ಪಿಡಬ್ಲುಡಿ ಸಹಾಯಕ ಅಭಿಯಂತರ ಮನೆ ಸೇರಿ ಐದು ಕಡೆ ಎಸಿಬಿ ದಾಳಿ
Team Udayavani, Dec 18, 2020, 8:48 PM IST
ಸಾಂದರ್ಭಿಕ ಚಿತ್ರ
ಬೆಳಗಾವಿ: ಲೋಕಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಸಹಾಯಕ ಅಭಿಯಂತರ ಮನೆ ಸೇರಿ ಐದು ಕಡೆಗೆ ಏಕಕಾಲಕ್ಕೆ ಶುಕ್ರವಾರ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಸಹಾಯಕ ಅಭಿಯಂತ ಮನೋಜ ಸುರೇಶ ಕವಳೇಕರ ಎಂಬವರ ಮನೆ ಮೇಲೆ ದಾಳಿ ನಡೆಸಿದಾಗ ಅಕ್ರಮ ಆಸ್ತಿ ಗಳಿಕೆ ಮಾಡಿರುವುದು ಪತ್ತೆಯಾಗಿದೆ. ತಮ್ಮ ಆದಾಯ ಮೂಲಕ್ಕಿಂತಲೂ ಹೆಚ್ಚಿನ ಆಸ್ತಿ-ಪಾಸ್ತಿ ಮಾಡಿರುವುದು ದಾಳಿ ವೇಳೆ ಗೊತ್ತಾಗಿದೆ.
ಮನೋಜ ಕವಳೇಕರ ಅವರ ಇಲ್ಲಿಯ ಆಯೋಧ್ಯೆ ನಗರದ ನಿವಾಸಿ, ಸಹೋದರಿ ಜ್ಯೋತಿ ಕವಳೇಕರ ಅವರ ನಿವಾಸ, ಮಹದ್ವಾರ ರಸ್ತೆಯಲ್ಲಿರುವ ಸಹೋದರಿ ರಾಜಶ್ರೀ ಕವಳೇಕರ ಅವರ ಪ್ಲ್ಯಾಟ್, ಮನೋಜ ಅವರ ಕಚೇರಿಯ ಕೊಠಡಿ ಹಾಗೂ ಸಹೋದರಿಯ ಹೆಸರಿನಲ್ಲಿರುವ ಖಾನಾಪುರ ತಾಲೂಕಿನ ಸಂಗರಗಾಳಿ ಗ್ರಾಮದ ಫರ್ಮ ಹೌಸ್ ಮೇಲೆ ಎಸಿಬಿ ದಾಳಿ ನಡೆಸಿದೆ.
ಬೆಳಗಾವಿ ಉತ್ತರ ವಲಯದ ಎಸಿಬಿ ತಂಡಗಳು ದಾಳಿ ನಡೆಸಿ ಆಸ್ತಿ-ಪಾಸ್ತಿಗಳ ಮೂಲದ ಬಗ್ಗೆ ತನಿಖೆ ಹಾಗೂ ದಾಖಲೆಗಳ ಪರಿಶೀಲನೆ ಕಾರ್ಯ ಮುಂದುವರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
MUST WATCH
ಹೊಸ ಸೇರ್ಪಡೆ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು