ಪ್ರೇಯಸಿಗಾಗಿ ಗರ್ಭಿಣಿ ಪತ್ನಿಯನ್ನೇ ಕೊಂದ ಪತಿ


Team Udayavani, Jan 17, 2019, 6:26 AM IST

gul-10.jpg

ವಾಡಿ: ಪ್ರೇಯಸಿಗಾಗಿ ಪತಿ ತನ್ನ ಗರ್ಭಿಣಿ ಪತ್ನಿಯನ್ನೇ ಕೊಂದು ಹೂತುಹಾಕಿದ ಪ್ರಕರಣ ತಿಂಗಳ ನಂತರ ಬೆಳಕಿಗೆ ಬಂದಿದೆ.

ತಿಂಗಳ ಹಿಂದೆಯಷ್ಟೇ ಪಟ್ಟಣ ಸಮೀಪದ ಲಕ್ಷ್ಮೀಪುರವಾಡಿ ಗ್ರಾಮದ ಕರಿಷ್ಮಾ (ರೇಷ್ಮಾ) ವಿಜಯಕುಮಾರ ಪವಾರ (23) ಎನ್ನುವರು ಅನುಮಾನಾಸ್ಪದವಾಗಿ ನಾಪತ್ತೆಯಾಗಿದ್ದರು. ನಂತರ ಪೊಲೀಸರು ನಡೆಸಿದ ತನಿಖೆಯಿಂದ ಪರಹತಾಬಾದ ಸಮೀಪದ ಕಲಿಫತ್‌ ದರ್ಗಾ ಹತ್ತಿರದ ಹೆದ್ದಾರಿ ಬದಿಯಲ್ಲಿ ಅವರ ಶವ ಪತ್ತೆಯಾಗಿದೆ.

ಪತಿ ವಿಜಯಕುಮಾರ ಪವಾರ ಹಾಗೂ ಆತನ ಪ್ರೇಯಸಿಯಾದ ಅದೇ ಗ್ರಾಮದ ಪೂಜಾ ರಾಠೊಡ ಎನ್ನುವರೇ ಕೊಲೆ ಮಾಡಿದ ಪ್ರಮುಖ ಆರೋಪಿಗಳಾಗಿದ್ದಾರೆ. ಪತ್ನಿ ಕಾಣೆಯಾಗಿದ್ದಾಳೆ ಎಂದು ಹುಡುಕಾಟ ನಡೆಸುತ್ತಿದ್ದ ಪತಿಯೇ ಕೊಲೆ ಮಾಡಿದ್ದಾನೆ ಎನ್ನುವ ವಿಷಯ ತನಿಖೆಯಿಂದ ಬೆಳಕಿಗೆ ಬಂದಿದೆ.

ಘಟನೆ ವಿವರ: ಕೊಲೆಯಾದ ರೇಷ್ಮಾ ಮೂಲತಃ ವಿಜಯಪುರ ಜಿಲ್ಲೆಯ ಡೋಮನಾಳ ತಾಂಡಾ ನಿವಾಸಿಯಾಗಿದ್ದು, 2017ರಲ್ಲಿ ಲಕ್ಷ್ಮೀಪುರವಾಡಿ ಗ್ರಾಮದ ವಿಜಯಕುಮಾರ ಪವಾರ ಎನ್ನುವಾತನೊಂದಿಗೆ ವಿವಾಹವಾಗಿತ್ತು. ಮದುವೆಗೂ ಮುಂಚೆ ಆರೋಪಿ ವಿಜಯಕುಮಾರನು ಪೂಜಾ ಎನ್ನುವಾಕೆಯೊಂದಿಗೆ ಪ್ರೀತಿಸುತ್ತಿದ್ದ ಎನ್ನಲಾಗಿದೆ. ಆಕೆಯೊಂದಿಗೆ ದೈಹಿಕ ಸಂಬಂಧವಿತ್ತು ಎನ್ನುವುದು ಪೊಲೀಸರ ತನಿಖೆಯಿಂದ ಬೆಳಕಿಗೆ ಬಂದಿದೆ.

ಮದುವೆಯ ನಂತರವೂ ವಿಜಯಕುಮಾರನ ಪ್ರಣಯದಾಟ ಮುಂದುವರಿದಿತ್ತು. ಕಾರಣ ಪತ್ನಿಯೊಂದಿಗೆ ಪದೇಪದೆ ಜಗಳ ಮಾಡುತ್ತಿದ್ದ ವಿಜಯಕುಮಾರ, 2018ರ ಡಿ.4 ರಂದು ಶಾಶ್ವತವಾಗಿ ಪತ್ನಿಯನ್ನು ಮುಗಿಸುವ ಸಂಚು ರೂಪಿಸಿದ್ದ. ತವರು ಮನೆಗೆ ಕಳುಹಿಸುವ ನೆಪದಲ್ಲಿ ಹೆಂಡತಿಯನ್ನು ಬೈಕ್‌ ಮೇಲೆ ಕರೆದೊಯ್ದ ಆರೋಪಿ ವಿಜಯಕುಮಾರ, ಪ್ರೇಯಸಿ ಪೂಜಾಳನ್ನು ಮೊದಲೇ ನಿಗದಿಪಡಿಸಲಾದ ಕೊಲೆ ಮಾಡುವ ಸ್ಥಳಕ್ಕೆ ಕಳುಹಿಸಿದ್ದ.

ಇಬ್ಬರೂ ಸೇರಿ ನಾಲ್ಕು ತಿಂಗಳ ಗರ್ಭಿಣಿ ರೇಷ್ಮಾಳ ಕತ್ತು ಹಿಸುಕಿ ಅಮಾನುಷವಾಗಿ ಕೊಂದು ಹಾಕಿ, ರಸ್ತೆ ಪಕ್ಕದ ಗುಂಡಿಯಲ್ಲಿ ಶವ ಹೂತುಹಾಕಿದ್ದರು. ಡಿ.7 ರಂದು ಅಳಿಯನ ಮನೆಯಿಂದ ಮಗಳು ಕಾಣೆಯಾಗಿದ್ದಾಳೆ ಎನ್ನುವ ಕುರಿತು ಕಿಶನ್‌ ರಾಠೊಡ ವಾಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಆರೋಪಿ ವಿಜಯಕುಮಾರ ಕೂಡ ಪತ್ನಿಯ ಹುಡುಕಾಟದ ನಾಟಕವಾಡಿದ್ದ ಎಂದು ಸಿಪಿಐ ಪಂಚಾಕ್ಷರಿ ಸಾಲಿಮಠ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.

ಎಸ್‌ಪಿ ಎನ್‌.ಶಶಿಕುಮಾರ, ಹೆಚ್ಚುವರಿ ಎಸ್‌ಪಿ, ಶಹಾಬಾದ ಡಿವೈಎಸ್‌ಪಿ ಕೆ.ಬಸವರಾಜ ಮಾರ್ಗದರ್ಶನದಲ್ಲಿ ತನಿಖೆ ಕೈಗೊಂಡ ಸಿಪಿಐ ಪಂಚಾಕ್ಷರಿ ಸಾಲಿಮಠ, ಪಿಎಸ್‌ಐ ವಿಜಯಕುಮಾರ ಭಾವಗಿ, ಎಎಸ್‌ಐ ಶಿವಕಾಂತ ಹಾಗೂ ಪೇದೆಗಳಾದ ಲಕ್ಷ್ಮಣ ವಾಣಿ, ದತ್ತು ಜಾನೆ, ಚಂದ್ರಶೇಖರ, ದೊಡ್ಡಪ್ಪ, ಶಬ್ಬೀರ್‌, ಅಶೋಕ, ರುದ್ರುಗೌಡ ಹಾಗೂ ಹೀರಾಲಾಲ ಜಟಿಲವಾದ ಪ್ರಕರಣವನ್ನು ವೈಜ್ಞಾನಿಕ ವಿಧಾನಗಳ ಸಹಾಯದಿಂದ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳಾದ ವಿಜಯಕುಮಾರ ಮತ್ತು ಪೂಜಾ ಸದ್ಯ ಪೊಲೀಸರ ಬಂಧನದಲ್ಲಿದ್ದು, ಗುರುವಾರ ಸಹಾಯಕ ಆಯುಕ್ತರ ಸಮ್ಮುಖದಲ್ಲಿ ಶವ ಹೊರತೆಗೆದು ಪಂಚನಾಮೆ ನಡೆಸಲಿದ್ದಾರೆ.

ಟಾಪ್ ನ್ಯೂಸ್

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.