ಮನೆಗೆ ಆಕಸ್ಮಿಕ ಬೆಂಕಿ: ಆಭರಣ-ನಗದು ಆಹುತಿ
Team Udayavani, Dec 8, 2018, 10:36 AM IST
ಚಿಂಚೋಳಿ: ತಾಲೂಕಿನ ಕೋಡ್ಲಿ ಗ್ರಾಮದಲ್ಲಿ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಮನೆಯಲ್ಲಿದ್ದ 6 ತೊಲೆ ಬಂಗಾರ, 25 ತೊಲೆ ಬೆಳ್ಳಿ ಹಾಗೂ ನಗದು ಲಕ್ಷಾಂತರ ರೂ. ಬೆಂಕಿಗೆ ಆಹುತಿ ಆಗಿರುವ ಘಟನೆ ಗುರುವಾರ ತಡರಾತ್ರಿ ನಡೆದಿದೆ. ಚಂದ್ರಕಾಂತ ಭೀಮಶಾ ಭಜಂತ್ರಿ ಎನ್ನುವರ ಮನೆಯೇ ಬೆಂಕಿಗೆ ಆಹುತಿಯಾಗಿದ್ದು. ಮನೆಯವರೆಲ್ಲ ಪಕ್ಕದಲ್ಲಿ ನೂತನವಾಗಿ ನಿರ್ಮಿಸಿದ ಮನೆಯೊಂದರ ಗೃಹಪ್ರವೇಶಕ್ಕೆ ಹೋಗಿ ಅಲ್ಲಿಯೇ ತಂಗಿದ್ದರು. ಈ ವೇಳೆ ಘಟನೆ ನಡೆದಿದೆ.
ಆಕಸ್ಮಿಕವಾಗಿ ಮನೆಗೆ ಬೆಂಕಿ ಹೊತ್ತಿಕೊಂಡಿದ್ದನ್ನು ನೋಡಿದ ಗ್ರಾಮಸ್ಥರು ಬೆಂಕಿ ಆರಿಸುವ ಮೊದಲೇ ಮನೆಯಲ್ಲಿದ್ದ ಬೆಲೆ ಬಾಳುವ ವಸ್ತುಗಳು, ದಿನ ಬಳಕೆ ಆಹಾರ ಧಾನ್ಯ, ಬಟ್ಟೆ ಹಾಗೂ ಮಗಳ ಮದುವೆ ಸಂಗ್ರಹಿಸಿಟ್ಟಿದ್ದ ಕಿವಿಯೋಲೆ, ತಾಳಿ ಹಾಗೂ ಇನ್ನಿತರ ಒಡವೆಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ.
ಶಾಸಕರ ಭೇಟಿ: ಬೆಂಕಿಗೆ ಮನೆಯೊಳಗಿದ್ದ ಬೆಲೆ ಬಾಳುವ ವಸ್ತುಗಳು ಹಾನಿಯಾಗಿದ್ದು ಹಾಗೂ ಲಕ್ಷಾಂತರ ರೂ.ಗಳು ಸುಟ್ಟ ಬಗ್ಗೆ ಕಂದಾಯ ಅಧಿಕಾರಿಗಳಿಗೆ ಮತ್ತು ರಟಕಲ್ ಪೊಲೀಸರಿಗೆ ವರದಿ ನೀಡುವಂತೆ ತಿಳಿಸಲಾಗಿದೆ. ಶೀಘ್ರವೇ ಸರ್ಕಾರದಿಂದ ಪರಿಹಾರ ಕೊಡಿಸುತ್ತೇನೆ ಎಂದು ಶಾಸಕ ಡಾ| ಉಮೇಶ ಜಾಧವ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಭರವಸೆ ನೀಡಿದರು.
ತಾಪಂ ಅಧ್ಯಕ್ಷೆ ರೇಣುಕಾ ಚವ್ಹಾಣ, ಪಿಎಸ್ಐ ಇಂದಿರಾ ಪಾಟೀಲ ಚಂದಾಪುರ, ಮಾರುತಿ ಜಮಾದಾರ, ಅಲಿಮ ನಾಯಕೋಡಿ, ಮಲ್ಲಿಕಾರ್ಜುನ ಚಿಂತಕುಂಟ, ಬಸವರಾಜ ಕೋಲಕುಂದಿ, ದೇವಲಾ ನಾಯಕ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ
Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ
CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ
Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ
ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.