ಕೂಡಿಸುವುದೇ ಧರ್ಮ-ಪ್ರತ್ಯೇಕಿಸುವುದೇ ಅಧರ್ಮ


Team Udayavani, Nov 25, 2017, 10:21 AM IST

gul-1.jpg

ಕಲಬುರಗಿ: ಒಡೆದ ಮನಸ್ಸುಗಳನ್ನು ಕೂಡಿಸುವುದು ಹಾಗೂ ಅವು ಒಡೆಯದಂತೆ ನೋಡಿಕೊಳ್ಳುವುದೇ ಧರ್ಮ, ಒಂದಾಗಿರುವ ಮನಸ್ಸುಗಳನ್ನು ಸ್ವಾರ್ಥಕ್ಕಾಗಿ ಪ್ರತ್ಯೇಕಗೊಳಿಸುವುದೇ ಅಧರ್ಮ ಎಂದು ಶ್ರೀಶೈಲ ಜಗದ್ಗುರು ಡಾ| ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮೀಜಿ ನುಡಿದರು.

ತಾಲೂಕಿನ ಇಟಗಾದಲ್ಲಿ ಸಾಧು ಶಿವಲಿಂಗೇಶ್ವರರ 59 ನೇ ಜಾತ್ರಾ ಮಹೋತ್ಸವದ ಅಂಗವಾಗಿ ಆಶೀರ್ವಚನ ನೀಡಿ, ವಿರೋಧ ರಹಿತಂ-ವೀರಶೈವಂ ಎಂದು ಹೇಳುವ ಮೂಲಕ ಯಾರನ್ನು ಯಾವ ಸಮುದಾಯವನ್ನು ವಿರೋಧಿಸದೇ ಎಲ್ಲರೊಂದಿಗೆ ಪ್ರೀತಿ, ವಿಶ್ವಾಸದಿಂದ ಬದುಕಬೇಕೆಂಬ ತತ್ವ ಸಿದ್ಧಾಂತವನ್ನು ಸನಾತನ ಕಾಲದಿಂದಲೂ ವೀರಶೈವ ಲಿಂಗಾಯತ ಧರ್ಮ ಸಾರುತ್ತ ಬಂದಿದೆ ಎಂದರು.

ಸ್ತ್ರೀ-ಪುರುಷರೆಂಬ ಲಿಂಗಬೇಧವಾಗಲಿ-ಉತ್ಛ, ನೀಚವೆಂಬ ಕುಲಬೇಧವಾಗಲಿ, ಬ್ರಾಹ್ಮಣ-ಶೂದ್ರ ಎನ್ನುವ ಜಾತಿಬೇಧವಾಗಲಿ ಈ ಧರ್ಮದಲ್ಲಿಲ್ಲ. ಅಷ್ಟಾವರಣ ಪಂಚಾಚಾರ್ಯ, ಷಟಸ್ಥಳವೆಂಬ ತತ್ವತ್ರೇಯಗಳ ತಳಹದಿ ಮೇಲೆ ಧರ್ಮ ಆಚರಣೆಯ ಅಧಿಕಾರವನ್ನು ಸರ್ವರಿಗೂ ಸಮಾನವಾಗಿ ನೀಡಲಾಗಿದೆ ಎಂದು ಹೇಳಿದರು.

ಶಖಾಪೂರ ತಪೋವನ ಮಠದ ಸಿದ್ದರಾಮ ಶಿವಾಚಾರ್ಯರು ಅಧ್ಯಕ್ಷತೆ ವಹಿಸಿದ್ದರು. ಚಿಣಮಗೇರಿಯ ಮರಿದೇವರು, ಸಿದ್ರಾಮಪ್ಪ ಆಲಗೂಡಕರ, ವೀರಭದ್ರಪ್ಪ ವರದಾನಿ, ರಾಯಗುಂಡಪ್ಪ ವಾಡಿ, ಶರಣಪ್ಪ ಪಾಟೀಲ, ಆನಂದಪ್ಪ ಮುಣಜಗಿ, ಶ್ರೀನಿವಾಸ ಕುಲಕರ್ಣಿ, ಬಾಬುರಾವ್‌ ಮುಕರಂಬಿ, ಶಿವಪುತ್ರ ಕೆಂಭಾವಿ, ರೇವಣಸಿದ್ದಪ್ಪ ಕೆಂಭಾವಿ, ಮಹಾಂತಗೌಡ ಸೊನ್ನದ, ಈಶ್ವರಗೌಡ ಸೊನ್ನದ, ಮಲ್ಲಯ್ಯ ಗುತ್ತೇದಾರ, ಭೀಮರಾಯ ನಾಟೀಕಾರ, ಅಶೋಕ ಹಲಕಟ್ಟಿ, ಖಾಸೀಂಸಾಬ್‌ ಮುಲ್ಲಾ ಹಾಗೂ ಇತರರಿದ್ದರು. 

ಸಾಧು ಶಿವಲಿಂಗೇಶ್ವರರ ಪುರಾಣ ಸುಮಿತ್ರಾಬಾಯಿ ಕೊಪ್ಪಳ ನಡೆಸಿಕೊಟ್ಟರು. ಸಿದ್ದಣ್ಣ ದೇಸಾಯಿ ಕೊಲ್ಲೂರರಿಂದ ಸಂಗೀತ ಜರುಗಿತು. ಸುಭಾಷ ಮಕರಂಬಿ ಸ್ವಾಗತಿಸಿದರು. ಶಿವಕುಮಾರ ಹಿರೇಮಠ ನಿರೂಪಿಸಿದರು. ಶ್ರೀಶೈಲ ಜಗದ್ಗುರುಗಳ ಅಡ್ಡ ಪಲ್ಲಕ್ಕಿಯ ಮೆರವಣಿಗೆ ಗ್ರಾಮದ ಪ್ರಮುಖ ಬೀದಿಗಳ ಮೂಲಕ ಸಭಾ ಮಂಟಪದವರೆಗೆ
ನಡೆಯಿತು. 

ವೀರಶೈವ ಧರ್ಮದ ಅಖಂಡತೆಗೆ ಕೈಜೋಡಿಸಿ ಶಿವಾಗಮಗಳ ಮೂಲಕ ಆರಂಭವಾದ ವೀರಶೈವ ಧರ್ಮಕ್ಕೆ ಆದಿ ಜಗದ್ಗುರು ರೇಣುಕಾದಿ ಪಂಚಾಚಾರ್ಯರು ಯುಗ ಪ್ರವರ್ತಕರಾದರೆ ಬಸವಾದಿ ಶಿವಶರಣರು ಪುನರೋದ್ಧಾರಕರಾಗಿದ್ದಾರೆ. ಇಂತಹ ವಿಶಾಲ ಮತ್ತು ಅತ್ಯಂತ ಪ್ರಾಚೀನವಾದ ವೀರಶೈವ ಲಿಂಗಾಯತ ಧರ್ಮವನ್ನು ತಮ್ಮ ಸ್ವಾರ್ಥಕ್ಕಾಗಿ ರಾಜಕೀಯ ಲಾಭಕ್ಕಾಗಿ ಇಬ್ಭಾಗ ಮಾಡುತ್ತಿರುವಯತ್ನ ಫಲಿಸದು. ಇದಕ್ಕೆ ಕೆಲ ಧಾರ್ಮಿಕ ಮುಖಂಡರು ಕೈಜೋಡಿಸುತ್ತಿರುವುದು ದುರಾದೃಷ್ಟಕರ. ಎಲ್ಲಾ ಸದ್ಭಕ್ತರು ಧರ್ಮದ ಅಖಂಡತೆ ಒಗ್ಗೂಡಿಸಲು ಕೈಜೋಡಿಸಬೇಕು.  
ಡಾ| ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯರು, ಶ್ರೀಶೈಲ ಜಗದ್ಗುರು

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.