ ಸರಕಾರದಿಂದ 7.50ಕೋಟಿ ರೂ. ಅನುದಾನ ಮಂಜೂರಾಗಿದೆ. ಇದರಿಂದ ಈ ಭಾಗದಲ್ಲಿ ಉದ್ಯೋಗ ಸೃಷ್ಟಿಯಾಗಲಿವೆ. ಬೇರೆ ಕಡೆಯಿಂದ ಬರುವ ಪ್ರವಾಸಿಗರಿಗೆ ಜಂಗಲ್ ಲಾಡ್ಜ್ ನಿರ್ಮಿಸಲಾಗುವುದು. ಜಲಕ್ರೀಡೆ ಮತ್ತು
ಬೋಟಿಂಗ್ ವ್ಯವಸ್ಥೆ ನಡೆಸಲಾಗುತ್ತಿದೆ. ಚಂದ್ರಂಪಳ್ಳಿ ಪ್ರವಾಸಿ ತಾಣವನ್ನಾಗಿ ಮಾಡುವ ನನ್ನ ಕನಸು ಈಡೇರಿದೆ.
ಡಾ|ಅವಿನಾಶ ಜಾಧವ, ಶಾಸಕ
ಚಂದ್ರಂಪಳ್ಳಿ ಪ್ರವಾಸಿ ತಾಣ ಅಭಿವೃದ್ಧಿಗಾಗಿ ಪ್ರವಾಸೋದ್ಯಮ ಇಲಾಖೆ ಮತ್ತು ಕೆಕೆಆರ್ಡಿಬಿ ವತಿಯಿಂದ ಹಾಗೂ ಸರ್ಕಾರದಿಂದ ಒಟ್ಟು 7.50ಕೋಟಿ ರೂ. ಅನುದಾನ ಮಂಜೂರಾಗಿದೆ. ಚಂದ್ರಂಪಳ್ಳಿ ಇನ್ಮುಂದೆ ಪ್ರವಾಸಿಗರ ಅಚ್ಚುಮೆಚ್ಚಿನ ತಾಣವಾಗಲಿದೆ. ಕೇಂದ್ರ ಸಚಿವ ಭಗವಂತ ಖೂಬಾ, ಸಂಸದ ಡಾ|ಉಮೇಶ ಜಾಧವ, ಶಾಸಕ ಡಾ|ಅವಿನಾಶ ಜಾಧವ ಪ್ರಯತ್ನದಿಂದ ಅಭಿವೃದ್ಧಿಯಾಗುತ್ತಿರುವುದು ಸಂತಸವಾಗಿದೆ.
ಸಂಜೀವಕುಮಾರ ಚವ್ಹಾಣ, ವಲಯ ಅರಣ್ಯಾಧಿಕಾರಿ,
ವನ್ಯಜೀವಿಧಾಮ ಇಲಾಖೆ, ಕುಂಚಾವರಂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಧಾನಸಭಾ ಚುನಾವಣೆಯಲ್ಲಿ ಮೋದಿ ಪ್ರಚಾರ ಮಾಡಿದೆಡೆ ಕಾಂಗ್ರೆಸ್ ಗೆದ್ದಿದೆ: ಡಾ. ಶರಣಪ್ರಕಾಶ
HKE ಚುನಾವಣೆ: ಅಧ್ಯಕ್ಷರಾಗಿ ಶಶೀಲ್ ಜಿ. ನಮೋಶಿ ಆಯ್ಕೆ
PM ಮೋದಿ ಸಮನಾದ ನಾಯಕ ಕಾಂಗ್ರೆಸ್ನಲ್ಲಿಲ್ಲ: ಬಿಎಸ್ವೈ
Kalaburagi; ಅರ್ಧ ಗಂಟೆ ಭಾಷಣದಲ್ಲಿ ಖರ್ಗೆ ಹೆಸರನ್ನೇ ಉಲ್ಲೇಖಿಸದ ಮೋದಿ
Kalaburagi; ಕರ್ನಾಟಕದ ಜನತೆ ಕೋಪಗೊಂಡಿದ್ದಾರೆ, ಎಚ್ಚೆತ್ತುಕೊಂಡಿದ್ದಾರೆ:ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್
ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!
Pan India: ಯಶ್ ʼಟಾಕ್ಸಿಕ್ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ