ರಸಗೊಬ್ಬರಕ್ಕೆ ಹೆಚ್ಚಿನ ದರ ವಿಧಿಸಿದರೆ ಕ್ರಮ
Team Udayavani, Jul 24, 2022, 2:11 PM IST
ಜೇವರ್ಗಿ: ಹೆಚ್ಚಿನ ದರ ಪಡೆದು ಅಧಿಕೃತ ಬಿಲ್ ನೀಡದೇ ರಸಗೊಬ್ಬರ ಮಾರಿದರೆ ಅಂತವರ ರಸಗೊಬ್ಬರ ಮಾರಾಟ ಪರವಾನಗಿ ರದ್ಧುಪಡಿಸಲಾಗುವುದು ಎಂದು ಸಹಾಯಕ ಕೃಷಿ ನಿರ್ದೇಶಕ ಶರಣಗೌಡ ರಂಗಣಗೌಡ ಎಚ್ಚರಿಸಿದರು.
ಪಟ್ಟಣದ ಕೃಷಿ ಇಲಾಖೆ ಕಚೇರಿ ಆವರಣದಲ್ಲಿ ರಸಗೊಬ್ಬರ ಮಾರಾಟ ಗಾರರ ಸಭೆ ನಡೆಸಿ ಮಾತನಾಡಿದ ಅವರು, ಕೆಲವು ರೈತರು ಕೃಷಿ ಕಚೇರಿಗೆ ಬಂದು ತಾಲೂಕಿನಲ್ಲಿ ಕೆಲವೊಂದು ರಸಗೊಬ್ಬರ ವಿತರಕರು ಡಿಎಪಿ, ಯೂರಿಯಾ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವುದಾಗಿ ದೂರಿದ್ದಾರೆ. ಕಾರಣ ರಸಗೊಬ್ಬರ ಮಾರಾಟಗಾರರು ಸರ್ಕಾರ ನಿಗದಿಪಡಿಸಿದ ಗರಿಷ್ಠ ಮಾರಾಟ ದರದಲ್ಲೇ ರಸಗೊಬ್ಬರ ಮಾರಬೇಕು. ರೈತರಿಗೆ ಕಡ್ಡಾಯವಾಗಿ ಅಧಿಕೃತ ಬಿಲ್ ನೀಡಬೇಕು ಎಂದು ಸೂಚಿಸಿದರು.
ಪ್ರತಿ ರಸಗೊಬ್ಬರ ವಿತರಕರು ತಮ್ಮ ಅಂಗಡಿಯಲ್ಲಿ ದಾಸ್ತಾನು ಇರುವ ರಸಗೊಬ್ಬರ ಮಾಹಿತಿಯನ್ನು ಕೃಷಿ ಇಲಾಖೆಗೆ ಪ್ರತಿದಿನ ಸಲ್ಲಿಸಬೇಕು ಎಂದು ಹೇಳಿದರು.
ತಾಂತ್ರಿಕ ಕೃಷಿ ಅಧಿಕಾರಿ ಪವನಕುಮಾರ ಕಟ್ಟಿಮನಿ, ಸಹಾಯಕ ಕೃಷಿ ಅಧಿಕಾರಿಗಳಾದ ಶಿವಲಿಂಗಪ್ಪ ಅವಂಟಿ, ಅನಿಲದೇವ, ತಾಲೂಕು ಆಗ್ರೋ ಅಸೋಷಿಯೇಶನ್ ಸಂಘದ ಅದ್ಯಕ್ಷ ದಯಾನಂದ ದೇವರಮನಿ, ಮಲ್ಲಿಕಾರ್ಜುನ ಪಾಟೀಲ ಬಿರಾಳ, ಈರಣ್ಣ ಬನ್ನೆಟ್ಟಿ, ಶಿವಶಂಕರ ಪಾಟೀಲ ಹಳ್ಳಿ, ಸತೀಶಬಾಬು ಹರವಾಳ, ಶರಣಗೌಡ ಹಳ್ಳಿ, ಮಹ್ಮದ್ ಸೋಫಿ ಗಂವ್ಹಾರ, ಶಿವರೆಡ್ಡಿ ಹಾಗೂ ತಾಲೂಕಿನ ವಿವಿಧ ರಸಗೊಬ್ಬರ ವಿತರಕರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ