ಪತ್ನಿಯನ್ನು ಕೊಂದು ಮೂರು ದಿನ ಮಂಚದ ಕೆಳಗೆ ಮುಚ್ಚಿಟ್ಟ ಪಾಪಿ ಗಂಡ
Team Udayavani, Nov 5, 2019, 2:56 PM IST
ಕಲಬುರಗಿ: ಪತ್ನಿಯನ್ನು ಕೊಲೆ ಮಾಡಿ ಮೂರು ದಿನ ಮನೆಯಲ್ಲಿ ಮುಚ್ಚಿಟ್ಟಿದ್ದ ಪ್ರಕರಣ ಜಿಲ್ಲೆ ಆಳಂದ ತಾಲೂಕಿನ ಮಾದನಹಿಪ್ಪರಗಾ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.
ಸಂಗೀತಾ ಸಕ್ಕರಗಿ (35) ಕೊಲೆಯಾದ ನತದೃಷ್ಟೆ. ಶ್ರೀಶೈಲ ಸಕ್ಕರಗಿ (45) ಹೆಂಡತಿಯನ್ನು ಕೊಂದ ಪಾಪಿ ಪತಿ. ತನ್ನ ಹೆಂಡತಿ ಸಂಗೀತಾಳನ್ನು ಕೊಲೆ ಮಾಡಿ ಪ್ರಕರಣ ಬೆಳಕಿಗೆ ಬರದಂತೆ ಮಂಚದ ಕೆಳಗೆ ಮೂರು ದಿನ ಮುಚ್ಚಿಟ್ಟು, ಅದೇ ಮಂಚದ ಮೇಲೆ ಪಾಪಿ ಪತಿ ಶ್ರೀಶೈಲ ಮಲಗುತ್ತಿದ್ದ ಎನ್ನಲಾಗಿದೆ.
ಮನೆಯಲ್ಲಿ ಶವದ ವಾಸನೆ ಬಂದಿದ್ದರಿಂದ ಸ್ಥಳೀಯರು ಅನುಮಾಗೊಂಡು ಪೊಲೀಸರಿಗೆ ಮಾಹಿತಿ ಮುಟ್ಟಿಸಿದ್ದರು. ಪೊಲೀಸರು ಬಂದು ಪರಿಶೀಲನೆ ನಡೆಸಿದ ನಂತರ ಸಂಗೀತಾ ಕೊಲೆಯಾಗಿದ್ದು ಬೆಳಕಿಗೆ ಬಂದಿದೆ.
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಆರೋಪಿ ಶ್ರೀಶೈಲನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಮಾದನಹಿಪ್ಪರಗಾ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
MUST WATCH
ಹೊಸ ಸೇರ್ಪಡೆ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!