![Dandeli: ಪಂಪ್ ಹೌಸ್ ಬಳಿ ಅಕ್ರಮವಾಗಿ ಕಟ್ಟಿಹಾಕಿದ್ದ 22 ಜಾನುವಾರುಗಳ ರಕ್ಷಣೆ](https://www.udayavani.com/wp-content/uploads/2024/06/dandeli-3-415x262.jpg)
Road mishap: ಅಯೋಧ್ಯೆ ಸಮೀಪ ಅಪಘಾತ; ಕಲಬುರಗಿಯ ಮೂವರ ಸಾವು
Team Udayavani, May 25, 2024, 9:59 PM IST
![26](https://www.udayavani.com/wp-content/uploads/2024/05/26-4-620x372.jpg)
ಕಲಬುರಗಿ: ಅಯೋಧ್ಯೆ ಬಳಿ ಶುಕ್ರವಾರ ರಾತ್ರಿ ಲಾರಿ ಮತ್ತು ಟೆಂಪೋ ನಡುವೆ ಮುಖಾಮುಖೀ ಡಿಕ್ಕಿ ಸಂಭವಿಸಿದ ಪರಿಣಾಮ ಕಲಬುರಗಿ ಮೂಲದ ಮೂವರು ಭಕ್ತರು ಮೃತಪಟ್ಟಿರುವ ಘಟನೆ ನಡೆದಿದೆ.
ಈ ದುರ್ಘಟನೆಯಲ್ಲಿ ಇನ್ನು ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಗೊತ್ತಾಗಿದ್ದು, ಈ ಪೈಕಿ ಒಬ್ಬರ ಪರಿಸ್ಥಿತಿ ಚಿಂತಾಜನಕವಾಗಿದೆ. ಮೃತಪಟ್ಟವರನ್ನು ಶಿವರಾಜ್, ಕಾಶಿನಾಥ, ತಂಗಮ್ಮ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಅಯೋಧ್ಯೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲು ಮಾಡಲಾಗಿದೆ.
ವಾರಣಾಸಿಯ ಕಾಶಿ ವಿಶ್ವನಾಥನ ದರ್ಶನ ಮುಗಿಸಿ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ 22 ಜನರಿದ್ದ ಕುಟುಂಬವೊಂದು ಟೆಂಪೋ ಟ್ರ್ಯಾ ಕ್ಸ್ ನಲ್ಲಿ ಹೊರಟಿತ್ತು. ಈ ಟೆಂಪೋ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಎಸ್ಪಿ ಹೇಳಿಕೆ: ಈ ಕುರಿತು ಕಲಬುರಗಿ ಎಸ್ಪಿ ಅಕ್ಷಯ ಹಾಕೆ ಅವರನ್ನು “ಉದಯವಾಣಿ’ ಸಂಪರ್ಕಿಸಿದಾಗ ಅಯೋಧ್ಯೆಯಲ್ಲಿ ಮೃತಪಟ್ಟ ಮೂವರ ಕುರಿತು ನಮಗೆ ಯಾವುದೇ ಖಚಿತ ಮಾಹಿತಿ ಲಭ್ಯವಾಗಿಲ್ಲ. ಆದರೆ ಇತರೆ ಕೆಲವು ಖಾತ್ರಿ ಅಲ್ಲದ ಮೂಲಗಳಿಂದ ಮೇಲ್ನೋಟಕ್ಕೆ ಮೃತಪಟ್ಟವರು ಕಲಬುರಗಿಯವರು ಎಂದು ಗೊತ್ತಾಗಿದೆ. ಈ ಕುರಿತು ಅವರ ಕುಟುಂಬದವರು ಯಾರೂ ಇನ್ನೂ ಸಂಪರ್ಕಿಸಿಲ್ಲ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
![Dandeli: ಪಂಪ್ ಹೌಸ್ ಬಳಿ ಅಕ್ರಮವಾಗಿ ಕಟ್ಟಿಹಾಕಿದ್ದ 22 ಜಾನುವಾರುಗಳ ರಕ್ಷಣೆ](https://www.udayavani.com/wp-content/uploads/2024/06/dandeli-3-415x262.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Dandeli: ಪಂಪ್ ಹೌಸ್ ಬಳಿ ಅಕ್ರಮವಾಗಿ ಕಟ್ಟಿಹಾಕಿದ್ದ 22 ಜಾನುವಾರುಗಳ ರಕ್ಷಣೆ](https://www.udayavani.com/wp-content/uploads/2024/06/dandeli-3-150x95.jpg)
Dandeli: ಪಂಪ್ ಹೌಸ್ ಬಳಿ ಅಕ್ರಮವಾಗಿ ಕಟ್ಟಿಹಾಕಿದ್ದ 22 ಜಾನುವಾರುಗಳ ರಕ್ಷಣೆ
![3-belthangady](https://www.udayavani.com/wp-content/uploads/2024/06/3-belthangady-150x90.jpg)
ತಿರುವನಂತಪುರ ಅನಂತಪದ್ಮನಾಭ ದೇಗುಲ; ಪ್ರಧಾನ ಅರ್ಚಕರಾಗಿ ಸತ್ಯನಾರಾಯಣ ತೋಡ್ತಿಲ್ಲಾಯ ಆಯ್ಕೆ
![VK Sasikala: ರಾಜಕೀಯ ಪ್ರವೇಶಕ್ಕೆ ಸಮಯ ಪಕ್ವವಾಗಿದೆ… ವಿ.ಕೆ. ಶಶಿಕಲಾ ಮಹತ್ವದ ಘೋಷಣೆ](https://www.udayavani.com/wp-content/uploads/2024/06/vk-shahikala-150x92.jpg)
VK Sasikala: ರಾಜಕೀಯ ಪ್ರವೇಶಕ್ಕೆ ಸಮಯ ಪಕ್ವವಾಗಿದೆ… ವಿ.ಕೆ. ಶಶಿಕಲಾ ಮಹತ್ವದ ಘೋಷಣೆ
![Pannun: ಪನ್ನು ಹತ್ಯೆಗೆ ಸಂಚು ಆರೋಪ: ಭಾರತೀಯ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ](https://www.udayavani.com/wp-content/uploads/2024/06/pannun-150x84.jpg)
Pannun: ಪನ್ನು ಹತ್ಯೆಗೆ ಸಂಚು ಆರೋಪ: ಭಾರತೀಯ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ
![2-thirthahalli](https://www.udayavani.com/wp-content/uploads/2024/06/2-thirthahalli-150x90.jpg)
Thirthahalli: ಬಸ್-ಲಾರಿ ಡಿಕ್ಕಿ; ಕೆಲವರಿಗೆ ಸಣ್ಣಪುಟ್ಟ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.