ಕಬ್ಬಿಗೆ ಗೊಣ್ಣೆ ಹುಳು ಕಾಟ ಹತೋಟಿಗೆ ವಿಜ್ಞಾನಿಗಳಿಂದ ರೈತರಿಗೆ ಸಲಹೆ


Team Udayavani, Aug 26, 2022, 2:34 PM IST

4-report

ಕಲಬುರಗಿ: ಜಿಲ್ಲೆಯಲ್ಲಿ ಕಬ್ಬಿನ ಬೆಳೆಗೆ ಕಳೆದ ಹಲವು ದಿನಗಳಿಂದ ಗೊಣ್ಣೆ ಹುಳುವಿನ ಮತ್ತು ಶಂಕದ ಹುಳುವಿನ ಕಾಟ ಹೆಚ್ಚಾಗಿದೆ. ಇದರಿಂದಾಗಿ ಕಬ್ಬು ಬೆಳೆದ ರೈತರಲ್ಲಿ ಆತಂಕ ಎದುರಾಗಿದೆ.

ಜಿಲ್ಲೆಯ ಆಳಂದ, ಅಫಜಲಪುರ ಮತ್ತು ಜೇವರ್ಗಿ ತಾಲೂಕಿನ ಬಹುತೇಕ ಪ್ರದೇಶದಲ್ಲಿ ಗೊಣ್ಣೆ ಹುಳು ಕಾಣಿಸಿಕೊಂಡಿದೆ. ಅತಿಯಾದ ಮಳೆಯಿಂದ ಭೂಮಿಯಲ್ಲಿ ತೇವಾಂಶ ಹೆಚ್ಚಾದಾಗ ಕಬ್ಬು, ಸೋಯಾ ಮತ್ತು ಇತರೆ ಹಣ್ಣಿನ ಬೆಳೆಯಲ್ಲಿ ಈ ಹುಳು ಹೆಚ್ಚಾಗಿ ಕಂಡು ಬರುತ್ತಿದೆ. ಅದರ ಜತೆಯಲ್ಲಿ ಬಸವನ ಹುಳು ಅಥವಾ ಶಂಕದ ಹುಳು ಕೂಡ ಬೆಳೆಗಳಿಗೆ ಹಾನಿ ಉಂಟು ಮಾಡುತ್ತಿದೆ. ಇದರಿಂದಾಗಿ ತಡವಾದರೂ ಪರವಾಗಿಲ್ಲ, ಈ ಬಾರಿಯ ಮುಂಗಾರಿಗೆ ಚೆನ್ನಾಗಿ ಮಳೆಯಾಗಿದ್ದರೂ, ಹುಳುವಿನ ಕಾಟದಿಂದಾಗಿ ನಿರೀಕ್ಷಿತ ಪ್ರಮಾಣದಲ್ಲಿ ಫಸಲು ಪಡೆಯುತ್ತೇವೋ ಇಲ್ಲವೋ ಎನ್ನುವ ಧಾವಂತದಲ್ಲಿ ರೈತರು ದಿನ ದೂಡುವಂತಾಗಿದೆ.

35ಸಾವಿರ ಹೆಕ್ಟೇರ್‌ನಲ್ಲಿ ಕಬ್ಬು ಬೆಳೆ: ಜಿಲ್ಲೆಯಲ್ಲಿ ಒಟ್ಟು 35ಸಾವಿರಕ್ಕೂ ಹೆಚ್ಚು ಹೆಕ್ಟೇರ್‌ನಲ್ಲಿ ಕಬ್ಬು, 24ಸಾವಿರ ಹೆಕ್ಟೇರ್‌ನಷ್ಟು ಪ್ರದೇಶದಲ್ಲಿ ಸೋಯಾ ಬೆಳೆ ಬೆಳೆಯಲಾಗಿದೆ. ಆರಂಭದಲ್ಲಿ ಮಳೆ ಮುನ್ಸೂಚನೆ ಚೆನ್ನಾಗಿರುವುದರಿಂದ ಈ ಬಾರಿ ಸೋಯಾ ಬೆಳೆ ಕ್ಷೇತ್ರ ಹೆಚ್ಚು ವಿಸ್ತಾರಗೊಂಡಿದೆ. ಕೆಲವು ವಾರಗಳಿಂದ ಕಬ್ಬು ಒಣಗುತ್ತಿದೆ. ಕಾರಣ ನೋಡಿದಾಗ ಗೊಣ್ಣೆ ಹುಳುವಿನ ಬಾಧೆ ಉಂಟಾಗಿದೆ. ಸೋಯಾದ ಬೇರುಗಳಲ್ಲೂ ಗೊಣ್ಣೆ ಮತ್ತು ಬಸವನ ಹುಳುವಿನ ಕಾಟ ಕಂಡುಬಂದಿದೆ. ಪ್ರಮುಖವಾಗಿ ಆಳಂದ ತಾಲೂಕಿನ ಸಾವಳೇಶ್ವರ, ಸುಂಟ ನೂರು, ಅಫಜಲಪುರ ತಾಲೂಕಿನ ಮೇಳಕುಂದಾ (ಕೆ), ಮೇಳಕುಂದಾ(ಬಿ), ಗೊಬ್ಬೂರು, ಅಫಜಲಪುರ, ಅತನೂರು, ಮಾಶ್ಯಾಳ ಸೇರಿದಂತೆ ಹಿರೇಜೇವರ್ಗಿ ವಲಯದಲ್ಲೂ ಗೊಣ್ಣೆ ಹುಳು ಕಾಣಿಸಿಕೊಂಡಿದೆ ಎಂದು ರೈತರು ಮಾಹಿತಿ ನೀಡಿದ್ದಾರೆ.

ಸಾಮಾನ್ಯವಾಗಿ ಆಗಸ್ಟ್‌, ಸೆಪ್ಟೆಂಬರ್‌ನಲ್ಲಿ ಗೊಣ್ಣೆ ಹುಳು ಕಾಣಿಸಿಕೊಳ್ಳುತ್ತದೆ. ಇದು ಕಬ್ಬು, ಸೋಯಾ, ದಾಳಿಂಬೆ, ಡ್ರಾಗ್ಯಾನ್‌ ಹಣ್ಣು ಸೇರಿದಂತೆ ಇತರೆ ಎಲ್ಲ ಬೆಳೆ ಯಲ್ಲಿ ಕಂಡು ಬರುತ್ತದೆ. ನಿರ್ವಹಣೆ ಮಾಡದೇ ಇದ್ದರೆ ಸಂಪೂರ್ಣ ಬೆಳೆ ನಾಶ ಮಾಡುವ ದೈತ್ಯ ಹುಳು. ಇದರ ನಿರ್ವಹಣೆಗೆ ಮೈಟಾರೈಝಿಯಂ ಅನಿಸೋಪ್ಲಿಯ ಶಿಲೀಂದ್ರವನ್ನು ಎಕೆರೆಗೆ 2ರಿಂದ 3ಕೆಜಿಯಂತೆ ಬಳಕೆ ಮಾಡುವು ದರಿಂದ ಹತೋಟಿ ಸಾಧ್ಯ. -ಡಾ|ರಾಜು ತೆಗ್ಗಳ್ಳಿ, ವಿಜ್ಞಾನಿ, ಕೆವಿಕೆ, ಕಲಬುರಗಿ

-ಸೂರ್ಯಕಾಂತ್‌ ಎಂ.ಜಮಾದಾರ

ಟಾಪ್ ನ್ಯೂಸ್

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.