ಸೋರುವ ಕೊಠಡಿಯಲ್ಲೇ ಮಕ್ಕಳಿಗೆ ಪಾಠ: ಕುಡುಕರ ಅಡ್ಡೆಯಾದ ಘತ್ತರಗಿ ಶಾಲಾ ಆವರಣ


Team Udayavani, Jul 19, 2022, 12:45 PM IST

12school

ಅಫಜಲಪುರ: ತಾಲೂಕಿನ ಘತ್ತರಗಿ ಗ್ರಾಮದಲ್ಲಿ ಮುಜರಾಯಿ ಇಲಾಖೆಯ ಜಾಗದಲ್ಲಿರುವ ಸರ್ಕಾರಿ ಪ್ರೌಢ ಶಾಲೆಯ ಬಹುತೇಕ ಕೊಠಡಿಗಳ ಮೇಲ್ಛಾವಣಿಗಳು ಸೋರುತ್ತಿವೆ. ಹನಿ ಹನಿ ನೀರು ಬೀಳುತ್ತಿರುವ ಜಾಗದಲ್ಲೇ ವಿದ್ಯಾರ್ಥಿಗಳು ಕುಳಿತು ಪಾಠ ಕೇಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಸುಮಾರು 220 ವಿದ್ಯಾರ್ಥಿಗಳು ಈ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಮೇಲ್ಛಾವಣಿಗಳು ಮಳೆ ನೀರು ತಡೆದುಕೊಳ್ಳದಷ್ಟು ಹಾಳಾಗಿದ್ದು, ತರಗತಿ ಕೋಣೆ ನೆನೆಯಬಾರದೆಂದು ಮುಖ್ಯಗುರುಗಳು ಪ್ಲಾಸ್ಟಿಕ್‌ ತಾಡಪತ್ರಿ ತಂದು ಮೇಲ್ಛಾವಣಿಗೆ ಅಡ್ಡಲಾಗಿ ಕಟ್ಟಿಸಿದ್ದಾರೆ. ಆದರೆ ಎಲ್ಲ ಕೋಣೆಗಳಿಗೂ ಕಟ್ಟಿಸಲಾಗಿಲ್ಲ. ಬದಲಾಗಿ ಕಚೇರಿ, ಕಂಪ್ಯೂಟರ್‌ ಕೋಣೆ ಹಾಗೂ ಆಹಾರ ಧಾನ್ಯಗಳಿರುವ ಕೋಣೆಗೆ ಮಾತ್ರ ಕಟ್ಟಿಸಿದ್ದಾರೆ. ಉಳಿದ 8 ಕೊಣೆಗಳಿಗೆ ಕಟ್ಟಿಸಿಲ್ಲ. ಹೀಗಾಗಿ ಅಲ್ಲೆಲ್ಲ ಮಳೆ ನೀರು ತರಗತಿ ಕೋಣೆಯಲ್ಲಿ ನೆನೆಯುವಂತಾಗಿದೆ.

ಶಾಲಾ ಆವರಣ ಕುಡುಕರ ಅಡ್ಡೆ

ಇನ್ನೂ ಶಾಲೆಯ ಆವರಣವೆಲ್ಲ ಕುಡುಕರ ಅಡ್ಡಯಾಗಿ ಮಾರ್ಪಟ್ಟಿದೆ. ಶಾಲಾ ಅವಧಿ ಮುಗಿಯುತ್ತಿದ್ದಂತೆ ಕತ್ತಲಾಗುತ್ತಿದ್ದಂತೆ ಕುಡುಕರ ದಂಡು ಶಾಲೆಯ ಆವರಣಕ್ಕೆ ಲಗ್ಗೆ ಇಡುತ್ತಿದೆ. ನಿತ್ಯ ಕುಡಿದು ಗ್ಲಾಸ್‌, ಬಾಟಲಿ ಬಿಟ್ಟು ಹೋಗುತ್ತಿದ್ದಾರೆ. ಅಲ್ಲದೆ ತರಹೇವಾರಿ ದಾಬಾದ ಊಟ ತಂದು ತಿಂದು ಎಲ್ಲೆಂದರಲ್ಲಿ ಎಸೆದು ಹೋಗುತ್ತಿದ್ದಾರೆ. ಕೆಲವು ಸಲವಂತೂ ತಾವು ಕುಡಿದ ಬಾಟಲಿಗಳನ್ನು ಒಡೆದು ಚೆಲ್ಲಾಪಿಲ್ಲಿ ಬಿಸಾಡಿ ಹೋಗುತ್ತಿದ್ದಾರೆ. ನಿತ್ಯ ಬೆಳಗಾದರೆ ಶಾಲೆಗೆ ಬರುವ ಶಿಕ್ಷಕರು, ವಿದ್ಯಾರ್ಥಿಗಳು ಕುಡುಕರು ಕುಡಿದು ಬಿಸಾಡಿದ ಬಾಟಲಿಗಳನ್ನು ಆರಿಸಿ ನಂತರ ತರಗತಿಗಳಿಗೆ ಹೋಗುವ ಪರಿಸ್ಥಿತಿ ಬಂದಿದೆ.

ಅನೈತಿಕ ಚಟುವಟಿಕೆ: ಶಾಲೆಯ ಪಕ್ಕದಲ್ಲೇ ಪೊಲೀಸ್‌ ಚೌಕಿ ಇದೆ. ಆದರೂ ಕುಡುಕರಿಗೆ ಯಾರ ಭಯವೂ ಇಲ್ಲದಂತಾಗಿದೆ. ಕತ್ತಲಾಗುತ್ತಿದ್ದಂತೆ ನಡೆಯುವ ಅನೈತಿಕ ಚಟುವಟಿಕೆಗಳಿಗೆ ಕಡಿವಾಣ ಇಲ್ಲದಂತಾಗಿದೆ. ಇದರಿಂದ ಮಕ್ಕಳ ಭವಿಷ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ.

ಅಭಿವೃದ್ಧಿಗೆ ಹಿನ್ನಡೆ: ಶಾಲೆ ಮುಜರಾಯಿ ಇಲಾಖೆ ದೇವಸ್ಥಾನದ ಜಾಗದಲ್ಲಿದೆ. ಹೀಗಾಗಿ ಶಾಲೆಗೆ ಯಾವುದೇ ಅಭಿವೃದ್ಧಿ ಕೆಲಸ ಮಾಡಲು, ಉನ್ನತಿಕರಣ ಮಾಡಲು ಮುಜರಾಯಿ ಇಲಾಖೆಯ ಅನುಮತಿ ಪಡೆಯಬೇಕು. ಆದರೆ ಮುಜರಾಯಿ ಇಲಾಖೆಯವರು ತಮ್ಮ ಜಾಗದಲ್ಲಿರುವ ಶಾಲೆಯನ್ನು ಬೇರೆಡೆಗೆ ಸ್ಥಳಾಂತರಿಸಿ ಎನ್ನುತ್ತಾರೆ. ಹೀಗಾಗಿ ಯಾವುದೇ ಅಭಿವೃದ್ಧಿ ಕೆಲಸಗಳು ಮಾಡ ಲಾಗುತ್ತಿಲ್ಲ. ಇದರಿಂದಾಗಿ ಶಾಲೆಗೆ ಇಂತ ದುಸ್ಥಿತಿ ಬಂದಿದೆ ಎನ್ನುತ್ತಾರೆ ಮಕ್ಕಳ ಪಾಲಕರು ಹಾಗೂ ಗ್ರಾಮಸ್ಥರು.

ಶಾಲೆಯ ಮೇಲ್ಛಾವಣಿಗಳು ಸೋರಿಕೆ ಆಗುತ್ತಿರುವ ಸಮಸ್ಯೆ, ಆವರಣದಲ್ಲಿ ಕುಡಿದು ಬಾಟಲಿಗಳು ಒಡೆಯುತ್ತಿರುವುದರ ಬಗ್ಗೆ ಬಿಇಒ ಹಾಗೂ ಸಂಬಂಧ ಪಟ್ಟವರಿಗೆ ಪತ್ರ ಬರೆಯಲಾಗಿದೆ. -ಬಾಬು ಮನಗೊಂಡ, ಮುಖ್ಯಗುರು ಘತ್ತರಗಿ ಶಾಲೆ

ಶಾಲೆ ಮುಜರಾಯಿ ಇಲಾಖೆ ಜಾಗದಲ್ಲಿ ಇರುವುದರಿಂದ ಅಭಿವೃದ್ಧಿ ಕೆಲಸ ಮಾಡಲಾಗುತ್ತಿಲ್ಲ. ಮಂಗಳವಾರ ಖುದ್ದಾಗಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸಮಸ್ಯೆಗಳನ್ನು ಸಂಬಂಧಪಟ್ಟ ಮೇಲಾಧಿಕಾರಿಗಳ ಗಮನಕ್ಕೆ ತಂದು ಸರಿಪಡಿಸುವ ಕೆಲಸ ಮಾಡುತ್ತೇನೆ. -ಮಾರುತಿ ಹುಜರತಿ, ಬಿಇಒ ಅಫಜಲಪುರ

ಶಾಲೆಯ ಅವ್ಯವಸ್ಥೆ ನೋಡಿದ್ದೇನೆ. ಆದಷ್ಟು ಬೇಗ ಸಂಬಂಧ ಪಟ್ಟವರ ಗಮನಕ್ಕೆ ತಂದು ಶಾಲೆಯ ಸಮಸ್ಯೆಗೆ ಪರಿಹಾರ ಕಲ್ಪಿಸಲಾಗುತ್ತದೆ. –ವಿಠ್ಠಲ್‌ ನಾಟಿಕಾರ, ಗ್ರಾಪಂ ಅಧ್ಯಕ್ಷ ಘತ್ತರಗಿ

-ಮಲ್ಲಿಕಾರ್ಜುನ ಹಿರೇಮಠ

ಟಾಪ್ ನ್ಯೂಸ್

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.