ಕೆರೆ ಅಭಿವೃದ್ಧಿ ಪ್ರಾಧಿಕಾರಸ್ಥಾಪನೆಗೆ ಸಮಗ್ರ ತಿದ್ದುಪಡಿ
Team Udayavani, Feb 12, 2018, 11:26 AM IST
ಕಲಬುರಗಿ: ರಾಜ್ಯದಲ್ಲಿರುವ ಎಲ್ಲ ಕೆರೆಗಳನ್ನು ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಗೊಳಪಡಿಸಿ ಅಭಿವೃದ್ಧಿಗೊಳಿಸಲು ಕೆರೆ ಅಭಿವೃದ್ಧಿ ಪ್ರಾಕಾರ ರಚನೆಗೆ ಒಂದು ವಾರದಲ್ಲಿ ಸಮಗ್ರ ಕಾನೂನು ತಿದ್ದುಪಡಿ ಮಾಡಲಾಗುವುದು ಎಂದು ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಖಾತೆ ಸಚಿವ ಟಿ.ಬಿ. ಜಯಚಂದ್ರ ಹೇಳಿದರು.
ಆಳಂದ ತಾಲೂಕು ಮಾದನ ಹಿಪ್ಪರಗಾ ಗ್ರಾಮದಲ್ಲಿ ಅಂತರ್ಜಲ ಅಭಿವೃದ್ಧಿಪಡಿಸುವ ವಿಶೇಷ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಕೆರೆ ಅಭಿವೃದ್ಧಿ ಪ್ರಾಧಿಕಾರ ರಚಿಸಿದ್ದು ಐತಿಹಾಸಿಕ ಮತ್ತು ದಿಟ್ಟ ನಿರ್ಧಾರವಾಗಿದೆ. ಕೆರೆಗಳ ಜೀರ್ಣೋದ್ಧಾರ, ಒತ್ತುವರಿ ತೆರವುಗೊಳಿಸಿ ಕೆರೆ ಉಳಿಸಬೇಕಾಗಿದೆ.
ಇದಕ್ಕಾಗಿ ಕೆರೆ ಅಭಿವೃದ್ಧಿಗಾಗಿ ಸಲಹಾ ಸಮಿತಿ ರಚಿಸಲಾಗುವುದು. ಕೆರೆ ಅಭಿವೃದ್ಧಿ ಸಂಘಗಳಿಗೆ ಕೆರೆ ಹೂಳೆತ್ತುವ ಜವಾಬ್ದಾರಿ ವಹಿಸಲಾಗುವುದು. ರಾಜ್ಯದಲ್ಲಿ ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಗೊಳಪಡುವ 1251 ಕೆರೆಗಳ ಹೂಳು ತೆಗೆಯಲು 60 ಕೋಟಿ ರೂ. ಈಗಾಗಲೇ ನೀಡಲಾಗಿದೆ ಎಂದು ಹೇಳಿದರು.
ರಾಜ್ಯದಲ್ಲಿ ಈ ಹಿಂದೆ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ಒಟ್ಟು 36,000 ಕೆರೆಗಳಿದ್ದವು. ಎಲ್ಲ ಗ್ರಾಪಂಗಳಿಂದ ಕೆರೆಗಳ ವರದಿ
ತರಿಸಿಕೊಂಡು ಕ್ರೂಢೀಕರಿಸಿದಾಗ ಕೇವಲ 29,000 ಕೆರೆಗಳು ಆಸ್ತಿತ್ವದಲ್ಲಿವೆ. ಇನ್ನೂಳಿದ 7000 ಕೆರೆಗಳ ಮಾಹಿತಿ ಲಭ್ಯವಾಗುತ್ತಿಲ್ಲ. ಕೆರೆ ಉಳಿದರೆ ಮಾತ್ರ ಮನುಷ್ಯನಿಗೆ ಉಳಿವಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
MUST WATCH
ಹೊಸ ಸೇರ್ಪಡೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ
ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್ನದ್ದು: ಮೀನಾಕ್ಷಿ ಲೇಖಿ