ಸಿದ್ಧರಾಮರ ಆದರ್ಶ ಅಳವಡಿಸಿಕೊಳ್ಳಿ
Team Udayavani, Jan 16, 2018, 10:52 AM IST
ಅಫಜಲಪುರ: ಸೊನ್ನಲಿಗೆ ಸಿದ್ದರಾಮ ಶರಣರು ತಮ್ಮ ಸರಳ ಜೀವನ, ಉದಾತ್ತ ಜೀವನ ಮೌಲ್ಯ ಹೊಂದಿದ್ದರು. ಅವರು ರಚಿಸಿದ ವಚನಗಳು ನಮ್ಮ ಮನ ಪರಿವರ್ತನೆ ಮಾಡುತ್ತವೆ. ಹಾಗಾಗಿ ಅವರ ಆದರ್ಶಗಳನ್ನು ನಮ್ಮ
ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ವಿಶ್ವರಾಧ್ಯ ಮಳೇಂದ್ರ ಶಿವಾಚಾರ್ಯರು ಹೇಳಿದರು.
ಪಟ್ಟಣದ ತಹಶೀಲ್ದಾರ ಕಚೇರಿಯಲ್ಲಿ ತಾಲೂಕು ಆಡಳಿತದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸಿದ್ದರಾಮ ಶರಣರ ಜಯಂತಿ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಸ್ವಾಮೀಜಿ ಮಾತನಾಡಿದರು.
12ನೇ ಶತಮಾನದಲ್ಲಿ ಸೊನ್ನಲಿಗೆ ಸಿದ್ದರಾಮರು ಕೆರೆ ಕಟ್ಟೆ ಕಟ್ಟಿಸಿ ನೀರಿನ ದಾಹ ತಣಿಸಿದ್ದರು. ಅವರ ಜನೋಪಕಾರಿ ಕೆಲಸಗಳು ಇಂದಿಗೂ ಮಾದರಿಯಾಗಿವೆ. ಅವರಂತೆ ಇಂದಿನ ಜನನಾಯಕರು ಅನುಸರಿಸಬೇಕು. ನದಿಗಳು, ಹಳ್ಳ ಕೊಳ್ಳಗಳಿಗೆ ಡ್ಯಾಂ ಕಟ್ಟಿಸಬೇಕು. ಹಳ್ಳಿಗಳಲ್ಲಿ ಕೆರೆ ಕಟ್ಟಿಸಿ ಜನರ ಮತ್ತು ಪ್ರಾಣಿ ಪಕ್ಷಿಗಳ ನೀರಿನ ದಾಹ ತಣಿಸುವ ಕೆಲಸ ಮಾಡಬೇಕಾಗಿದೆ ಎಂದು ಹೇಳಿದರು. ತಹಶೀಲ್ದಾರ ಇಸ್ಮಾಯಿಲ್ ಮುಲ್ಕಿ, ಭೋವಿ ವಡ್ಡರ ಸಮಾಜದ ತಾಲೂಕು ಅಧ್ಯಕ್ಷ ಅಶೋಕ ಲಸ್ಕರ ಮಾತನಾಡಿದರು.
ಪುರಸಭೆ ಸದಸ್ಯರಾದ ಹಣಮಂತ ವಡ್ಡರ, ನಾಗಪ್ಪ ಆರೇಕರ, ಮುಖಂಡರಾದ ಕಲ್ಯಾಣಿ ಜಾಧವ, ರಾಮಣ್ಣ ವಡ್ಡರ, ರಾಜು ಲಸ್ಕರ್, ಗೋಪಾಲ ನಿಂಬಾಳಕರ, ಪುರಸಭೆ ಮುಖ್ಯಾಧಿಕಾರಿ ವಿಠ್ಠಲ ಹಾದಿಮನಿ, ಸಿಡಿಪಿಒ ಸರಳಾ ದೊಡ್ಮನಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು