ಮದುವೆಗೆ ಬಂದು ಅಕ್ಷತೆ ಹಾಕಿದವರಿಗೆ ಪುಸ್ತಕ-ಸಸಿ ಕೊಟ್ಟ ಮದುಮಗ
Team Udayavani, May 22, 2022, 7:19 PM IST
ವಾಡಿ: ಮದುವೆಗೆ ಬಂದು ಅಕ್ಷತೆ ಹಾಕುವ ಮೂಲಕ ಆಶೀರ್ವದಿಸಿ ಶುಭಕೋರಿದ ನೆಂಟರಿಗೆ, ಸ್ನೇಹಿತರಿಗೆ ಮದುಮಗನೋರ್ವ ಸಾಹಿತ್ಯ ಕೃತಿ ಜತೆಗೆ ಸಸಿಗಳನ್ನು ಕೊಟ್ಟು ಪರಿಸರ ಕಾಳಜಿ ಮೆರದ ಪ್ರಸಂಗ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ನಡೆದಿದೆ.
ರವಿವಾರ ಪಟ್ಟಣದ ಶ್ರೀಮಲ್ಲಿಕಾರ್ಜುನ ದೇವಸ್ಥಾನದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕೋಲಿ ಸಮಾಜದ ಯುವ ಮುಖಂಡ, ಪರಿಸರ ಮತ್ತು ಸಾಹಿತ್ಯ ಪ್ರೇಮಿ ಮಡಿವಾಳ ಬಿದನೂರ ಅವರು ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ.
ಮದುವೆ ಸಮಾರಂಭಕ್ಕೆಂದು ಸುಮಾರು ಎರಡು ನೂರಕ್ಕೂ ಹೆಚ್ಚು ಸಸಿಗಳನ್ನು ಮೊದಲೇ ತರಿಸಿಟ್ಟುಕೊಂಡಿದ್ದರು. ವೇದಿಕೆಯಲ್ಲಿ ಶುಭ ಕೋರಲು ಬಳಿ ಬಂದ ಪ್ರತಿಯೊಬ್ಬರ ಕೈಗೆ ಒಂದೊಂದು ಪುಸ್ತಕ ಹಾಗೂ ಸಸಿ ಕೊಟ್ಟು ಗಮನ ಸೆಳೆದಿದ್ದಾರೆ.
ಇದನ್ನೂ ಓದಿ:ತೀವ್ರ ತರಹದ ಮಾನಸಿಕ ಅನಾರೋಗ್ಯಗಳು ಮತ್ತು ಮನಃಶಾಸ್ತ್ರೀಯ ಪುನರ್ವಸತಿ ಯೋಜನೆ
ಮುಂಗಾರು ಮಳೆಯ ಆರಂಭದಲ್ಲಿ ವಿತರಿಸಲಾದ ನೂರಾರು ಸಸಿಗಳಲ್ಲಿ ಕೆಲವೊಂದಿಷ್ಟಾದರೂ ಭೂಮಿಗೆ ಬೇರು ಬಿಟ್ಟು ಮರವಾಗಿ ನಿಂತರೆ ಪರಿಸರ ಉಳಿಸಿದಂತಾಗುತ್ತದೆ. ಪ್ರಗತಿಪರ ಬರಹಗಾರರ ಸಾಹಿತ್ಯ ಕೃತಿಗಳನ್ನು ಜನರಿಗೆ ವಿತರಿಸಿದರೆ ಅವು ಜ್ಞಾನ ಕೊಟ್ಟು ಮನೆ ಬೆಳಗುತ್ತವೆ. ಪುಸ್ತಕ ವ್ಯಾಪಾರಿಗೂ ಮತ್ತು ಸಾಹಿತ್ಯ ರಚನೆಕಾರರಿಗೂ ಸಹಕಾರ ನೀಡಿದಂತಾಗುತ್ತದೆ ಎಂಬ ಉದ್ದೇಶದಿಂದ ಈ ತಯಾರಿ ಮಾಡಲಾಯಿತು ಎಂದು ಮದುಮಗ ಮಡಿವಾಳ ಬಿದನೂರ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ
MUST WATCH
ಹೊಸ ಸೇರ್ಪಡೆ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ