ಅಫ‌ಜಲಪುರ: ಹನಿ ನೀರಿಗೂ ಬರ


Team Udayavani, Mar 17, 2019, 10:26 AM IST

gul-2.jpg

ಅಫಜಲಪುರ: ನೀರಿಲ್ಲದೆ ತಾಲೂಕಿನ ಕರೆ ಕಟ್ಟೆಗಳು ಬತ್ತಿ ಹೋಗಿವೆ. ನೀರಿಗಾಗಿ ಜನರು ಪರದಾಡುತ್ತಿದ್ದರೆ, ಜಾನುವಾರುಗಳು ಪರಿತಪಿಸುತ್ತಿವೆ. ಎಲ್ಲಿ ನೋಡಿದರೂ ಹಾಹಾಕಾರ ಶುರುವಾಗಿದೆ. 

ತಗ್ಗಿದ ಅಂತರ್ಜಲ: ಮಳೆ ಕೊರತೆಯಿಂದಾಗಿ ತಾಲೂಕಿನಾದ್ಯಂತ ಅಂತರ್ಜಲ ಮಟ್ಟ ಭಾರಿ ಪ್ರಮಾಣದಲ್ಲಿ ತಗ್ಗಿದೆ. ಅಂತರ್ಜಲ ಇಲ್ಲದ್ದರಿಂದ ಕೆರೆ, ಬಾವಿ, ಕೊಳವೆ ಬಾವಿಗಳ ನೀರು ಬತ್ತಿ ಹೋಗಿವೆ. ಅಲ್ಲದೇ ಹೊಸದಾಗಿ ಎಷ್ಟು ಕೊಳವೆ ಬಾವಿ ಕೊರೆದರೂ ಹನಿ ನೀರಿನ ಅಂಶವೂ ಕಾಣುತ್ತಿಲ್ಲ. ಎಲ್ಲಿ ನೋಡಿದರೂ ನೀರಿಗಾಗಿ ಹಾಹಾಕಾರ ಶುರುವಾಗಿದ್ದರಿಂದ ಜನ ಸಾಮಾನ್ಯರು ಬಿಂದಿಗೆ ನೀರು ತರಲು ಕಿಲೋ ಮಿಟರ್‌ಗಟ್ಟಲೇ ಅಲೆದಾಡುವಂತೆ ಆಗಿದೆ.

ಖಾಸಗಿಯವರ ಹೊಲ ಗದ್ದೆಗಳಲ್ಲಿ ಮಾಲೀಕರಿಂದ ನೂರು ಮಾತು ಆಡಿಸಿಕೊಂಡು ಕೊಡ ನೀರು ತರಬೇಕಾದ ಪರಿಸ್ಥಿತಿ ಇದೆ. ಅಲ್ಲದೇ ಅವರು ನೀರು ಕೊಟ್ಟರೆ ಪುಣ್ಯ ಎನ್ನುವಂತಾಗಿದೆ ಎಂದು ಜನ ನಿಟ್ಟುಸಿರು ಬಿಡುತ್ತಿದ್ದಾರೆ.

ನೀರಿಗಾಗಿ ಬಾಯಿ ತೆರೆಯುತ್ತಿರುವ ಜನ: ಕಳೆದ ವರ್ಷವೂ ತಾಲೂಕಿನಲ್ಲಿ ಬರ ಆವರಿಸಿತ್ತು. ಆದರೆ ಈ ವರ್ಷ ಕಳೆದ ವರ್ಷಕ್ಕಿಂತ ಭೀಕರ ಬರಗಾಲ ಆವರಿಸಿದೆ. ಹೀಗಾಗಿ ಕುಡಿಯುವ ನೀರಿಗಾಗಿ ಜನ-ಜಾನುವಾರುಗಳು ಬಾಯ್ತೆರೆದು ಮುಗಿಲ ಕಡೆ ಮುಖ ಮಾಡುವಂತಾಗಿದೆ. ಎಲ್ಲಿ ನೋಡಿದರೂ ಹನಿ ನೀರು ಸಿಗದಂತ ಪರಿಸ್ಥಿತಿ ನಿರ್ಮಾಣವಾಗಿದೆ.

ತಾಲೂಕಿನ ಕೆರೆಗಳ ಮಾಹಿತಿ: ಅಫಜಲಪುರ ತಾಲೂಕಿನಲ್ಲಿ ಒಟ್ಟು 12 ಕೆರೆಗಳಿವೆ. ಅದರಲ್ಲಿ ಐದು ದೊಡ್ಡ ಕೆರೆಗಳು, ಜಿನುಗು ಕೆರೆ, ಸಣ್ಣ ಕೆರೆಗಳ ಸಂಖ್ಯೆ ಒಟ್ಟು ಏಳು. ಈ ಪೈಕಿ ಗೊಬ್ಬೂರ (ಕೆ) ಗ್ರಾಮದಲ್ಲಿ ಅತಿ ದೊಡ್ಡ ಕೆರೆ ಇದೆ. ಇದರ ವಿಸ್ತೀರ್ಣ 415 ಎಕರೆ ಪ್ರದೇಶವಾಗಿದ್ದು, 84.40 ಕ್ಯೂಸೆಕ್‌ ನೀರು ಸಂಗ್ರಹವಾಗುತ್ತದೆ. 

ಬಡದಾಳ ಗ್ರಾಮದಲ್ಲಿ 9.9 ಎಕರೆ ವಿಸ್ತೀರ್ಣದ ಅತೀ ಸಣ್ಣ ಕೆರೆ ಇದ್ದು, 1.25 ಕ್ಯೂಸೆಕ್‌ ನೀರು ಸಂಗ್ರಹ ಸಾಮರ್ಥ್ಯ ಹೊಂದಿದೆ. ತಾಲೂಕಿನ 12 ಕೆರೆಗಳು 939.175 ಎಕರೆ ಪ್ರದೇಶದಲ್ಲಿ ಹರಡಿಕೊಂಡಿದ್ದು, ಈ ಕೆರೆಗಳಲ್ಲಿ ಒಟ್ಟು 274.5 ಕ್ಯೂಸೆಕ್ಸ್‌ ನೀರು ಸಂಗ್ರಹವಾಗುತ್ತದೆ. ಆದರೆ ಮಳೆ ಕೊರತೆಯಿಂದಾಗಿ ಅಫಜಲಪುರ ಪಟ್ಟಣದ ಕೆರೆ ಹೊರತುಪಡಿಸಿ ಉಳಿದ ಎಲ್ಲ ಕೆರೆಗಳು ಬತ್ತಿ ಹೋಗಿವೆ.

ಅಫಜಲಪುರ ಕೆರೆಯಲ್ಲಿ ನೀರು ನಿಲ್ಲಲು ಭೀಮಾ ಬ್ಯಾರೇಜ್‌ ಕಾರಣವಾಗಿದ್ದು ಆಗಾಗ ಬ್ಯಾರೇಜ್‌ ನೀರನ್ನು ಕಾಲುವೆ ಮೂಲಕ ನೀರು ತುಂಬಿಸಲಾಗುತ್ತದೆ. ಹೀಗಾಗಿ ಅಫಜಲಪುರ ಕೆರೆಯಲ್ಲಿ ನೀರಿದೆ. ಉಳಿದ ಕೆರೆಗಳು ಹನಿ ನೀರಿಲ್ಲದೆ ಸೊರಗಿ ಹೋಗಿವೆ. 

ಮೇವು ಬ್ಯಾಂಕ್‌ ಸ್ಥಾಪಿಸಿ: ಜನ-ಜಾನುವಾರುಗಳಿಗೆ ಕುಡಿಯಲು ನೀರಿಲ್ಲ, ದನಕರುಗಳಿಗೆ ಮೇವಿಲ್ಲ. ಹಣ ನೀಡಿದರೂ ಮೇವು ಸಿಗುತ್ತಿಲ್ಲ. ಆದ್ದರಿಂದ ಸರ್ಕಾರ ಮೇವು ಬ್ಯಾಂಕ್‌ ಸ್ಥಾಪಿಸಬೇಕು ಎಂದು ರೈತರು ಒತ್ತಾಯಿಸುತ್ತಿದ್ದಾರೆ. ಇಲ್ಲದಿದ್ದರೆ ಜಾನುವಾರುಗಳನ್ನು ಮಾರಿ ಗುಳೆ ಹೋಗುವ ಸಿದ್ಧತೆಯಲ್ಲಿದ್ದಾರೆ. ಸಂಬಂಧಪಟ್ಟವರು ಎಚ್ಚೆತ್ತು ದನಕರುಗಳಿಗೆ ಮೇವು, ನೀರು ಪೂರೈಸುವ ಕೆಲಸ ಮಾಡಬೇಕಾಗಿದೆ.

ಬರಗಾಲ ಇರುವುದರಿಂದ ಜನ ಗುಳೆ ಹೋಗಲು ಮುಂದಾ ಗುತ್ತಿದ್ದಾರೆ. ಗುಳೆ ತಪ್ಪಿಸಲು ನರೇಗಾ ಅಡಿಯಲ್ಲಿ ಕೂಲಿ ಕೆಲಸ ನೀಡಲಾಗುತ್ತಿದೆ. ಕೆರೆ ಕುಂಟೆಗಳ ಹೂಳೆತ್ತುವುದರಿಂದ ಜನರಿಗೆ ಕೆಲಸ ಸಿಗುತ್ತಿದೆ. ಅಲ್ಲದೆ ಕೆರೆಯಲ್ಲಿನ ಹೂಳು ತೆಗೆಯುವುದರಿಂದ ಮಳೆಗಾಲದಲ್ಲಿ ನೀರು ನಿಂತು ಅಂತರ್ಜಲ ಹೆಚ್ಚಳವಾಗಲಿದೆ. 
 ಆನಂದಕುಮಾರ, ಪ್ರಭಾರಿ ಎಇ, ಸಣ್ಣ ನೀರಾವರಿ ಇಲಾಖೆ

 ಮಲ್ಲಿಕಾರ್ಜುನ ಹಿರೇಮಠ

ಟಾಪ್ ನ್ಯೂಸ್

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.