ವೀರಶೈವ-ಲಿಂಗಾಯತ ಒಬಿಸಿಯಲ್ಲಿ ಸೇರಿಸಿ
ನಿಗಮಕ್ಕೆ 500 ಕೋಟಿ ರೂ.ನೀಡಿದ್ದು ಸ್ವಾಗತಾರ್ಹ
Team Udayavani, Nov 25, 2020, 4:33 PM IST
ಕಲಬುರಗಿ: ಕರ್ನಾಟಕ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸಿ 500 ಕೋಟಿ ರೂ. ನಿಗದಿ ಮಾಡಿರುವುದು ಸ್ವಾಗತಾರ್ಹವಾಗಿದೆ. ಆದರೆ ವೀರಶೈವ-ಲಿಂಗಾಯತ ಸಮುದಾಯವನ್ನುಹಿಂದುಳಿದ ವರ್ಗಗಳ (ಒಬಿಸಿ) ಪಟ್ಟಿಯಲ್ಲಿ ಸೇರಿಸಿದರೆ ಮಾತ್ರ ಸಮರ್ಪಕ ನ್ಯಾಯ ದೊರಕಲು ಸಾಧ್ಯವಾಗುತ್ತದೆ ಎಂದು ಅಖೀಲ ಭಾರತ ವೀರಶೈವ-ಲಿಂಗಾಯತಮಹಾಸಭಾ ಜಿಲ್ಲಾಧ್ಯಕ್ಷ ಶರಣಕುಮಾರ ಮೋದಿ ಹೇಳಿದರು.
ನಿಗಮಕ್ಕೆ 500 ಕೋಟಿ ರೂ. ನಿಗದಿಗೊಳಿಸಿ ಆದೇಶಹೊರ ಬೀಳುತ್ತಿದ್ದಂತೆ ಮಂಗಳವಾರ ವೀರಶೈವ ಕಲ್ಯಾಣ ಮಂಟಪದಲ್ಲಿ ಸಮಾಜದ ಪದಾಧಿಕಾರಿಗಳೊಂದಿಗೆಸಿಹಿ ತಿನ್ನಿಸಿ ಸಂಭ್ರಮಿಸಿಕೊಂಡು ಮಾತನಾಡಿದ ಅವರು, ವೀರಶೈವ ಲಿಂಗಾಯತ್ ಸಮುದಾಯವನ್ನು ಇತರ ಹಿಂದುಳಿದ ವರ್ಗಗಳ (ಒಬಿಸಿ) ಪಟ್ಟಿಯಲ್ಲಿ ಸೇರ್ಪಡೆ ಮಾಡಲು ಕೇಂದ್ರ ಸರ್ಕಾರಕ್ಕೆ ಈಗ ಪ್ರಮುಖವಾಗಿ ಶಿಫಾರಸು ಮಾಡಬೇಕು. ಶಿಫಾರಸು ಮಾಡಲು ಯಾವುದೇ ಕಾರಣಕ್ಕೂ ವಿಳಂಬವಾಗಬಾರದು ಎಂದು ಹೇಳಿದರು.
ಇದನ್ನೂ ಓದಿ:ಮಳೆ ಹಾನಿ ಪ್ರದೇಶಕ್ಕೆ ಕೇಂದ್ರದಿಂದ ಅಧ್ಯಯನ ತಂಡ ಬಂದಿಲ್ಲ: ಅಜಿತ್ ಪವಾರ್
ಕೇಂದ್ರ ಒಬಿಸಿ ಪಟ್ಟಿಯಲ್ಲಿ ಸೇರ್ಪಡೆಯಾಗಿರುವ ಇತರ ಕೆಲವು ಸಮುದಾಯಗಳಿಗಿಂತಲೂ ಹೆಚ್ಚು ಆರ್ಥಿಕವಾಗಿ, ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದಿರುವ ವೀರಶೈವ ಲಿಂಗಾಯತ್ ಸಮುದಾಯ ಸೇರಿಲ್ಲ. ಹೀಗಾಗಿ ಕೇಂದ್ರದ ಯಾವುದೇ ಉದ್ಯೋಗದಲ್ಲಿ ಯಾವುದೇ ಮೀಸಲಾತಿ ದೊರೆಯದೇ ಅನ್ಯಾಯ ಎದುರಿಸುವಂತಾಗಿದೆ ಎಂದು ಮೋದಿ ಅಳಲು ತೋಡಿಕೊಂಡರು.
ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಅಪ್ಪು ಕಣಕಿ, ಮಹಾಸಭಾ ಜಿಲ್ಲಾ ಯುವ ಘಟಕದ ಅಧ್ಯಕ್ಷ ಡಾ| ಶಂಭುಲಿಂಗ ಪಾಟೀಲ ಬಳಬಟ್ಟಿ, ಮಹಾಸಭಾ ಪದಾಧಿಕಾರಿಗಳಾದ ಶರಣು ಭೂಸನೂರ, ನಾಗಲಿಂಗಯ್ಯ ಮಠಪತಿ, ಶಾಂತಕುಮಾರ ದುಧನಿ, ಮಚ್ಚೇಂದ್ರನಾಥ ಮೂಲಗೆ, ಶರಣು ಟೆಂಗಳಿ, ವಿಜಯಕುಮಾರ ಹುಲಿ, ಮಹಾದೇವ ಬೆಳಮಗಿ, ಸಂಗಮೇಶ ಮನ್ನಳ್ಳಿ, ಜಿ.ಕೆ. ಪಾಟೀಲ, ಅಶೋಕ ಮಾನಕರ್, ಶಾಂತರೆಡ್ಡಿ, ಸುನೀಲಕುಮಾರ ಬನಶೆಟ್ಟಿ ಮುಂತಾದವರಿದ್ದರು.
ಕರ್ನಾಟಕ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸಿ 500 ಕೋಟಿ ರೂ. ನಿಗದಿ ಮಾಡಿರುವಲ್ಲಿ ಕಲ್ಯಾಣ ಕರ್ನಾಟಕ ಭಾಗದ ಶಾಸಕರು ಕಾರಣರಾಗಿದ್ದಾರೆ. ಆರ್ಥಿಕವಾಗಿ ದುರ್ಬಲರಿಗೆ ನಿಗಮದಿಂದ ಸಹಾಯವಾಗಲಿದೆ.
–ಅಪ್ಪು ಕಣಕಿ, ಎಪಿಎಂಸಿ ಅಧ್ಯಕ್ಷ
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪದ್ಮ ಪ್ರಶಸ್ತಿ ಪ್ರಕಟ : ಬಿ.ಎಂ.ಹೆಗ್ಡೆ, ಎಸ್.ಪಿಬಿಗೆ ಪದ್ಮವಿಭೂಷಣ, ಕಂಬಾರರಿಗೆ ಪದ್ಮಭೂಷಣ
ಯಾವ ಖಾತೆ ಕೊಟ್ಟರೂ ಸಮರ್ಥವಾಗಿ ನಿಭಾಯಿಸಿ, ಯಶಸ್ಸು ಸಾಧಿಸಬೇಕು: ಡಿಸಿಎಂ ಅಶ್ವಥ್ನಾರಾಯಣ
ಹುಣಸೋಡು ಸ್ಫೋಟ ಪ್ರಕರಣ :ಕ್ರಷರ್ ಮಾಲೀಕ ಸೇರಿ ನಾಲ್ವರನ್ನು ಬಂಧಿಸಿದ ಪೊಲೀಸರು
ಮೇಲುಕೋಟೆ ವಜ್ರಾಂಗಿ ಆಭರಣ ಅವ್ಯವಹಾರ ಪ್ರಕರಣ: ಅರ್ಚಕ ನರಸರಾಜಭಟ್ ನೇಮಕಕ್ಕೆ ಹೈಕೋರ್ಟ್ ತಡೆ
JDS ಜಿಲ್ಲಾಧ್ಯಕ್ಷರಿಂದ ಗ್ರಾ.ಪಂ. ನೂತನ ಸದಸ್ಯರಿಗೆ ಹಣ ಹಂಚಿಕೆ: ಫೋಟೋ ವೈರಲ್
MUST WATCH
ಉಡುಪಿ ಕೃಷ್ಣ ಮಠಕ್ಕೆ ಬಾಳೆ ಎಲೆಯನ್ನು ನೀಡುವ ಯುವಕ
ತೊಗರಿ ರಾಶಿಗೆ ಬೆಂಕಿ ಹಚ್ಚಿ, ಪಂಪ್ ಸೆಟ್ ವಿದ್ಯುತ್ ಸಂಪರ್ಕ ಕಡಿತ ಮಾಡಿದ ದುಷ್ಕರ್ಮಿಗಳು!
ಸಮುದ್ರದಲ್ಲಿ ಪದ್ಮಾಸನ ಭಂಗಿ: ಕಾಲಿಗೆ ಸರಪಳಿ ಬಿಗಿದು ಈಜಿ ದಾಖಲೆ ಬರೆದ ಗಂಗಾಧರ್ ಜಿ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಚಾಲಕನ ಅವಾಂತರ: ನೂರಾರು ಮಂದಿಯ ಪ್ರಾಣ ಉಳಿಸಿದ ಕಾಪು ಎಸ್ಐ
ಅಹಿತಕರ ಬೆಳವಣಿಗೆಗಳು ಕಂಡುಬಂದರೆ ವಾಟ್ಸಾಪ್ ಮೂಲಕ ಮಾಹಿತಿ ಹಂಚಿಕೊಳ್ಳಿ; Compol ಶಶಿಕುಮಾರ್
ಹೊಸ ಸೇರ್ಪಡೆ
ಪದ್ಮ ಪ್ರಶಸ್ತಿ ಪ್ರಕಟ : ಬಿ.ಎಂ.ಹೆಗ್ಡೆ, ಎಸ್.ಪಿಬಿಗೆ ಪದ್ಮವಿಭೂಷಣ, ಕಂಬಾರರಿಗೆ ಪದ್ಮಭೂಷಣ
ಯಾವ ಖಾತೆ ಕೊಟ್ಟರೂ ಸಮರ್ಥವಾಗಿ ನಿಭಾಯಿಸಿ, ಯಶಸ್ಸು ಸಾಧಿಸಬೇಕು: ಡಿಸಿಎಂ ಅಶ್ವಥ್ನಾರಾಯಣ
ಹುಣಸೋಡು ಸ್ಫೋಟ ಪ್ರಕರಣ :ಕ್ರಷರ್ ಮಾಲೀಕ ಸೇರಿ ನಾಲ್ವರನ್ನು ಬಂಧಿಸಿದ ಪೊಲೀಸರು
ಮೇಲುಕೋಟೆ ವಜ್ರಾಂಗಿ ಆಭರಣ ಅವ್ಯವಹಾರ ಪ್ರಕರಣ: ಅರ್ಚಕ ನರಸರಾಜಭಟ್ ನೇಮಕಕ್ಕೆ ಹೈಕೋರ್ಟ್ ತಡೆ
145 ದಿನಗಳ ಬಳಿಕ ಪರಪ್ಪನ ಅಗ್ರಹಾರ ಜೈಲಿನಿಂದ ನಟಿ ರಾಗಿಣಿ ಬಿಡುಗಡೆ