ಕಸ ಚೆಲ್ಲುವಲ್ಲಿ ಬಣ್ಣ ಬಣ್ಣದ ರಂಗೋಲಿ; ಪಾಲಿಕೆ ಕಮಿಷನರ್ ಹೊಸ ಐಡಿಯಾ

ಕಸ ಚೆಲ್ಲಿ ಪರಿಸರ ಕಲುಷಿತಗೊಳಿಸುವುದನ್ನು ತಡೆಯವ ನಿಟ್ಟಿನಲ್ಲಿ ಈ ಮಾರ್ಗ ಅನುಸರಿಸಲಾಗುತ್ತಿದೆ

Team Udayavani, Sep 5, 2022, 5:42 PM IST

ಕಸ ಚೆಲ್ಲುವಲ್ಲಿ ಬಣ್ಣ ಬಣ್ಣದ ರಂಗೋಲಿ; ಪಾಲಿಕೆ ಕಮಿಷನರ್ ಹೊಸ ಐಡಿಯಾ

ಕಲಬುರಗಿ: ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಬೇಕಾಬಿಟ್ಟಿಯಾಗಿ ಮನೆ ಸುತ್ತಲಿನ ಪರಿಸರದಲ್ಲಿ ಜನರು ಕಸ ಚೆಲ್ಲುವುದನ್ನು ತಡೆಯುವ ನಿಟ್ಟಿನಲ್ಲಿ ಪಾಲಿಕೆ ಸಿಬ್ಬಂದಿ ಕಸ ಚೆಲ್ಲುವ ಸ್ಥಳದಲ್ಲಿ ಮಟ್ಟಸಾಗಿ ಕಸ ಗೂಡಿಸಿ ಸ್ವಚ್ಛ ಮಾಡಿ ಬಣ್ಣ ಬಣ್ಣದ ರಂಗೋಲಿ ಬಿಡಿಸಿ ಕಸ ಚೆಲ್ಲುವವರ ಮನಪರಿವರ್ತನೆಗೆ ವಿನೂತನ ಹೆಜ್ಜೆ ಇಟ್ಟಿದ್ದಾರೆ.

ಇದು ನಿಜಕ್ಕೂಹೊಸಐಡಿಯಾ! ಸಾರ್ವಜನಿಕರು, ಮಹಿಳೆಯರು ಬೇಕಾಬಿಟ್ಟಿಯಾಗಿ ಕಸ ಚೆಲ್ಲಿ ಪರಿಸರ ಕಲುಷಿತಗೊಳಿಸುವುದನ್ನು ತಡೆಯವ ನಿಟ್ಟಿನಲ್ಲಿ ಈ ಮಾರ್ಗ ಅನುಸರಿಸಲಾಗುತ್ತಿದೆ. ವಿಲೇವಾರಿ ಅರಿವು ಮೂಡಿಸುವ ಮೂಲಕ ಸ್ವಚ್ಛ ಕಲಬುರಗಿ ಮಾಡಲು ಮುಂದಾಗಿದ್ದಾರೆ. ಈ ಹಿಂದೆ ವಾರ್ಡುವಾರು ಜಾಗೃತಿ ಮಾಡಿದರು. ಪೋಸ್ಟರ್‌ಗಳನ್ನು ಹಚ್ಚಿದರೂ, ಧನಿವರ್ಧಕ ಮೂಲಕ ಸಂದೇಶ ನೀಡಿದರೂ, ಕೆಲವು ಕಡೆಗಳಲ್ಲಿ ದಂಡದ ಪ್ರಯೋಗವೂ ಮಾಡಿದರೂ
ಜನತೆ ಕಸ ಚೆಲ್ಲುವುದನ್ನು ನಿಲ್ಲಿಸಲೇ ಇಲ್ಲ.

ರಂಗೋಲಿ ಹೊಸ ಐಡಿಯಾ: ಈಗ ಪಾಲಿಕೆಯ ಹೊಸ ಕಮಿಷನರ್‌ ಭುವನೇಶ ಪಾಟೀಲ ಹೊಸ ಐಡಿಯಾ ಮಾಡಿದ್ದಾರೆ. ಕಸ ಚೆಲ್ಲುವ ಸ್ಥಳಗಳಲ್ಲಿ ಸ್ವಚ್ಛ ಮಾಡಿ ಅಲ್ಲಿ ರಂಗೋಲಿ ಬಿಡಿಸುವುದು. ಕಸ ಚೆಲ್ಲಲು ಬರುವ ಜನರು ಅದನ್ನು ನೋಡಿಯಾದರೂ, ಸಾರ್ವಜನಿಕ ಸ್ಥಳಗಳಲ್ಲಿ ಕಸ ಚೆಲ್ಲಬಾರದು ಎಂದು ಜಾಗೃತರಾದರೆ ಸಾಕು ನಾವು ಸಕ್ಸಸ್‌ ಎನ್ನುವುದು ಪಾಲಿಕೆ ಸಿಬ್ಬಂದಿ ಅಂಬೋಣವಾಗಿದೆ.

ಇದೆಲ್ಲದರ ಮಧ್ಯೆ ಕಳೆದ ಕೆಲವು ದಿನಗಳಿಂದ ನಗರದ ವಾರ್ಡ್‌ ನಂ. 2ರ ಕಪನೂರು ಮುಖ್ಯ ರಸ್ತೆ, ವಾರ್ಡ್‌ ನಂ.10ರ ಶಹಾಬಜಾರ್‌ ರಸ್ತೆ, ವಾರ್ಡ್‌ ನಂ. 45ಕೋರ್ಟ್‌ ರಸ್ತೆ, ಎಸ್‌ಆರ್‌ಎನ್‌ ಮೆಹತಾ ಶಾಲೆ ಹತ್ತಿರದ ರಸ್ತೆಗಳಲ್ಲಿ ಪಾಲಿಕೆಯ ಮಹಿಳಾ ಸಿಬ್ಬಂದಿ ಕಸವಿದ್ದ ಜಾಗೆಯಲ್ಲಿ ಸ್ವಚ್ಛಗೊಳಿಸಿ ವಿವಿಧ ಚಿತ್ತಾರದ ರಂಗೋಲಿ ಬಿಡಿಸಿದರು. ಈ ವೇಳೆ ಕಸ ಚೆಲ್ಲಲು ಬರುವ ವ್ಯಕ್ತಿ ಅಲ್ಲಿ ಕಸ ಚೆಲ್ಲಲು ಮನಸ್ಸು ಬಾರದೇ ನಿಗದಿತ ಸ್ಥಳದಲ್ಲಿ ವಿಲೇವಾರಿ ಮಾಡುತ್ತಾನೆ ಎನ್ನುವುದು ಪಾಲಿಕೆಯ ಅನಿಸಿಕೆ. ಇದು ಎಷ್ಟರ ಮಟ್ಟಿಗೆ ಯಶಸ್ಸು ಕಾಣಬಹುದು ಎನ್ನುವುದನ್ನು ಪಾಲಿಕೆ ಸಿಬ್ಬಂದಿ ಗಮನಿಸುತ್ತಿದ್ದಾರೆ.

ಪಾಲಿಕೆ ಸಿಬ್ಬಂದಿ ಅನಿಸಿಕೆ: ಇದೊಂದು ರೀತಿ ಖುಷಿ ಎನ್ನಿಸುವ ಕೆಲಸ. ಕಸಗೂಡಿಸುವ ನಾವು ಇನ್ಮುಂದೆ ರಸ್ತೆಗಳಲ್ಲಿ ರಂಗೋಲಿ ಹಾಕಿದರೆ ಕಸ ಗುಡಿಸೋದಾದರೂ ತಪ್ಪುತ್ತದೆ. ಜನರಿಗೆ ಈಚೆಗೆ ಹಲವಾರು ಬಾರಿ ಸರ್ಕಾರದವರು ಪ್ರಚಾರ ಮಾಡಿ ಹೇಳ್ತಿದ್ರೂ ಜನ ಕಸವನ್ನು ಎಲ್ಲಿ ಬೇಕಲ್ಲಿ ಬಿಸಾಡುತ್ತಿದ್ದಾರೆ. ಆದ್ದರಿಂದ ನಮ್ಮ ಕಮಿಷನರ್‌ ಹೊಸ ಐಡಿಯಾ ಮಾಡಿದ್ದಾರೆ. ನೋಡ್ಬೇಕು. ಜನಾ ಏನ್ಮಾಡ್ತಾರೋ..ಎಂದು ಪಾಲಿಕೆ ಸಿಬ್ಬಂದಿ ಅನಿಸಿಕೆ ವ್ಯಕ್ತಪಡಿಸಿದ್ದಾರೆ.

ಸೂರ್ಯಕಾಂತ್ ಎಂ.ಜಮಾದಾರ

ಟಾಪ್ ನ್ಯೂಸ್

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.