ಸಂಪ್ರದಾಯದಿಂದಲೇ ಸಣ್ಣ ಸಮುದಾಯ ಅಸ್ತಿತ್ವದಲ್ಲಿ


Team Udayavani, Feb 25, 2019, 4:38 AM IST

gul-1.jpg

ಕಲಬುರಗಿ: ಸಂಪ್ರದಾಯ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಸಣ್ಣ-ಪುಟ್ಟ ಸಮುದಾಯಗಳ ಅಸ್ತಿತ್ವಕ್ಕೆ ಸಹಕಾರಿ ಆಗುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೆ.ಎಚ್‌. ಸತೀಶ ಹೇಳಿದರು.

ನಗರದ ವಿಶ್ವೇಶ್ವರಯ್ಯ ಭವನದಲ್ಲಿ ರವಿವಾರ ಗುಲಬರ್ಗಾ ಹಟಗಾರ ಸಮಾಜ ಅಭಿವೃದ್ಧಿ ಸಂಘ ಏರ್ಪಡಿಸಿದ್ದ “ಸಮಷ್ಟಿ’ ವಧು-ವರರ ಪರಿಚಯ ಮಾಹಿತಿ-2019 ಪುಸ್ತಕ ಬಿಡುಗಡೆಗೊಳಿಸಿ ಅವರು ಮಾತನಾಡಿದ ಅವರು, ಪ್ರಬಲ ಸಮುದಾಯಗಳ ಮುಂದೆ ಸಣ್ಣ-ಪುಟ್ಟ ಸಮುದಾಯಗಳು ಗುರುತಿಸಿಕೊಳ್ಳುವುದು ಕಷ್ಟದ ಕೆಲಸ ಎಂದರು.

ವಧು-ವರರ ಪುಸ್ತಕ ಹೊರತರುವುದರಿಂದ ಸಮಾಜವನ್ನು ಬಲಪಡಿಸುವ ಕೆಲಸ ಮಾಡಲಾಗುತ್ತಿದೆ. ಆದರೆ, ವಧು ಕಡೆಯವರಿಗೆ ವರನ ಕಡೆಯವರು ಕಷ್ಟ ಕೊಡುವ, ಸತಾಯಿಸುವ ಮನೋಭಾವನೆ ಎಂದಿಗೂ ಬೇಡ. ಹಿರಿಯರ ಮಾರ್ಗದರ್ಶನ ಇಲ್ಲದ ಸಮಾಜ ಸಮಾಜವಲ್ಲ. ಸಮಾಜಕ್ಕೆ ಹೊರೆಯಾಗಿರುವ ಕೆಟ್ಟ ಪದ್ಧತಿಗಳು ನಿರ್ಮೂಲನೆ ಮಾಡುವಲ್ಲಿ ಪ್ರಜ್ಞಾವಂತರು ಯತ್ನಿಸಬೇಕು. ಆಗ ಸಮಾಜ ಸುಧಾರಣೆಯತ್ತ ಸಾಗುತ್ತದೆ ಎಂದು ಹೇಳಿದರು.

ಕಲಬುರಗಿ ಶಿಕ್ಷಣ ಸಂಸ್ಥೆ (ರೋಟರಿ ಕ್ಲಬ್‌) ಅಧ್ಯಕ್ಷ ಹಾಗೂ ನಗರೇಶ್ವರ ವೆಲ್‌ಫೇರ್‌ ಸೊಸೈಟಿ ಕಾರ್ಯದರ್ಶಿ ರವೀಂದ್ರ ಮುಕ್ಕಾ ಮುಖ್ಯ ಅತಿಥಿಯಾಗಿದ್ದರು. ಗುಲಬರ್ಗಾ ಹಟಗಾರ ಸಮಾಜ ಅಭಿವೃದ್ಧಿ ಸಂಘದ ಅಧ್ಯಕ್ಷ ಶಿವಪುತ್ರಪ್ಪ ಭಾವಿ ಅಧ್ಯಕ್ಷತೆ ವಹಿಸಿದ್ದರು. ಸಂಘದ ಕಾನೂನು ಸಲಹೆಗಾರ ಕೆ.ಎಸ್‌. ಸಕ್ರಿ, ಸಂಘಟನಾ ಕಾರ್ಯದರ್ಶಿ ರಾವ್‌ ಬಹಾದ್ದೂರ ರೂಗಿ ವೇದಿಕೆ ಮೇಲಿದ್ದರು. 

ಕೃಷಿ ಇಲಾಖೆ ಆತ್ಮಯೋಜನೆಯಡಿ “ಶ್ರೇಷ್ಠ ಕೃಷಿಕ’ ಪ್ರಶಸ್ತಿ ಪಡೆದ ಗುರುನಾಥ ಸೊನ್ನದ ಪತ್ರಕರ್ತರ ಸಂಘದ ಚುನಾವಣೆಯಲ್ಲಿ ಕಾರ್ಯಕಾರಿ ಸಮಿತಿ ಸದಸ್ಯನಾಗಿ ಆಯ್ಕೆಯಾದ ಪತ್ರಕರ್ತ ಸಂಗಮನಾಥ ರೇವತಗಾಂವ್‌ ಅವರನ್ನು ಸನ್ಮಾನಿಸಲಾಯಿತು. ಸಂಘದ ಸೂರ್ಯಕಾಂತ ಕಾಬನೆ, ರಾಮಚಂದ್ರ ಗಂಜಿ, ಸೂರ್ಯಕಾಂತ ಸೊನ್ನದ, ಸೋಮಶೇಖರ ಧುತ್ತರಗಿ, ಅಣವೀರಪ್ಪ ಬಳ್ಳಾ, ಚಂದ್ರಕಾಂತ ಮುನ್ನೋಳಿ, ಶಾಂತಕುಮಾರ ಗೌರ, ಬಸವರಾಜ ಖರಾಡೆ, ಶ್ರವಣಕುಮಾರ ಮುನ್ನೋಳಿ, ಶಾಂತಮಲ್ಲಪ್ಪ ಜೇವೂರ, ವಿನೋದಕುಮಾರ ಜನೇವರಿ, ಶಿವಲಿಂಗಪ್ಪ ಅಷ್ಟಗಿ
ಮುಂತಾದವರಿದ್ದರು.

ಸೃಜನಾ ಮತ್ತು ಸಂಪದಾ ಸ್ವಾಗತಗೀತೆ ಹಾಡಿದರು. ಸಂಘದ ಆಡಳಿತ ಮಂಡಳಿ ಸದಸ್ಯ ಸಂಗಮನಾಥ ರೇವತಗಾಂವ ಸ್ವಾಗತಿಸಿದರು, ವಾಣಿಶ್ರೀ ನಿರೂಪಿಸಿದರು, ಸಂಘದ ಪ್ರಧಾನ ಕಾರ್ಯದರ್ಶಿ ಸತೀಶ ಜಮಖಂಡಿ ವಂದಿಸಿದರು. 

ಟಾಪ್ ನ್ಯೂಸ್

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.