ನೂತನ ತಾಲೂಕಿಗೆ ಸಮೀಪದ ಹಳ್ಳಿ ಸೇರಿಸಿ
Team Udayavani, Jan 22, 2018, 11:20 AM IST
ಶಹಾಬಾದ: ನಗರವನ್ನು ನೂತನ ತಾಲೂಕು ಕೇಂದ್ರವೆಂದು ರಾಜ್ಯ ಸರ್ಕಾರ ಘೋಷಿಸಿದ್ದು, ಇದರ ವ್ಯಾಪ್ತಿಗೆ ಸಮೀಪದ ಹಳ್ಳಿಗಳನ್ನು ಸೇರ್ಪಡೆಗೊಳಿಸಬೇಕೆಂದು ಆಗ್ರಹಿಸಿ ಶಹಾಬಾದ ನಾಗರಿಕ ಹೋರಾಟ ಸಮಿತಿಯ ಸದಸ್ಯರು ಹೆಚ್ಚುವರಿ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗಳ್ಳಿ ಅವರಿಗೆ ಮನವಿ ಸಲ್ಲಿಸಿದರು.
ಈಗಾಗಲೇ ಪ್ರಕಟಿತ ರಾಜ್ಯ ಪತ್ರದಲ್ಲಿ ಘೋಷಿತ ತಾಲೂಕಿಗೆ ಕೇವಲ 12 ಗ್ರಾಮಗಳನ್ನು ಮಾತ್ರ ಸೇರ್ಪಡೆಗೊಳಿಸಿದೆ.
ಈ ಹಿಂದೆ ಶಹಾಬಾದ ಹೋಬಳಿ ವ್ಯಾಪ್ತಿಗೆ ಸುಮಾರು 20 ಹಳ್ಳಿಗಳು ಬರುತ್ತಿದ್ದವು. ಆದರೀಗ 12 ಹಳ್ಳಿಗಳನ್ನು ಸೇರಿಸಿ
ಅವೈಜ್ಞಾನಿಕವಾಗಿ ಮಾಡಿದ್ದಾರೆ. ತಾಲೂಕು ಕೇಂದ್ರದಿಂದ ಮುಗುಳನಾಗಾವ, ಶಂಕರವಾಡಿ, ಮಾಲಗತ್ತಿ, ಇಂಗಳಗಿ, ಕುಂದನೂರ, ಕಡಬೂರ, ಚಾಮನೂರ, ಬಳವಡಗಿ, ವಾಡಿ ಪಟ್ಟಣಗಳು ಕೇವಲ 8 ಕಿಮೀ ದೂರದಲ್ಲಿವೆ. ಆದರೆ
ಈ ಗ್ರಾಮಗಳು ಚಿತ್ತಾಪುರ ತಾಲೂಕಿನಿಂದ ಸುಮಾರು 25 ಕಿಮೀ ದೂರದಲ್ಲಿವೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ವಾಡಿ-ಶಹಾಬಾದ ಯೋಜನಾ ಪ್ರಾಧಿಕಾರ ಕಚೇರಿ, ರೈತ ಸಂಪರ್ಕ ಕೇಂದ್ರ, ಶಿಶು ಅಬಿವೃದ್ಧಿ ಕಾರ್ಯಾಲಯ, ನಗರದ
ನ್ಯಾಯಾಲಕ್ಕೆ ಸಂಬಂಧಿಸಿದಂತೆ ಸುಮಾರು 25ಕ್ಕೂ ಹೆಚ್ಚು ಹಳ್ಳಿಗಳು ಈ ಕಚೇರಿಯ ವ್ಯಾಪ್ತಿಗೆ ಬರುತ್ತವೆ. ಆದ್ದರಿಂದ ರಾಜ್ಯ ಸರ್ಕಾರ ಕೂಡಲೇ ಶೇಡೂಲ್1-2ರಲ್ಲಿ ಶಹಾಬಾದ ಹೋಬಳಿ ಹಾಗೂ ಇತರ ಕಾರ್ಯಾಲಯಗಳ ವ್ಯಾಪ್ತಿಗೆ ಬರುವ ಹಳ್ಳಿಗಳನ್ನು ತಾಲೂಕಿನ ವ್ಯಾಪ್ತಿಗೆ ಸೇರಿಸಿದಲ್ಲಿ ಭೌಗೋಳಿಕವಾಗಿ, ವೈಜ್ಞಾನಿಕವಾಗಿ ತಾಲೂಕು ರಚನೆ ಮಾಡಿದಂತಾಗುತ್ತದೆ ಎಂದು ಮನವಿಯಲ್ಲಿ ವಿವರಿಸಿದ್ದಾರೆ.
ಶಹಾಬಾದ ನಾಗರಿಕ ಹೋರಾಟ ಸಮಿತಿ ಅಧ್ಯಕ್ಷ ಮಹ್ಮದ್ ಅಲಿ ಜಮಾದಾರ, ಕಾರ್ಯದರ್ಶಿ ಕೃಷ್ಣಪ್ಪ ಕರಣಿಕ್, ಲೋಹಿತ್ ಕಟ್ಟಿ,ಶರಣು ವಸ್ತ್ರದ್, ರಾಜಮಹ್ಮದ್ ರಾಜಾ, ನಿಂಗಣ್ಣ ಹುಳಗೋಳಕರ್, ರಾಚಣ್ಣ ಅಲ್ಲಂಶೆಟ್ಟಿ, ರಮೇಶ ಭಟ್, ಜಾಫರ್ ಪಟೇಲ್, ಗಫೂರ್ ಪಟೇಲ್, ಶಿವಕುಮಾರ ಅವರಾದಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ