ಜಿಲ್ಲೆಯಲ್ಲಿ 7.84 ಲಕ್ಷ ಹೆಕ್ಟೇರ್‌ ಭೂಮಿ ಬಿತ್ತನೆ


Team Udayavani, May 21, 2022, 11:50 AM IST

2land

ಕಲಬುರಗಿ: ಕಳೆದ ಒಂದು ವಾರದಿಂದ ಭಾರಿ ಮಳೆಯಾಗುತ್ತಿದೆ. ಇದೇ ಮಳೆಗಾಲದ ಆರಂಭ ಎಂದು ಕೊಂಡು ಈ ಬಾರಿಯ ಮುಂಗಾರು ಹಂಗಾಮಿಗಾಗಿ ರೈತರು ಸಜ್ಜಾಗುತ್ತಿದ್ದಾರೆ. ಇದಕ್ಕೆ ಪೂರಕ ಎನ್ನುವಂತೆ ಕೃಷಿ ಇಲಾಖೆ ಕೊಡವಿಕೊಂಡು ಎದ್ದಿದೆ.

ಪ್ರಸಕ್ತ ಮುಂಗಾರು ಹಂಗಾಮಿಗಾಗಿ ಒಟ್ಟು 7.84.353 ಹೆಕ್ಟೇರ್‌ ಜಮೀನನಲ್ಲಿ ಬಿತ್ತನೆಯ ಗುರಿ ಹೊಂದಿದೆ. ಇದೇ ವೇಳೆ ಈ ಬಾರಿ ಜಿಲ್ಲೆಯಲ್ಲಿ ಕಬ್ಬು ಮತ್ತು ಸೋಯಾಬೀನ್‌ ಬೆಳೆಯುವ ಕ್ಷೇತ್ರ ವಿಸ್ತರಣೆ ಆಗಿದೆ. ರೈತರು ತೊಗರಿ ಕುರಿತು ಸರ್ಕಾರಗಳು ತೋರುತ್ತಿರುವ ನಿರ್ಲಕ್ಷ್ಯದಿಂದಾಗಿ ವಾಣಿಜ್ಯ ಬೆಳಗಳತ್ತ ಚಿತ್ತ ಹರಿಸಿದ್ದಾರೆ. ಅಲ್ಲದೇ, ಈ ಬಾರಿ ಹತ್ತಿ ಬೆಳೆಯುವ ಕ್ಷೇತ್ರವೂ ವಿಸ್ತಾರಗೊಳ್ಳುತ್ತಿರುವುದು ಸಂತಸ ಮೂಡಿಸಿದೆ.

5.52ಲಕ್ಷ ಹೆಕ್ಟೇರ್ನಲ್ಲಿ ತೊಗರಿ: ಈ ಬಾರಿ 5,52,622 ಹೆಕ್ಟೇರ್‌ ಪ್ರದೇಶದಲ್ಲಿ ತೊಗರಿ ಬೆಳೆಯುವ ಸಾಧ್ಯತೆ ಇದೆ. ಕಳೆದ ಬಾರಿಗಿಂತ ತುಸು ಕಡಿಮೆ ಎನ್ನಿಸಿದರೂ ಉತ್ತಮ ಇಳುವರಿ ನಿರೀಕ್ಷೆ ಮಾಡಲಾಗಿದೆ. ಅಂದಾಜು 5.61 ಲಕ್ಷ ಮೆಟ್ರಿಕ್‌ ಟನ್‌ ಉತ್ಪಾದನೆ ಗುರಿ ಇಟ್ಟುಕೊಳ್ಳಲಾಗಿದೆ. ಅದರೊಂದಿಗೆ 52,297 ಹೆಕ್ಟೇರ್‌ನಲ್ಲಿ ಹೆಸರು, 32,451 ಹೆಕ್ಟೇರ್‌ನಲ್ಲಿ ಉದ್ದು ಬೆಳೆಯಲು ಯೋಜಿಸಲಾಗಿದೆ. ವಾಣಿಜ್ಯ ಬೆಳೆಗಳಾದ ಸೂರ್ಯಕಾಂತಿ, ಶೇಂಗಾ, ಸೋಯಾಬೀನ್‌, ಔಡಲ ಎಲ್ಲವೂ ಸೇರಿ ಒಟ್ಟು 35,691 ಹೆಕ್ಟೇರ್‌ನಲ್ಲಿ ಬೆಳೆ ಬೆಳೆಯಲಾಗುತ್ತಿದೆ. ಇದರಿಂದ ಒಟ್ಟು 34,962 ಮೆ.ಟನ್‌ ಉತ್ಪಾದನೆ ನಿರೀಕ್ಷೆ ಹೊಂದಲಾಗಿದೆ.

ಕಬ್ಬು, ಹತ್ತಿ ಕ್ಷೇತ್ರ ಹೆಚ್ಚಳ: ಈ ಬಾರಿ ಮುಂಗಾರು ಹಂಗಾಮಿನಲ್ಲಿ ರೈತರು ಕಬ್ಬಿಗೆ ಹೆಚ್ಚು ಜೋತು ಬೀಳುವ ಲಕ್ಷಣಗಳು ಕಾಣಿಸಿವೆ. ಅಂದಾಜು 29,683 ಹೆಕ್ಟೇರ್‌ ಪ್ರದೇಶದಲ್ಲಿ ಕಬ್ಬು ಬೆಳೆಯುವ ಸಾಧ್ಯತೆಗಳು ನಿಚ್ಚಳವಾಗಿವೆ. ಇದೇ ವೇಳೆ ಹತ್ತಿ ಕ್ಷೇತ್ರದಲ್ಲೂ ವಿಸ್ತರಣೆ ಕಾಣುತ್ತಿದೆ. ಒಟ್ಟು 63,458 ಹೆಕ್ಟೇರ್‌ನಲ್ಲಿ ಬೆಳೆಯುವ ಯೋಜನೆ ಹೊಂದಲಾಗಿದೆ. ಕಳೆದ ವರ್ಷ ಹತ್ತಿಗೆ ಭಾರಿ ಬೆಲೆ ಬಂದ ಹಿನ್ನೆಲೆಯಲ್ಲಿ ರೈತರು ಸಹಜವಾಗಿಯೇ ಹತ್ತಿ ಬೆಳೆಯತ್ತ ಆಕರ್ಷಿತರಾಗಿದ್ದಾರೆ ಎನ್ನುತ್ತಾರೆ ಕೃಷಿ ಅಧಿಕಾರಿಗಳು.

ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದೆ. ಇದು ಸಾಂಪ್ರದಾಯಿಕ ಮುಂಗಾರಿನ ಆರಂಭವಲ್ಲದೇ ಇದ್ದರೂ, ರೈತರು ಹೊಲ ಸಜ್ಜು ಮಾಡುತ್ತಿದ್ದಾರೆ. ಇದರಿಂದಾಗಿ ಕೃಷಿ ಚಟುವಟಿಕೆ ಆರಂಭಗೊಂಡಿವೆ. ಒಟ್ಟು 7.84 ಲಕ್ಷ ಹೆಕ್ಟೇರ್‌ನಲ್ಲಿ ಬೆಳೆ ಬೆಳೆಯುವ ಗುರಿ ಹೊಂದಿದ್ದು, 31,30,483 ಮೆಟ್ರಿಕ್‌ ಟನ್‌ ಆಹಾರ ಉತ್ಪಾದನೆಯ ಗುರಿ ಹೊಂದಲಾಗಿದೆ. ಕಬ್ಬು, ಸೋಯಾಬೀನ್‌ ಕ್ಷೇತ್ರ ವಿಸ್ತರಣೆ ಆಗುತ್ತಿದೆ. ರತೇಂದ್ರನಾಥ ಸೂಗೂರು, ಜೆಡಿ ಕೃಷಿ ಇಲಾಖೆ

ಟಾಪ್ ನ್ಯೂಸ್

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.