ಅಫಜಲಪುರ: ಸರ್ಕಾರಿ ಕಚೇರಿಗಳಿಗೆ ಖಾಸಗಿ ಕಟ್ಟಡಗಳೇ ಗತಿ


Team Udayavani, Jun 25, 2018, 2:57 PM IST

kalaburgi-2.jpg

„ಮಲ್ಲಿಕಾರ್ಜುನ ಹಿರೇಮಠ
ಅಫಜಲಪುರ: ಸರ್ಕಾರ ಕೋಟ್ಯಂತರ ರೂ. ಅನುದಾನ ಖರ್ಚು ಮಾಡಿ ಸರ್ಕಾರಿ ಕಚೇರಿ, ಕಟ್ಟಡಗಳನ್ನು ಕಟ್ಟಿಸುತ್ತದೆ. ಆದರೆ ಕೆಲವೊಂದು ಇಲಾಖೆಗಳ ಕಚೇರಿಗಳಿಗೆ ಖಾಸಗಿ ಕಟ್ಟಡಗಳೇ ಗತಿಯಾಗಿದ್ದು ದುಬಾರಿ ಬಾಡಿಗೆ ನೀಡುವಂತಾಗಿದೆ.

ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ರೇಷ್ಮೆ ಇಲಾಖೆ, ಕೈಗಾರಿಕಾ ಇಲಾಖೆ, ಅಬಕಾರಿ, ಶಿಶು ಅಭಿವೃದ್ಧಿ ಇಲಾಖೆ ಸೇರಿದಂತೆ ಅನೇಕ ಇಲಾಖೆಗಳ ಕಚೇರಿಗಳು ಖಾಸಗಿ ಕಟ್ಟಡಗಳಲ್ಲಿ ದುಬಾರಿ ಬಾಡಿಗೆಯಲ್ಲಿ ನಡೆಯುತ್ತಿವೆ.

ಕಚೇರಿಗಳ ಆರಂಭದಿಂದ ಇಂದಿನವರೆಗೂ ಬಾಡಿಗೆ ಕಟ್ಟಡಗಳೇ ಗತಿ: ಪಟ್ಟಣದಲ್ಲಿ ಈ ಕಚೇರಿಗಳು ಆರಂಭವಾದಾಗಿನಿಂದ ಬಾಡಿಗೆ ಕಟ್ಟಡಗಳಲ್ಲಿಯೇ ಕಾರ್ಯಾರಂಭ ಮಾಡುತ್ತಿವೆ. ಸರ್ಕಾರದ ನಿವೇಶನಗಳಲ್ಲಿ ಆಗಲಿ, ಖಾಸಗಿ ನಿವೇಶನ ಖರೀದಿಸಿಯಾಗಲಿ ಸ್ವಂತ ಕಟ್ಟಡ ನಿರ್ಮಿಸಿಕೊಂಡಿಲ್ಲ. ದುಬಾರಿ ಬಾಡಿಗೆ ನೀಡಿ ಕಚೇರಿಗಳನ್ನು ನಡೆಸಲಾಗುತ್ತಿದೆ. ಅಲ್ಲದೆ ಕಚೇರಿಗಳು ಯಾವ ಖಾಸಗಿ ಕಟ್ಟಡದಲ್ಲಿಯೂ ಶಾಶ್ವತವಾಗಿ ಉಳಿಯುವುದಿಲ್ಲ.
ಹೀಗಾಗಿ ಜನಸಾಮಾನ್ಯರು ತಮ್ಮ ಕೆಲಸಗಳಿಗಾಗಿ ಕಚೇರಿಗಳಿಗೆ ಬರಬೇಕಾದರೆ ಕಟ್ಟಗಳಿಂದ ಕಟ್ಟಡಗಳಿಗೆ ಅಲೆದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಕಚೇರಿಗಳ ಸುತ್ತ ನೈರ್ಮಲ್ಯ ಸಮಸ್ಯೆ: ಖಾಸಗಿ ಕಟ್ಟಡಗಳಲ್ಲಿ ಸರ್ಕಾರಿ ಕಚೇರಿಗಳನ್ನು ಆರಂಭಿಸಿದರೂ ಪರವಾಗಿಲ್ಲ. ಕೆಲವೊಂದು ಕಚೇರಿಗಳಿಗೆ ಹೋಗಲು ಸರಿಯಾದ ರಸ್ತೆ ವ್ಯವಸ್ಥೆಗಳಿಲ್ಲ, ಕಚೇರಿ ಇರುವ ಕಟ್ಟಡಗಳ ಅಕ್ಕ ಪಕ್ಕದಲ್ಲಿ ಚರಂಡಿ ನೀರು ನಿಲ್ಲುತ್ತದೆ, ಗಿಡಗಂಟಿಗಳು ಬೆಳೆದು ಸಾಂಕ್ರಾಂಮಿಕ ರೋಗಗಳ ತಾಣಗಳಾಗಿ ಮಾರ್ಪಟ್ಟಿವೆ.

ಜನಪ್ರತಿನಿಧಿಗಳು ಮೌನ: ಹೀಗೆ ಅನೇಕ ಸರ್ಕಾರಿ ಕಚೇರಿಗಳು ಖಾಸಗಿ ಕಟ್ಟಡಗಳಲ್ಲಿ ನಡೆಯುತ್ತಿದ್ದರೂ ಪುರಸಭೆಯಾಗಲಿ, ಸಂಬಂಧಪಟ್ಟ ಇಲಾಖೆಗಳಾಗಲಿ, ಶಾಸಕರಾಗಲಿ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಸ್ವಂತ ಕಟ್ಟಡಗಳನ್ನು ನಿರ್ಮಿಸಿ ದುಬಾರಿ ಬಾಡಿಗೆ ನೀಡುವುದನ್ನು ತಪ್ಪಿಸಬೇಕಾಗಿದೆ. ದುಬಾರಿ ಬಾಡಿಗೆ ನೀಡುವ ಹಣದಲ್ಲಿ ಹೊಸ ಸ್ವಂತ ಕಚೇರಿಯೇ ನಿರ್ಮಾಣವಾಗಲಿದೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟವರು ಕ್ರಮ ಕೈಗೊಳ್ಳಬೇಕಾದ ಅವಶ್ಯಕತೆ ಇದೆ.

ದುಬಾರಿ ಬಾಡಿಗೆ: ಪಟ್ಟಣದಲ್ಲಿರುವ ಸರ್ಕಾರಿ ಕಚೇರಿಗಳಿಗೆ ಖಾಸಗಿ ಕಟ್ಟಡಗಳಲ್ಲಿ ದುಬಾರಿ ಬಾಡಿಗೆ ನೀಡಲಾಗುತ್ತಿದೆ. ಸಿಡಿಪಿಒ ಇಲಾಖೆ ಕಚೇರಿಗೆ ಪ್ರತಿ ತಿಂಗಳು 20 ಸಾವಿರ ರೂ. ಬಾಡಿಗೆ ಪಾವತಿಸಲಾಗುತ್ತಿದೆ, ಬಿಸಿಎಂ ಇಲಾಖೆ ಕಚೇರಿಗೆ 12 ಸಾವಿರ ರೂ., ಸಮಾಜ ಕಲ್ಯಾಣ ಇಲಾಖೆ ಕಚೇರಿಗೆ 5400 ರೂ. ಸೇರಿದಂತೆ ಇತರ ಬಾಡಿಗೆ ಕಟ್ಟಡದಲ್ಲಿರುವ ಇಲಾಖೆಗಳಿಗೂ ದುಬಾರಿ ಬಾಡಿಗೆ ನೀಡಲಾಗುತ್ತದೆ.

ಕೆಲವೊಂದು ಇಲಾಖೆ ಕಚೇರಿಗಳು ಜನರಿಗೆ ಗೊತ್ತೇ ಇಲ್ಲ: ಬಾಡಿಗೆ ಕಟ್ಟಡಗಳಲ್ಲಿದ್ದರೂ ಕೂಡ ಇಲಾಖೆಗಳ ಕಚೇರಿಗಳು ಜನರಿಗೆ ಗೊತ್ತಾಗುವ ಅಥವಾ ಜನನಿಬೀಡ ಸ್ಥಳಗಳಲ್ಲಿ ಇರಬೇಕು. ಆದರೆ ಕೆಲವೊಂದು ಇಲಾಖೆಗಳ ಕಚೇರಿಗಳನ್ನು ಹುಡುಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಗಲ್ಲಿಗಳಲ್ಲಿ ಅಲೆದಾಡಿ ಹುಡುಕಾಡಿದರು ಇಲಾಖೆಗಳ ಕಚೇರಿಗಳು ಕಾಣುವುದಿಲ್ಲ. ಹೀಗಾಗಿ ಪಟ್ಟಣದಲ್ಲಿರುವ ಕೆಲವೊಂದು ಇಲಾಖೆಗಳ ಕಚೇರಿಗಳು ಕಾಣುವುದೇ ಇಲ್ಲ. 

ಸಮಾಜ ಕಲ್ಯಾಣ ಇಲಾಖೆ, ಬಿಸಿಎಂ, ರೇಷ್ಮೆ ಇಲಾಖೆ ಸೇರಿದಂತೆ ಅನೇಕ ಸರ್ಕಾರಿ ಕಚೇರಿಗಳು ಖಾಸಗಿ ಕಟ್ಟಡಗಳಲ್ಲಿ ನಡೆಯುತ್ತಿವೆ. ಅವು ಕೂಡ ಒಂದರ ಮೇಲೊಂದರಂತೆ ಖಾಸಗಿ ಕಟ್ಟಡಗಳು ಬದಲಾವಣೆಯಾಗುತ್ತವೆ ಇದರಿಂದ ನಮಗೆ ಭಾರಿ ಸಮಸ್ಯೆ ಆಗುತ್ತಿದೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸರ್ಕಾರಿ ನಿವೇಶನ ಇಲ್ಲದ್ದರಿಂದ ಖಾಸಗಿ ಕಟ್ಟಡಗಳಲ್ಲಿ ಕೆಲವೊಂದು ಇಲಾಖೆಗಳು ಬಾಡಿಗೆ ಇವೆ. ಹಿಂದಿನ ಶಾಸಕರು ಕಲಬುರಗಿ ರಸ್ತೆಗೆ ನೀರಾವರಿ ಇಲಾಖೆಗೆ ಸೇರಿದ ನಿವೇಶನ ತೋರಿಸಿದ್ದಾರೆ. ಅದು ಸರ್ಕಾರದ ಮಟ್ಟದಲ್ಲಿದ್ದು, ಪರವಾನಗಿ ದೊರೆತ ಬಳಿಕ ಇಲಾಖೆಗಳ ಕಟ್ಟಡ ಕಾಮಗಾರಿ ಆರಂಭವಾಗಲಿದೆ.
ಇಸ್ಮಾಯಿಲ್‌ ಮುಲ್ಕಿಸಿಪಾಯಿ, ತಹಶೀಲ್ದಾರ್‌

ಪಟ್ಟಣದಲ್ಲಿರುವ ಸರ್ಕಾರಿ ನಿವೇಶನಗಳನ್ನು ಗುರುತಿಸಿ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚಿಸಿ
ಸರ್ಕಾರಿ ಕಚೇರಿ ಕಟ್ಟಡಗಳನ್ನು ನಿರ್ಮಿಸಲಾಗುತ್ತದೆ. 
ಎಂ.ವೈ. ಪಾಟೀಲ, ಶಾಸಕ

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.