ಪಿಕಾರ್ಡ್‌ ಬ್ಯಾಂಕ್‌ಗೆ 8 ಕೋಟಿ ಸಾಲದ ಹೊರೆ


Team Udayavani, Sep 24, 2018, 10:31 AM IST

gul-2.jpg

ಚಿಂಚೋಳಿ: ತಾಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ ಕಾಸ್ಕಾರ್ಡ್‌ ಬ್ಯಾಂಕಿನಿಂದ ಪಡೆದುಕೊಂಡ ವಿವಿಧ ಯೋಜನೆ ಅಡಿಯಲ್ಲಿ 820.09 ಲಕ್ಷ ರೂ. ಸಾಲದ ಹೊರ ಬಾಕಿ ಇದ್ದು, ಬ್ಯಾಂಕಿಗೆ ಸಾಲಗಾರರ ಸದಸ್ಯರಿಂದ ಬರಬೇಕಾದ ಸಾಲದ ಅಸಲು 335.42 ಲಕ್ಷ ರೂ. ಇದೆ ಎಂದು ಪಿಕಾರ್ಡ್‌ ಬ್ಯಾಂಕ್‌ ಅಧ್ಯಕ್ಷ ಜಗದೀಶಸಿಂಗ ಠಾಕೂರ ತಿಳಿಸಿದರು.

ಪಟ್ಟಣದ ಪಿಕಾರ್ಡ್‌ ಬ್ಯಾಂಕ್‌ ಸಭಾಂಗಣದಲ್ಲಿ ರವಿವಾರ ನಡೆದ 2017-18ನೇ ಸಾಲಿನ 52ನೇ ವಾರ್ಷಿಕ ಮಹಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬ್ಯಾಂಕ್‌ನಲ್ಲಿ 10,984 ಸದಸ್ಯರು ಇದ್ದು, ಅದರಲ್ಲಿ ಪರಿಶಿಷ್ಟ ಜಾತಿಯವರು 1240 ಇದ್ದು, ಶೇರು ಬಂಡವಾಳ 64.95ಲಕ್ಷ ರೂ.ಇದೆ. ಬ್ಯಾಂಕಿನ ವಸೂಲಿ ಮತ್ತು ಬಾಕಿ 274.33 ಲಕ್ಷ ರೂ. ಇದ್ದು ಇದರಲ್ಲಿ 108.76ಲಕ್ಷ ರೂ. ವಸೂಲಿ ಆಗಿದೆ. ಬಾಕಿ 167.57ಲಕ್ಷ ರೂ.ಗಳನ್ನು ಹೊಸ ಸದಸ್ಯರಿಗೆ ಸಾಲ ಹಂಚಿಕೆ
ಅರ್ಹತೆ ಪಡೆದುಕೊಳ್ಳುವುದಕ್ಕಾಗಿ ಮರುಪಾವತಿ ಆಗಬೇಕಾಗಿದೆ. ಸಾಲ ವಸೂಲಾತಿ ಶೇ. 38.92 ರಷ್ಟು ಆಗಿದೆ ಎಂದು ತಿಳಿಸಿದರು.

ನಿರ್ದೇಶಕ ರಮೇಶ ಯಾಕಾಪುರ ಮಾತನಾಡಿ, ತಾಲೂಕನ್ನು ಪ್ರಸಕ್ತ ಸಾಲಿನಲ್ಲಿ ಸರಕಾರ ಬರಗಾಲ ಪೀಡಿತ ಪ್ರದೇಶವೆಂದು ಘೋಷಣೆ ಮಾಡಿದೆ. ಸಾಲ ವಸೂಲಾತಿ ಮತ್ತು ಮರು ಪಾವತಿ ಆಗಿಲ್ಲ. ರಿಯಾಯ್ತಿ ಕೊಡಬೇಕಾಗಿದೆ. ಸಾಲಗಾರರಿಗೆ ಬ್ಯಾಂಕ್‌ ವತಿಯಿಂದ ಸಾಲ ಮರುಪಾವತಿಗಾಗಿ ಯಾವುದೇ ನೋಟಿಸ್‌ ಜಾರಿ ಗೊಳಿಸಬಾರದು. ಈ ಕುರಿತು ಸರಕಾರದ ಆದೇಶವಿದೆ ಎಂದು ಹೇಳಿದರು.

ಪಿಕಾರ್ಡ್‌ ಬ್ಯಾಂಕ್‌ ಕಾರ್ಯದರ್ಶಿ ನಾಗಣ್ಣ ಎಸ್‌. ಯಲೆ ಮಾತನಾಡಿ, ಬ್ಯಾಂಕ್‌ ಕಳೆದ ಮೂರು ವರ್ಷಗಳಿಂದ ನಷ್ಟದಲ್ಲಿದೆ ಎಂದರು. ಆಗ ಮಾಜಿ ನಿರ್ದೇಶಕ ಭೀಮರಾವ್‌ ಮರಾಠ ಮಾತನಾಡಿ, ಹಳೆ ಪಿಕಾರ್ಡ್‌ ಬ್ಯಾಂಕ್‌ ಶಿಥಿಲಾವಸ್ಥೆಯಲ್ಲಿದೆ. ಅದನ್ನು ಮಾರಾಟ ಮಾಡಿದರೆ ಬ್ಯಾಂಕಿಗೆ ಲಾಭ ಆಗುತ್ತದೆ ಎಂದು ಸಲಹೆ ನೀಡಿದರು. ಆಗ ಸದಸ್ಯರು ಬ್ಯಾಂಕಿನ ಜಾಗವನ್ನು ಕೆಲವರು ಕಬಳಿಕೆ ಮಾಡಿದ್ದಾರೆ. ಪುರಸಭೆಯಿಂದ ಮಾಹಿತಿ ಪಡೆದು ಕ್ರಮ ಕೈಗೊಳ್ಳಿ ಎಂದರು.

ಕಾರ್ಯದರ್ಶಿ ನಾಗಣ್ಣ,ಎಸ್‌. ಯಲೆ ಮಾತನಾಡಿ, ಬ್ಯಾಂಕಿನ ಖರ್ಚು, ಲಾಭ ಮತ್ತು ಹಾನಿ ಬಗ್ಗೆ ವಿವರಿಸಿದರು. ಉಪಾಧ್ಯಕ್ಷ ಬಸವರಾಜ ಕೆರೋಳಿ, ಜಿಪಂ ಸದಸ್ಯ ಸಂಜೀವನ್‌ ಯಾಕಾಪುರ, ನಿರ್ದೇಶಕರಾದ ರಮೇಶ ಯಾಕಾಪುರ, ಜರಣಪ್ಪ ಚಿಂಚೋಳಿ, ಜಗನ್ನಾಥ ಹಲಚೇರಿ, ಕೋಮಲಾಬಾಯಿ, ಪಂಚಾಕ್ಷರಿ ಸ್ವಾಮಿ, ಬಾಬುರಾವ್‌ ಬೋಯಿ, ಮಹಾದೇವ ರಟಕಲ್‌, ಲಕ್ಷ್ಮಣ ನಾಯಕ, ಮಹಾದೇವಿ ಇದ್ದರು. ಚಂದ್ರಕಾಂತ ರಾಠೊಡ ಸ್ವಾಗತಿಸಿದರು, ರಾಜಕುಮಾರ ಕಟ್ಟಿಮನಿ ವಂದಿಸಿದರು. 

ಟಾಪ್ ನ್ಯೂಸ್

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.