ಜನಪದ ಸಾಹಿತ್ಯ ಉಳಿಸಿ ಬೆಳೆಸಲು ಸಲಹೆ


Team Udayavani, Feb 4, 2019, 7:52 AM IST

gul-8.jpg

ಶಹಾಬಾದ: ಜನಪದ ಸಾಹಿತ್ಯ ಬಂಗಾರವಿದ್ದಂತೆ. ಅದರಲ್ಲಿರುವ ಸತ್ವ, ತತ್ವಗಳನ್ನು ಪ್ರತಿಯೊಬ್ಬರೂ ಅರಿಯಬೇಕು. ಗ್ರಾಮೀಣ ಭಾಗದಲ್ಲಿ ಇನ್ನು ಜಿವಂತಿಕೆಯಿಂದಿರುವ ಜನಪದ ಸಾಹಿತ್ಯ ಉಳಿಸಿ, ಬೆಳೆಸುವ ಕಾರ್ಯ ಮಾಡಬೇಕಾಗಿದೆ ಎಂದು ತಹಶೀಲ್ದಾರ ಸುರೇಶ ವರ್ಮಾ ಹೇಳಿದರು.

ನಗರದ ಚುನ್ನಾಭಟ್ಟಿ ಬಡಾವಣೆಯ ಶ್ರೀ ಸಿದ್ಧಾರೂಡ ಸ್ವಾಮೀಜಿ ಶಿಕ್ಷಣ ಸಂಸ್ಥೆ , ಕಲಬುರಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಜನಪದ ಜಾತ್ರೆ, ಜನಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಆದಿಕಾಲದಿಂದ ಆಧುನಿಕ ಕಾಲದವರೆಗೂ ಸಮಾಜದಲ್ಲಿ ನಡೆದುಕೊಂಡು ಬಂದಿರುವ ಜನಪದ ಗೀತೆಗಳು ಮತ್ತು ಸಾಹಿತ್ಯ ಇಂದಿಗೆ ಮರೆಯಾಗುತ್ತಿವೆ. ಉತ್ತಮ ಸಾಹಿತ್ಯದ ಜಾಗದಲ್ಲಿ ಅನ್ಯ ಸಾಹಿತ್ಯ ಸೇರಿ ಕಲುಷಿತವಾಗುತ್ತಿದೆ. ಹಿಂದೆ ಗ್ರಾಮಾಂತರ ಪ್ರದೇಶಗಳಲ್ಲಿ ಅನಕ್ಷರಸ್ಥ ಮಹಿಳೆಯೂ ಮನೆ ಕೆಲಸ ಮಾಡುವಾಗ, ಮಗುವನ್ನು ಮಲಗಿಸುವಾಗ, ರಾಗಿ-ಜೋಳದ ಕಲ್ಲು ಬೀಸುವಾಗ, ಅಡುಗೆ ಮಾಡುವಾಗ, ಜಮೀನಿನಲ್ಲಿ ಕೆಲಸ ಮಾಡುವಾಗ ಇನ್ನಿತರ ಕೆಲಸ ಮಾಡುವ ಸಂದರ್ಭಗಳಲ್ಲಿ ಜನಪದ ಗೀತೆಗಳನ್ನು ಹಾಡುತ್ತಿದ್ದರು. ಆದರಿಂದು ಮಗುವನ್ನು ಮಲಗಿಸುವಾಗ ಹಾಡು ಹೇಳುವ ಜನ ಎಲ್ಲೂ ಇಲ್ಲ. ರಾಗಿ ಕಲ್ಲುಗಳ ಹಾಡುಗಳು ಮಾಯವಾಗಿವೆ. ಇದು ದುರಂತ ಎಂದರು.

ಸಂಗೀತ ಪ್ರೇಮಿ ರವಿಕುಮಾರ ಅಲ್ಲಂಶೆಟ್ಟಿ ಮಾತನಾಡಿ, ಬದಲಾದ ಕಾಲ ಘಟ್ಟದಲ್ಲಿ ನಮ್ಮ ನೋವು, ಜೀವನದ ಕ್ರಮ ಪದ್ಧತಿ ಬದಲಾಗಿದೆ. ಜನಪದ ಸಾಹಿತ್ಯ ಅಳಿವಿನ ಅಂಚಿನಲ್ಲಿದ್ದು, ಅದನ್ನು ಮುಂದುವರಿಸಿಕೊಂಡು ಹೋಗುವ ಜವಾಬ್ದಾರಿ ನಮ್ಮ ಮೇಲಿದೆ. ಜನಪದ ಸಾಹಿತ್ಯ ಅರಿತು ಅರಗಿಸಿಕೊಂಡಿದ್ದರಿಂದಲೇ ಬೇಂದ್ರೆ ಹೆಚ್ಚೆಚ್ಚು ಕೃತಿಗಳನ್ನು ಬರೆಯಲು ಸಹಕಾರಿಯಾಯಿತು. ಅವರ ಸಾಹಿತ್ಯದಲ್ಲಿ ಜನಪದದ ವಾಸನೆ ಕಾಣಸಿಗುತ್ತದೆ ಎಂದು ಹೇಳಿದರು. ಮಾಜಿ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಶರಣಬಸಪ್ಪ ಪಗಲಾಪುರ, ಡಿ.ಎಂ.ಎಸ್‌.ಎಚ್ ಅಧ್ಯಕ್ಷ ಶಿವರಾಜ ಕೋರೆ, ಬಹುಮುಖೀ ಸಾಹಿತಿ ನಾಗಪ್ಪ ಬೆಳಮಗಿ, ಭೀಮರಾಯ ಕನಗನಹಳ್ಳಿ, ನಗರಸಭೆಯ ಸದಸ್ಯೆ ಸುಧಾ ಅನೀಲ, ಮಹಾದೇವಯ್ಯ ಸ್ವಾಮಿ, ರಾಮಣ್ಣ ವರುಣಚಿ, ಉಮೇಶ ಪೋಚ್ಚಟ್ಟಿ, ವಿಶ್ವನಾಥ ಜಗದಳ್ಳಿ, ಲಕ್ಷ್ಮೀಕಾಂತ ಬಳಿಚಕ್ರ, ಸಿದ್ಧರಾಮ, ನಾಮದೇವ ಸಿಪ್ಪಿ, ಶಿವಲಿಂಗಪ್ಪ ಹೆಬ್ಟಾಳಕರ್‌, ಶ್ರೀಮಂತ ಅಟ್ಟೂರ್‌, ಮುದ್ದುರಂಗ ಮಾಸ್ಟರ್‌ ಹಾಜರಿದ್ದರು. ಎಸ್‌.ಎಸ್‌. ಟಿವಿಯ ಶಂಕರ ಕೋಡ್ಲಾ ಅಧ್ಯಕ್ಷತೆ ವಹಿಸಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.