ಕಲಬುರಗಿಗೆ ಕೃಷಿ ಜಾಗೃತ ದಳ ವಿಭಾಗೀಯ ಕಚೇರಿ

ಕೃಷಿ ತರಬೇತಿ ಕೇಂದ್ರದಲ್ಲಿ ಲಭ್ಯವಿರುವ ಕಟ್ಟಡದಲ್ಲಿ ಕಚೇರಿಗಳು ಕಾರ್ಯಾರಂಭವಾಗಲಿವೆ.

Team Udayavani, Jul 5, 2022, 5:44 PM IST

ಕಲಬುರಗಿಗೆ ಕೃಷಿ ಜಾಗೃತ ದಳ ವಿಭಾಗೀಯ ಕಚೇರಿ

ಕಲಬುರಗಿ: ರಾಜ್ಯದಲ್ಲಿ ಬೆಂಗಳೂರು ಹಾಗೂ ಬೆಳಗಾವಿಯಲ್ಲಿ ಮಾತ್ರವಿದ್ದ ಕೃಷಿ ಇಲಾಖೆಯ ಜಾಗೃತ ದಳದ (ಕೋಶ) ವಿಭಾಗೀಯ ಕಚೇರಿಗಳ ಜತೆಗೆ ರಾಜ್ಯ ಸರ್ಕಾರ ಮತ್ತೆ ಎರಡು ವಿಭಾಗೀಯ ಕಚೇರಿಗಳನ್ನು ಮಂಜೂರಾತಿಗೊಳಿಸಿ ಆದೇಶ ಹೊರಡಿಸಿದೆ.

ಕೃಷಿ ಇಲಾಖೆ ಆಯುಕ್ತರು ಜು.2ರಂದು ಕಲಬುರಗಿ-ಮೈಸೂರು ಕೃಷಿ ಜಾಗೃತ ದಳದ ವಿಭಾಗೀಯ ಕಚೇರಿ ಹಾಗೂ ಹುದ್ದೆಗಳನ್ನು ಮಂಜೂರುಗೊಳಿಸಿ ಅಧಿಸೂಚನೆ ಹೊರಡಿಸಿದ್ದು, ಜು.5ರಂದು ಮೈಸೂರು ವಿಭಾಗೀಯ ಕಚೇರಿಯನ್ನು ಉದ್ಘಾಟನೆಗೊಳಿಸಿ ಕಾರ್ಯಾರಂಭಗೊಳಿಸಲಾಗುತ್ತಿದೆ. ಜಂಟಿ ಕೃಷಿ ನಿರ್ದೇಶಕರ ನೇತೃತ್ವದ ಸಹಾಯಕ ಕೃಷಿ ನಿರ್ದೇಶಕರು ಹಾಗೂ ಇತರ ಅಧಿಕಾರಿಗಳನ್ನು ಒಳಗೊಂಡ ಜಂಟಿ ಕೃಷಿ ನಿರ್ದೇಶಕರು, ಜಾಗೃತ ದಳದ ವಿಭಾಗೀಯ ಕಚೇರಿ ಅಸ್ತಿತ್ವಕ್ಕೆ ಬರುವ ಮುಖಾಂತರ ವಿಭಾಗೀಯ ಕಚೇರಿಯ ಬಹು ದಿನಗಳ ಬೇಡಿಕೆ ಸಾಕಾರಗೊಳ್ಳುವಂತಾಗಿದೆ.

ಬೆಂಗಳೂರು ವಿಭಾಗದಲ್ಲಿದ್ದ ಹಲವು ಜಿಲ್ಲೆಗಳನ್ನು ಮೈಸೂರು ವಿಭಾಗಕ್ಕೆ ಹಾಗೂ ಬೆಳಗಾವಿ ವಿಭಾಗದಲ್ಲಿದ್ದ ಜಿಲ್ಲೆಗಳನ್ನು ಬೇರ್ಪಡಿಸಿ ಕಲಬುರಗಿ ವಿಭಾಗಕ್ಕೆ ವರ್ಗಾಯಿಸಲಾಗಿದೆ. ಬೆಳಗಾವಿ ಕಚೇರಿ ಮಂಗಳವಾರ ಕಾರ್ಯಾರಂಭವಾಗುತ್ತಿದ್ದರೆ, ವಾರದೊಳಗೆ ಕಲಬುರಗಿ ವಿಭಾಗೀಯ ಕಚೇರಿ ಉದ್ಘಾಟನೆಗೆ ಸಿದ್ಧತೆಗಳು ನಡೆದಿವೆ. ಮೈಸೂರಿನ ವಿಭಾಗೀಯ ಕಚೇರಿ ನಾಗನಹಳ್ಳಿಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಹಾಗೂ ಕಲಬುರಗಿ ವಿಭಾಗೀಯ ಕಚೇರಿ ಕೋಟನೂರ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಲಭ್ಯವಿರುವ ಕಟ್ಟಡದಲ್ಲಿ ಕಚೇರಿಗಳು ಕಾರ್ಯಾರಂಭವಾಗಲಿವೆ.

ಕೆಲಸ ಏನು?: ರೈತರಿಗೆ ನಕಲಿ ಬೀಜ, ಗೊಬ್ಬರ ವಿತರಣೆಯಲ್ಲಿ ಆಗುತ್ತಿರುವ ಮೋಸ ಹಾಗೂ ಹೆಚ್ಚಿನ ದರದಲ್ಲಿ ಕೃಷಿ ಮಾರಾಟ ಸೇರಿದಂತೆ ಇತರ ಅಕ್ರಮಗಳ ತಡೆಗಟ್ಟುವ ನಿಟ್ಟಿನಲ್ಲಿ ಕೃಷಿ ಜಾಗೃತ ದಳದ ವಿಭಾಗೀಯ ಕಚೇರಿ ಪ್ರಮುಖವಾಗಿ ಕಾರ್ಯನಿರ್ವಹಿಸಲಿದೆ. ಈ ಮುಂಚೆ ಜಿಲ್ಲಾ ಮಟ್ಟದಲ್ಲಿ ಜಾಗೃತ ದಳವಿದ್ದು, ಆದರೆ ಸೂಕ್ತ ಅಧಿಕಾರಿಗಳು ಹಾಗೂ ಸಿಬ್ಬಂದಿ ಇಲ್ಲದಿರುವುದಕ್ಕೆ ಹೆಸರಿಗೆ ಮಾತ್ರ ಎನ್ನುವಂತಾಗಿದೆ. ಆದರೆ ಅಸ್ತಿತ್ವಕ್ಕೆ ಬರುವ ಜಂಟಿ ಕೃಷಿ ನಿರ್ದೇಶಕರ ಜಾಗೃತ ದಳ ಸೂಕ್ತ ಅಧಿಕಾರಿಗಳು ಮತ್ತು ಸಿಬ್ಬಂದಿ ಒಳಗೊಂಡಿದೆ.

ಶೀಘ್ರ ವರದಿಗೆ ಸಹಕಾರಿ: ಜಿಲ್ಲಾ ಜಾಗೃತ ದಳಗಳು ದಾಳಿ ನಡೆಸುತ್ತಿವೆ. ಆದರೂ ಸಮರ್ಪಕ ಮಾಹಿತಿ ಕಲೆ ಹಾಕುವಲ್ಲಿ ಸೂಕ್ತ ವರದಿ ರೂಪಿಸುವಲ್ಲಿ ಹೆಚ್ಚು ಕ್ರಿಯಾಶೀಲತೆ ಅಳವಡಿಸಿಕೊಳ್ಳದ ಹಿನ್ನೆಲೆಯಲ್ಲಿ ಹೆಸರಿಗೆ ಮಾತ್ರ ದಾಳಿ ಎನ್ನುವಂತಾಗಿರುವುದರಿಂದ ಈ ವಿಭಾಗೀಯ ಕಚೇರಿ ಇಂತಹ ದಾಳಿಗಳ ವರದಿ ಪರಿಣಾಮಕಾರಿ ರೂಪಿಸುವಲ್ಲಿ ಹಾಗೂ ಬೇಗನೆ ವರದಿ ರೂಪಿಸಲು ವಿಭಾಗೀಯ ಕಚೇರಿಗಳ ಅನುಕೂಲವಾಗಲಿದೆ.

ಯಾವ್ಯಾವ ಹುದ್ದೆಗಳಿಗೆ ಮಂಜೂರಾತಿ? ಜಾಗೃತ ದಳದ ವಿಭಾಗೀಯ ಕಚೇರಿಗೆ ಜಂಟಿ ಕೃಷಿ ನಿರ್ದೇಶಕರು 1, ಉಪಕೃಷಿ ನಿರ್ದೇಶಕರು 1, ಸಹಾಯಕ ಕೃಷಿ ನಿರ್ದೇಶಕರು 1, ಕೃಷಿ ಅಧಿಕಾರಿ 1, ಅಧೀಕ್ಷರು 1, ಪ್ರಥಮ ದರ್ಜೆ ಸಹಾಯಕರು 1, ಟೈಪಿಸ್ಟ್‌ 1, ಡಿ ದರ್ಜೆ ನೌಕರರು 2 ಹಾಗೂ ವಾಹನ ಚಾಲಕರ 1 ಹುದ್ದೆಗಳು ಮಂಜೂರಾತಿಗೊಂಡಿವೆ.

ಜು.5ರಂದು ಮೈಸೂರು ಕೃಷಿ ಜಾಗೃತಿ ದಳದ ವಿಭಾಗೀಯ ಕಚೇರಿ ಉದ್ಘಾಟನೆ ನಡೆಯುತ್ತಿದ್ದು, ನಂತರ ಕಚೇರಿ ಕಾರ್ಯಾರಂಭಗೊಳ್ಳಲಿದೆ. ಕಲಬುರಗಿ ಕಚೇರಿ ಉದ್ಘಾಟನೆಗೂ ದಿನಾಂಕ ನಿಗದಿಯಾಗಲಿದೆ. ಒಟ್ಟಾರೆ ಬಹು ದಿನಗಳ ವಿಭಾಗೀಯ ಜಾಗೃತ ದಳ (ಕೋಶ) ಈಗ ಅಸ್ತಿತ್ವಕ್ಕೆ ಬಂದಂತಾಗಿದೆ.
ಬಿ.ಶರತ್‌, ಕೃಷಿ ಆಯುಕ್ತರು

*ಹಣಮಂತರಾವ ಭೈರಾಮಡಗಿ

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.