ಮಾಸಿಕ ವೇತನದಂತೆ ಕೃಷಿ ಆದಾಯ ಸಾಧ್ಯ

ವ್ಯಕ್ತಿಯ ಸಂಸ್ಕಾರ ಕುಟುಂಬದಿಂದ ಬಂದರೂ ಸ್ವಂತ ವ್ಯಕ್ತಿತ್ವವೇ ಬೇರೆಯಾಗುತ್ತದೆ.

Team Udayavani, Dec 21, 2021, 6:04 PM IST

ಮಾಸಿಕ ವೇತನದಂತೆ ಕೃಷಿ ಆದಾಯ ಸಾಧ್ಯ

ಕಲಬುರಗಿ: ಭೂಮಿಯನ್ನು ನಂಬಿ ಕೃಷಿ ಮಾಡಿದರೆ ಮಾಸಿಕ ವೇತನ ಬರುವಂತೆ ರೈತರು ಕೂಡ ಆದಾಯ ಗಳಿಸಲು ಸಾಧ್ಯವಿದ್ದು, ಅದಕ್ಕಾಗಿ ರೈತರು ಕಾಲಕ್ಕೆ ತಕ್ಕಂತೆ ಬೆಳೆಗಳನ್ನು ಬೆಳೆಯುವುದನ್ನು ರೂಢಿಸಿಕೊಳ್ಳಬೇಕೆಂದು ಕೃಷಿ ಸಾಧಕಿ ಕವಿತಾ ಮಿಶ್ರಾ ಸಲಹೆ ನೀಡಿದರು.

ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಕೊತ್ತಲ ಬಸವೇಶ್ವರ ಭಾರತೀಯ ವಿದ್ಯಾ ಸಂಸ್ಥೆ ಮತ್ತು ಭಾರತ ವಿಕಾಸ ಸಂಗಮ ಸಹಯೋಗದಲ್ಲಿ ನಡೆದ “ಸೃಜನ ಶಕ್ತಿ ಸಂಗಮ-8’ರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕೃಷಿಕ ಕೋಟಿಗಳ ಲೆಕ್ಕದಲ್ಲಿ ಮಾತನಾಡಲು ಸಾಧ್ಯವಿದೆ. ವರ್ಷಕ್ಕೆ ಒಂದೇ ಬೆಳೆ ಬೆಳೆಯದೇ ವೈವಿಧ್ಯಮಯ ಕೃಷಿ ಅಳವಡಿಸಿಕೊಳ್ಳಬೇಕು. ಆಯಾ ಕಾಲಗಳಿಗೆ ಅನುಗುಣವಾಗಿ ಬೆಳೆಯುವುದರಿಂದ ನಿತಂತರ ಆದಾಯ ಪಡೆಯಲು ಸಾಧ್ಯ. ಕೃಷಿ ಲಾಭದಾಯಕವಲ್ಲ ಎಂಬುವುದು ಸರಿಯಲ್ಲ. ನಮ್ಮ ಹೊಲದ ಕೊಳವೆ ಬಾವಿಯಲ್ಲಿ 1.5 ಇಂಚು ನೀರು ದೊರಕಿದರೂ, ಅದರ ಸದ್ಬಳಕೆ ಮಾಡಿಕೊಂಡು ಲಾಭ ಪಡೆದುಕೊಂಡಿದ್ದೇನೆ. ಸಾವಯವ ಕೃಷಿ, ದೇಸಿ ಗೋಸಾಕಣೆ ಮತ್ತು ಕುರಿ ಸಾಕಣೆ ಸೇರಿ ಸಮಗ್ರ ಕೃಷಿ ಮಾಡಿದರೆ ರೈತ ಜೀವನದಲ್ಲಿ ಆರ್ಥಿಕ ಸ್ಥಿತಿ ಸುಧಾರಿಸುತ್ತದೆ ಎಂದರು.

ಕೃಷಿ ವಿಜ್ಞಾನಿ ಎಸ್‌.ಎ.ಪಾಟೀಲ ಮಾತನಾಡಿ, ಕೃಷಿಯೇ ಎಲ್ಲ ಸಂಸ್ಕೃತಿಗಳ ತಾಯಿ. ವೈದ್ಯ, ಇಂಜಿನಿಯರ್‌, ವಿಜ್ಞಾನ ಸೇರಿದಂತೆ ಹಲವು ಕ್ಷೇತ್ರಗಳಿಗಿಂತ ಕೃಷಿ ಕ್ಷೇತ್ರ ಮೇಲಾಗಿದೆ. ಕೃಷಿಯಲ್ಲೂ ಹತ್ತು-ಹಲವು ಅವಕಾಶಗಳಿವೆ. ಅವುಗಳನ್ನು ಅರಿತು ಆ ನಿಟ್ಟಿನಲ್ಲಿ ಸಾಗಬೇಕೆಂದು ಕರೆ ನೀಡಿದರು.

ಭಾರತ ವಿಕಾಸ ಸಂಗಮ ಸಂಯೋಜಕಿ ಅಸ್ತಾ ಭಾರದ್ವಾಜ್‌ ಮಾತನಾಡಿ, ಯುವಕರು ಸ್ವಯಂ ಮಾದರಿಗಳನ್ನುಸೃಷ್ಟಿಸಬೇಕು. ಯುವಕರು ಬಳಕೆಗೆ ಯೋಗ್ಯವಲ್ಲ (ಯೂಸ್‌ಲೇಸ್‌) ಎನ್ನಲಾಗುತ್ತದೆ. ಆದರೆ ಅವರನ್ನು ಬಳಕೆ ಮಾಡುವುದೇ ಕಡಿಮೆ (ವಿ ಯೂಸ್ಡ್ ಲೇಸ್‌) ಮಾಡಲಾಗುತ್ತಿದೆ. ಆದ್ದರಿಂದ ಅವರಿಗೆ ಹೆಚ್ಚಿನ ಅವಕಾಶ ನೀಡಿ ಹೊಸ ಮಾದರಿಗಳ ಸೃಷ್ಟಿಗೆ ಪ್ರೇರಣೆ ನೀಡಬೇಕಿದೆ ಎಂದರು.

ವ್ಯಕ್ತಿಯ ಸಂಸ್ಕಾರ ಕುಟುಂಬದಿಂದ ಬಂದರೂ ಸ್ವಂತ ವ್ಯಕ್ತಿತ್ವವೇ ಬೇರೆಯಾಗುತ್ತದೆ. ಆದ್ದರಿಂದ ನಾವು ಬದಲಾಗಬೇಕು. ಯಾರನ್ನೂ ಅಂಧಾನುಕರಣೆ ಮಾಡದೆ ಧನಾತ್ಮಕ ಅಲೋಚನೆಯೊಂದಿಗೆ ಜೀವನ ಸಾಗಿಸಬೇಕು. ಮತ್ತೂಬ್ಬರ ಅಭಿಪ್ರಾಯದ ಬಗ್ಗೆ ಯೋಚಿಸುವುದೇ ಅತಿದೊಡ್ಡ ರೋಗ. ಆದ್ದರಿಂದ ವಿಭಿನ್ನ ಆಲೋಚನೆಯಿಂದ ಮಾತ್ರ ಯಶಸ್ವಿ ಸಾಧ್ಯ. ಧನಾತ್ಮಕ ಚಿಂತನೆಗಳು ಜೀವನಕ್ಕೆ ಪ್ರೇರಣೆ ನೀಡುತ್ತವೆ ಎಂದು ಹೇಳಿದರು.

ಭಾರತ ವಿಕಾಸ ಸಂಗಮ ಸಂಸ್ಥಾಪಕರಾದ ಖ್ಯಾತ ಚಿಂತಕ ಕೆ.ಎನ್‌. ಗೋವಿಂದಾಚಾರ್ಯ ಮಾತನಾಡಿದರು. ಗುವಿವಿ ಕುಲಪತಿ ಪ್ರೊ| ದಯಾನಂದ ಅಗಸರ, ಪ್ರಮುಖರಾದ ಮಾಧವರೆಡ್ಡಿ ಹೈದರಾಬಾದ್‌, ವೇಣುಗೋಪಾಲ ರೆಡ್ಡಿ, ಅಶೋಕ ಟಂಗಸಾಲೆ, ಕೆ.ಜಿ.ಮುರಳಿ, ಚಂದ್ರಶೇಖರ ಧವಳಗಿ, ಸುರೇಶ ಅಗ್ನಿಹೋತ್ರಿ ಇದ್ದರು.

ಅಭಿವೃದ್ದಿ ಹೆಸರಲ್ಲಿ ಪ್ರಕೃತಿಗೆ ಹಾನಿಯನ್ನುಂಟು ಮಾಡುವ ಕ್ರಮಗಳ ತಡೆಗೆ ಗಂಭೀರವಾಗಿ ಆಲೋಚನೆ ಮಾಡುವುದು ಅಗತ್ಯವಿದೆ. ಇದಕ್ಕಾಗಿ ನಮಗೆ ತಕ್ಷಣಕ್ಕೆ “ಯೂ-ಟರ್ನ್’ ತೆಗೆದುಕೊಳ್ಳಲು ಆಗದಿದ್ದರೂ, “ಲಾಂಗ್‌-ಟರ್ನ್’ ತೆಗೆದುಕೊಳ್ಳುವ ಅನಿವಾರ್ಯತೆ ಇದೆ.
ಕೆ.ಎನ್‌.ಗೋವಿಂದಾಚಾರ್ಯ, ಸಂಸ್ಥಾಪಕ, ಭಾರತ ವಿಕಾಸ ಸಂಗಮ

ಜೀವನದಲ್ಲಿ ಏನನ್ನು ಮಾಡಬೇಕು ಎನ್ನುವುದಕ್ಕಿಂತ ಏನನ್ನು ಮಾಡಬಾರದು ಎಂಬುದು ಅರಿಯಬೇಕು. ಮಹಾಭಾರತ ಏನು ಮಾಡಬಾರದು, ರಾಮಾಯಣ ಏನು ಮಾಡಬೇಕು ಎಂಬ ಸಂದೇಶ ನೀಡುತ್ತದೆ. ಆದ್ದರಿಂದ ಎಲ್ಲವನ್ನು ಓದಿ, ತಿಳಿದು ನಮ್ಮ ಸ್ವತಃ ಆಲೋಚನೆಗೆ ಹೊಂದಿಸಿಕೊಳ್ಳಬೇಕು.
ಅಸ್ತಾ ಭಾರದ್ವಾಜ್‌, ಸಂಯೋಜಕಿ ಭಾರತ ವಿಕಾಸ ಸಂಗಮ

ಟಾಪ್ ನ್ಯೂಸ್

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.