ಸರಕಾರಿ ಜಾಗ ಒತ್ತುವರಿ ಮಾಡಿದರೆ ಕ್ರಮ


Team Udayavani, Feb 11, 2020, 10:49 AM IST

gb-tdy1

ಚಿಂಚೋಳಿ: ತಾಲೂಕಿನ ಅಣವಾರ ಗ್ರಾಮದ ಸರಕಾರಿ ಜಮೀನು ಸರ್ವೆ ನಂ.12ರಲ್ಲಿ ಕೆಲವರು ಅಕ್ರಮವಾಗಿ ಕಲ್ಲು ತಂದು ಹಾಕಿದ್ದಾರೆ. ಕೆಲವು ಕಡೆಗಳಲ್ಲಿ ಅನಧಿಕೃತವಾಗಿ ಜನರು ಮನೆ ನಿರ್ಮಿಸಿಕೊಂಡಿದ್ದಾರೆ. ಸರಕಾರಿ ಜಮೀನು ಒತ್ತುವರಿ ಮಾಡಿಕೊಳ್ಳುವುದು ಸರಿಯಲ್ಲ. ಯಾರಾದರು ಒತ್ತುವರಿ ಮಾಡಿದರೆ ಅಂತಹವರ ವಿರುದ್ಧ ಕಲಂ 192ರ ಪ್ರಕಾರ ಪ್ರಕರಣ ದಾಖಲಿಸಲಾಗುವುದು ಎಂದು ತಹಶೀಲ್ದಾರ್‌ ಅರುಣಕುಮಾರ ಕುಲಕರ್ಣಿ ಎಚ್ಚರಿಕೆ ನೀಡಿದರು.

ಅಣವಾರದಲ್ಲಿ ಶಾಸಕ ಡಾ|ಅವಿನಾಶ ಜಾಧವ ಅಧ್ಯಕ್ಷತೆಯಲ್ಲಿ ನಡೆದ ಜನ ಸಂಪರ್ಕ ಸಭೆಯಲ್ಲಿ ಅವರು ಮಾತನಾಡಿದರು.ಸರಕಾರಿ ಜಮೀನು ಸರ್ವೆ ನಂ.12ರಲ್ಲಿಒಟ್ಟು 249 ಎಕರೆ ಸರಕಾರಿ ಜಮೀನು ಇದೆ. ಗ್ರಾಮಸ್ಥರು ಬೇಕಾಬಿಟ್ಟಿಯಾಗಿ ಜಮೀನು ಕಬೆjಮಾಡಿಕೊಂಡಿದ್ದಾರೆ. ಈಗಾಗಲೇ ಹೈಕೋರ್ಟ್ ನಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಪ್ರಕರಣ ಇತ್ಯರ್ಥವಾಗಿಲ್ಲ. ಸರಕಾರಿ ಜಮೀನು ಅನಧಿಕೃತವಾಗಿ ಒತ್ತುವರಿ ಮಾಡಿದರೆ ಕಂದಾಯ ಇಲಾಖೆಯಿಂದ ಪ್ರಕರಣ ದಾಖಲಿಸಲಾಗುವುದು ಎಂದು ಹೇಳಿದರು.

ಶಾಸಕ ಡಾ| ಅವಿನಾಶ ಜಾಧವ ಮಾತನಾಡಿ, ಜನರ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸುವುದು ಜನಸಂಪರ್ಕ ಸಭೆ ಮುಖ್ಯ ಉದ್ದೇಶ. ನಿಮ್ಮ ಸಮಸ್ಯೆಗಳನ್ನು ಲಿಖೀತವಾಗಿ ನೀಡಿ. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚಿಸಿ ಸಮಸ್ಯೆ ಬಗೆಹರಿಸಲಾಗುವುದು. ನಿಮ್ಮ ಗ್ರಾಮದಲ್ಲಿ ಎಲ್ಲಿಯೂ ಸ್ಥಳ ಅವಕಾಶವಿಲ್ಲ. ಶೌಚಾಲಯ,ಶಾಲೆ ನಿರ್ಮಾಣಕ್ಕಾಗಿ ಜಾಗದ ಕೊರತೆ ಇದೆ. ನಿಮ್ಮ ಗ್ರಾಮಗಳಿಗೆ ಅನೇಕ ಅಭಿವೃದ್ಧಿ ಕಾರ್ಯ ಮಂಜೂರಿ ಮಾಡಬೇಕಾಗಿದೆ. ಜಾಗ ಇಲ್ಲದಿದ್ದರೆ ಏನು ಮಾಡಬೇಕು ಎಂದು ಪ್ರಶ್ನಿಸಿದರು.

ಇಂದ್ರಪಾಡ ಹೊಸಳ್ಳಿ ಗ್ರಾಮದಲ್ಲಿ ಚರಂಡಿ ಇಲ್ಲ, ಸಿಮೆಂಟ್‌ ರಸ್ತೆಯಿಲ್ಲ. ಜನರಿಗೆ ಸಾರ್ವಜನಿಕ ನಳ ಇಲ್ಲ. ಅಲ್ಲದೇ ಮನೆ ಕಟ್ಟಿಕೊಂಡವರಿಗೆ ಹಣ ಇನ್ನು ಪಾವತಿಯಾಗಿಲ್ಲ. ಗರ್ಭಿಣಿಯರಿಗೆ ಮಾತೃಶ್ರೀ ಯೋಜನೆ ಅಡಿ ಸಹಾಯಧನ ಇನ್ನು ನೀಡಿಲ್ಲ ಎಂದು ಗ್ರಾಮಸ್ಥರು ಶಾಸಕರ ಮುಂದೆ ಸಮಸ್ಯೆ ವಿವರಿಸಿದರು. ಸುಭಾಸ ಗಂಗನಪಳ್ಳಿ ಮಾತನಾಡಿ, ನಮ್ಮ ಗ್ರಾಮದಲ್ಲಿ ಸಾಮೂಹಿಕ ಶೌಚಾಲಯಗಳಿಲ್ಲ. ಸ್ಮಶಾನ ಭೂಮಿ ಇಲ್ಲ. ವಿದ್ಯುತ್‌ ಸರಬರಾಜು ಸರಿಯಾಗಿ ಆಗುತ್ತಿಲ್ಲ. ನೀರು ಸಾಕಷ್ಟು ಇದ್ದರು ಸಹ ಗ್ರಾಪಂ ನಿರ್ವಹಣೆ ಸರಿಯಾಗಿಲ್ಲ ಎಂದು ದೂರಿದರು.

ಹಣಮಂತ ಗೌರಿ ಮಾತನಾಡಿ, ನಮ್ಮ ಊರಿನ ಸರಕಾರಿ ಶಾಲೆಗೆ ಕಾಂಪೌಂಡ್‌ ಇಲ್ಲ. ಮಕ್ಕಳುರಾಷ್ಟ್ರಗೀತೆ ಹಾಡುವಾಗ ನಮ್ಮ ಊರಿನ ಗೌಡರ ದನಕರುಗಳು ಶಾಲೆಗೆ ನುಗ್ಗುತ್ತವೆ. ಇದರಿಂದ ಮಕ್ಕಳಿಗೆ ಸುರಕ್ಷತೆ ಇಲ್ಲ. ಸರಕಾರಿ ಶಾಲೆ ಪರಿಸರ ಸಂಪೂರ್ಣ ಹಾಳಾಗಿದೆ. 1ರಿಂದ 8ನೇ ತರಗತಿ ಶಾಲೆಯಲ್ಲಿ ಒಟ್ಟು 70 ಮಕ್ಕಳು ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಾರೆ. ಆದರೆ ಕಳೆದ 20 ವರ್ಷಗಳಿಂದ ಕಾಂಪೌಂಡ್‌ ಇಲ್ಲ ಎಂದು ದೂರಿದರು.

ನಮ್ಮ ಗ್ರಾಪಂ ಅಧ್ಯಕ್ಷ, ಪಿಡಿಒ ಮತ್ತು ಸದಸ್ಯರ ಮಧ್ಯೆ ಇರುವ ಭಿನ್ನಾಭಿಪ್ರಾಯಗಳಿಂದಾಗಿ ಯಾವುದೇ ಅಭಿವೃದ್ಧಿ ಕೆಲಸಗಳಾಗುತ್ತಿಲ್ಲ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದರು. ತಾಪಂ ಅಧಿಕಾರಿ ಅನೀಲಕುಮಾರ ರಾಠೊಡ, ಗ್ರಾಪಂ ಅಧ್ಯಕ್ಷ ಬಸವಂತರೆಡ್ಡಿ ಪಾಟೀಲ, ವೆಂಕಟರೆಡ್ಡಿ ಪಾಟೀಲ, ಸಂತೋಷ ಗಡಂತಿ, ಲಕ್ಷ¾ಣ ಆವಂಟಿ, ಶ್ರೀಮಂತ ಕಟ್ಟಿಮನಿ, ಚಂದ್ರಶೇಖರ ಗುತ್ತೇದಾರ, ಬಸವರಾಜ ದೇಶಮುಖ, ಗುರಮ್ಮ ಮಠಪತಿ, ಶಿವಪುತ್ರಪ್ಪ, ಶ್ರೀಕಾಂತ ಗೌನಳ್ಳಿ, ಸೋಮಶೇಖರಮಂಗಲಗಿ, ಸುರೇಶ ಬಟಗೇರಿ, ಶರಣಪ್ಪ ತಳವಾರ, ಸುಧಾಕರ ತಳವಾರ, ವೀರಾರೆಡ್ಡಿ ಬಸರೆಡ್ಡಿ, ಶರಣಪ್ಪ ಪೂಜಾರಿ, ಶಾಂತಲಿಂಗಪ್ಪ ಬಿರಾದಾರ, ಅಧಿಕಾರಿಗಳಾದ ಡಾ| ದೀಪಕ ಪಾಟೀಲ, ಎಇಇ ಮಹ್ಮದ್‌ ಅಹೆಮದ್‌ ಹುಸೇನ್‌, ಎಇಇ ಪರಮೇಶ್ವರ ಬಿರಾದಾರ, ಪ್ರಭುಲಿಂಗ ಬುಳ್ಳ, ಪರಿಮಳ, ಡಾ| ಧನರಾಜ ಬೊಮ್ಮ ಭಾಗವಹಿಸಿದ್ದರು. ನಾಗೀಂದ್ರಪ್ಪ ಬಿರಾದಾರ ಸ್ವಾಗತಿಸಿದರು.

ಟಾಪ್ ನ್ಯೂಸ್

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.