ಪಿಎಸ್ಐ ಕೇಸ್ ಗೆ ಟ್ವಿಸ್ಟ್: ಸಿಐಡಿ ಅಧಿಕಾರಿಗೆ 76 ಲಕ್ಷ ರೂ. ಲಂಚ ನೀಡಿದ ಆರೋಪ


Team Udayavani, Jan 24, 2023, 1:38 PM IST

ಪಿಎಸ್ಐ ಕೇಸ್ ಗೆ ಟ್ವಿಸ್ಟ್: ಸಿಐಡಿ ಅಧಿಕಾರಿಗೆ 76 ಲಕ್ಷ ರೂ. ಲಂಚ; ಆರ್.ಡಿ. ಪಾಟೀಲ ದೂರು

ಕಲಬುರಗಿ: ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದಿಂದ ಪಾರು ಮಾಡಲು ತಾನು ಸಿಐಡಿ ಡಿವೈಎಸ್ಪಿ ಶಂಕರಗೌಡ ಪಾಟೀಲ ಅವರಿಗೆ 76 ಲಕ್ಷ ರೂ ನೀಡಿರುವುದಾಗಿ ಪ್ರಕರಣದ ಪ್ರಮುಖ ಆರೋಪಿ ಆರ್.ಡಿ. ಪಾಟೀಲ ಲೋಕಾಯುಕ್ತರಿಗೆ ದೂರು ನೀಡಿದ್ದಾನೆ. ಇದರೊಂದಿಗೆ ಪ್ರಕರಣಕ್ಕೆ ಹೊಸ ತಿರುವು ದೊರೆತಂತಾಗಿದೆ.

ದೂರಿನೊಂದಿಗೆ 8.4 ನಿಮಿಷ ಅವಧಿಯ ಆಡಿಯೋದ ಪೆನ್ ಡ್ರೈವ್ ದಾಖಲೆಯಾಗಿ ನೀಡಿದ್ದಾರೆ. ಈ ಸಂಬಂದ ‘ಆರ್.ಡಿ. ಪಾಟೀಲ ಯುವ ಬ್ರಿಗೇಡ್’ ಹೆಸರಿನ ಫೇಸ್‌ಬುಕ್‌ ಪೇಜ್ ಮೂಲಕ ಪಾಟೀಲ್ ತಾನು ಮಾತನಾಡಿರುವ ಆಡಿಯೋ ಸೋಮವಾರ ಅಪ್ಲೋಡ್ ಮಾಡಲಾಗಿದೆ.

“ಶಂಕರಗೌಡ ಪಾಟೀಲ ಅವರು ಪ್ರಕರಣ ಮುಂದುವರೆಸದಿರಲು, ಅದರಿಂದ ಪಾರು ಮಾಡಲು ನನಗೆ 3 ಕೋಟಿ ರೂ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಆದರೆ ನನ್ನಿಂದ ಅಷ್ಟು ಹಣ ಹೊಂದಿಸಲು ಸಾಧ್ಯವಾಗುವುದಿಲ್ಲ. ಬೇಕಿದ್ದರೆ 76 ಲಕ್ಷ ರೂ. ಹಣವನ್ನು ಕೊಡುತ್ತೇನೆ ಎಂದು ಹೇಳಿ ಬ್ಯಾಂಕ್ ಆಫ್ ಬರೋಡ ಶಾಖೆಯಿಂದ ಹಣ ಡ್ರಾ ಮಾಡಿಸಿಕೊಂಡು ನನ್ನ ಅಳಿಯ ಶ್ರೀಕಾಂತನ ಮೂಲಕ ಅವರಿಗೆ ತಲುಪಿಸಿದ್ದೇನೆ. ನಾನು ಜಾಮೀನು ಪಡೆದು ಹೊರ ಬಂದ ಬಳಿಕವೂ ಶಂಕರಗೌಡ ಹಾಗೂ ಅವರ ಅಧೀನ ಸಿಬ್ಬಂದಿ‌ಯು ಮನೆಗೆ ಬಂದು ಉಳಿದ ಹಣ ನೀಡಿವಂತೆ ಕಿರುಕುಳ ನೀಡಿದ್ದಾರೆ’ ಎಂದು ಫೇಸ್‌ ಬುಕ್‌ ವಿಡಿಯೋ ಮೂಲಕ ಆರೋಪ ಮಾಡಿರುವುದು ಈಗ ಇಡೀ ಪ್ರಕರಣದ ಕುರಿತು ಅನುಮಾನ ಮತ್ತು ಸಿಐಡಿ ತನಿಖೆ ಕುರಿತು ಶಂಕೆ ಉಂಟು ಮಾಡಿದೆ.

ಆರೋಪ ನಿರಾಕರಣೆ: ಈ ಎಲ್ಲ ಆರೋಪಗಳನ್ನು ಸಿಐಡಿ ಡಿವೈ ಎಸ್ಪಿ ಶಂಕರಗೌಡ ಪಾಟೀಲ ಅವರು ಅಲ್ಲಗಳೆದು ನಿರಾಕರಿಸಿದ್ದಾರೆ. ಈ ಕುರಿತು ಸ್ಪಷ್ಟನೆ ನೀಡಿರುವ ಶಂಕರಗೌಡ, ‘ಆರ್.ಡಿ. ಪಾಟೀಲನೊಂದಿಗೆ ನಾನು ಮಾತನಾಡಿರುವುದು ಎನ್ನಲಾದ ಘಟನೆ ನಡೆದಿದ್ದು ಕಳೆದ ಜುಲೈನಲ್ಲಿ. ಈ ಆರೋಪದ ಬಗ್ಗೆ ಎಸಿಬಿಯವರೂ ತನಿಖೆ ನಡೆಸಿ ಇದರಲ್ಲಿ ಏನೂ ಹುರುಳಿಲ್ಲ ಎಂದು ಕೈಬಿಟ್ಟಿದ್ದಾರೆ. ತನಿಖಾಧಿಕಾರಿಗಳ‌ ನೈತಿಕತೆಯನ್ನು ಕುಗ್ಗಿಸಲು ಆರ್.ಡಿ. ಪಾಟೀಲ ಹೂಡಿರುವ ತಂತ್ರ ಇದು. ನನಗೆ ಹಲವು ಬಾರಿ ತಮ್ಮ ಹಿಂಬಾಲಕರನ್ನು ಛೂಬಿಟ್ಟು ಹಲ್ಲೆ ಮಾಡಲೂ ಯತ್ನಿಸಿದ್ದ. ಇದೆಲ್ಲವನ್ನೂ ಎದುರಿಸಿ ಪ್ರಕರಣವನ್ನು ಒಂದು ಹಂತಕ್ಕೆ ತಂದಿರುವ ತೃಪ್ತಿ ನಮಗಿದೆ’ ಎಂದಿದ್ದಾರೆ.

ಇದನ್ನೂ ಓದಿ:ರಾಜ್ಯದಲ್ಲಿ ಕಾಂಗ್ರೆಸ್ ಗೆ ಕಾರ್ಯಕರ್ತರ ಕೊರತೆ ಇದೆ: ನಳಿನ್ ಕುಮಾರ್ ಕಟೀಲ್

ಆಡಿಯೊದಲ್ಲಿ ಏನಿದೆ? ಎಂಟು ನಿಮಿಷ ನಾಲ್ಕು ಸೆಕೆಂಡ್ ಅವಧಿಯ ವಿಡಿಯೊದಲ್ಲಿ ಆರ್. ಡಿ. ಪಾಟೀಲ ಮಾತು ಮಾತ್ರ ಸ್ಪಷ್ಟವಾಗಿ ಕೇಳಿಸುತ್ತದೆ. ಎದುರಿಗೆ ಮಾತನಾಡಿರುವ ವ್ಯಕ್ತಿಯ ಧ್ವನಿ ಅಸ್ಪಷ್ಟವಾಗಿದೆ. ಏನಾದರೂ ಮಾಡಿ, ನನಗೆ ಹೊರಗೆ ಹೋಗುವಂತೆ ‌ಮಾಡಿ. ನನಗೆ ಪ್ರತಿ ದಿನವೂ ಮಹತ್ವದ ದಿನವಾಗಿದೆ. ನನಗೆ ಲಂಡನ್ ನಲ್ಲಿ ‘ಭಕ್ತ’ರೊಬ್ಬರು ಇದ್ದಾರೆ. ಅವರಿಂದ ಹಣದ ವ್ಯವಸ್ಥೆ ‌ಮಾಡುತ್ತೇನೆ ಎಂದಿದ್ದಾನೆ.

ದೂರು ಬಂದಿಲ್ಲ: ದೂರಿನ ಕುರಿತು ಪ್ರತಿಕ್ರಿಯೆ ‌ನೀಡಿದ ಕಲಬುರಗಿ ಲೋಕಾಯುಕ್ತ ಎಸ್.ಪಿ.‌ ಎ.ಆರ್. ಕರ್ನೂಲ್, ‘ಆರ್.ಡಿ. ಪಾಟೀಲ ದೂರನ್ನು ‌ಲೋಕಾಯುಕ್ತರಿಗೆ ಕಳುಹಿಸಿರುವ ಬಗ್ಗೆ ಮಾಹಿತಿ ಇಲ್ಲ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.