ಅನಧಿಕೃತ ಧಾರ್ಮಿಕ ಕಟ್ಟಡ ತೆರವಿಗೆ ಕ್ರಮ

ಕೋರ್ಟ್‌ ಆದೇಶ ಪಾಲನೆಗೆ ಸಹಕರಿಸಿಕಾನೂನಿಗೆ ಎಲ್ಲರೂ ತಲೆಬಾಗಲು ಸಲಹೆ

Team Udayavani, Jan 17, 2020, 10:42 AM IST

17-January-2

ಆಳಂದ: ಸಾರ್ವಜನಿಕ ಸ್ಥಳ, ಉದ್ಯಾನವನ ಹಾಗೂ ರಸ್ತೆಗಳಲ್ಲಿ ಅನ ಧಿಕೃತವಾಗಿ ನಿರ್ಮಿಸಲಾದ ಧಾರ್ಮಿಕ ಕಟ್ಟಡ ತೆರುವುಗೊಳಿಸುವಂತೆ ಸರ್ವೋಚ್ಚ ನ್ಯಾಯಾಲಯ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ಕುರಿತು ಕ್ರಮಕೈಗೊಳ್ಳಲು ಕಟ್ಟು ನಿಟ್ಟಿನ ನಿರ್ದೇಶನ ನೀಡಿದೆ, ಇದಕ್ಕೆ ನಾಗರಿಕರು ಸಹಕಾರ ನೀಡಬೇಕು ಎಂದು ತಹಶೀಲ್ದಾರ್‌ ದಯಾನಂದ ಪಾಟೀಲ ಹೇಳಿದರು.

ತಾಲೂಕು ಪಂಚಾಯತ ಕಚೇರಿಯಲ್ಲಿ ತಾಲೂಕು ಆಡಳಿತ ಕರೆದ ವಿವಿಧ ಸಮುದಾಯ, ಸಂಘ, ಸಂಸ್ಥೆಗಳ ಮುಖಂಡರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈಗಾಗಲೇ ಸಾರ್ವಜನಿಕ ಸ್ಥಳ, ಉದ್ಯಾನವನ ಹಾಗೂ ರಸ್ತೆಗಳಲ್ಲಿ ಅನಧಿಕೃತ ಕಟ್ಟಡಗಳು ಇರುವ ಕುರಿತು ಗಮನಕ್ಕೆ ಬಂದರೆ ಕಾರ್ಯಾಚರಣೆ ಮೊದಲೆ ಅವುಗಳನ್ನು ಸ್ವಯಂ ಪ್ರೇರಿತವಾಗಿ ತಾವೇ ತೆರುವುಗೊಳಿಸಿಕೊಳ್ಳಿ. ಇಲ್ಲವಾದಲ್ಲಿ ಇಂಥ ಕಟ್ಟಡಗಳನ್ನು ಗುರುತಿಸುವ ಸಲುವಾಗಿ ಸರ್ವೇ ಕಾರ್ಯ ನಡೆಯುತ್ತಿದೆ. ಸರ್ವೇ ಬಳಿಕ ಕಟ್ಟಡಗಳ ತೆರವಿಗಾಗಿ ನೋಟಿಸ್‌ ಮೂಲಕ ಕಾಲಾವಕಾಶ ನೀಡಲಾಗುತ್ತದೆ. ಇದಾದ ಬಳಿಕವೂ ಯಾವುದೇ ಸ್ಪಂದನೆ ಸಿಗದೆ ಇದ್ದಲ್ಲಿ ಆಡಳಿತವೇ ಮುಂದಾಗಿ ಅಕ್ರಮ ಕಟ್ಟಡ ತೆರವು ಕಾರ್ಯಾಚರಣೆ ನಡೆಸುತ್ತದೆ. ಕಾನೂನಿನ ಹಾಗೂ ಸುಪ್ರೀಂ ಕೋರ್ಟ್‌ ಎದುರು ಯಾರೂ ದೊಡ್ಡವರಲ್ಲ. ಎಲ್ಲರು ತಲೆಬಾಗಿ ನಡೆದುಕೊಳ್ಳಬೇಕು ಎಂದರು.

ಮುಖಂಡರ ಹೇಳಿಕೆಗಳನ್ನು ಪ್ರತ್ಯೇಕವಾಗಿ ಆಲಿಸಿದ ತಹಶೀಲ್ದಾರ್‌ರು, ಕಾರ್ಯಾಚರಣೆಗೆ ಹೆಚ್ಚಿನ ಕಾಲಾವಕಾಶ ಇಲ್ಲ. ಎಲ್ಲವನ್ನು ತ್ವರಿತಗತಿಯಲ್ಲಿ ಕೈಗೊಳ್ಳಬೇಕಾಗಿದೆ ಎಂದರು.

ಸಿಪಿಐ ಕಾರ್ಯಕರ್ತ ಆಸಾ ಕ್‌ ಮುಲ್ಲಾ, ದಲಿತ ಸೇನೆ ಜಿಲ್ಲಾ ಉಪಾಧ್ಯಕ್ಷ ಮಲ್ಲಿಕಾರ್ಜುನ ಬೋಳಣಿ, ಬಾಬುರಾವ್‌ ಅರುಣೋದಯ, ಧರ್ಮಾ ಬಂಗರಗಾ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸಲಾಂ ಸಗರಿ, ಮುಖಂಡ ದತ್ತಪ್ಪ ಹೊನ್ನಳ್ಳಿ, ದಯಾನಂದ ಶೇರಿಕಾರ, ವೀರಶೈವ ಸಮಾಜದ ಅಧ್ಯಕ್ಷ ಡಾ| ಶಿವಾನಂದ ಬೇಡಗೆ, ಮುಖಂಡ ಬಾಬುರಾವ್‌ ಮಡ್ಡೆ, ಮರಾಠಾ ಸಮಾಜದ ಅಧ್ಯಕ್ಷ ನಾಗನಾಥ ಏಟೆ, ಪುರಸಭೆ ಮಾಜಿ ಅಧ್ಯಕ್ಷ ಮೊಹೀಜ್‌ ಕಾರಬಾರಿ, ಅಮ್ಜದ್‌ ಅಲಿ ಖರ್ಜುಗಿ, ಮಹ್ಮದ್‌ ಮುಸ್ತಾಕ್‌ ಮೌಲಾನಾ ಮಾತನಾಡಿದರು.

ಶಾಂತಿವನ ಚರ್ಚ್‌ನ ಫಾದರ್‌ ಅನೀಲ ಪ್ರಸಾದ, ಬಿಜೆಪಿ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಕಂದಗುಳೆ, ರೇವಣಸಿದ್ಧಪ್ಪ ನಾಗೂರೆ, ಪುರಸಭೆ ಮುಖ್ಯಾಧಿಕಾರಿ ಬಾಬುರಾವ್‌ ವಿಭೂತೆ, ಜಿಪಂ ಎಇಇ ಮಲ್ಲಿಕಾರ್ಜುನ ಕಾರಬಾರಿ, ತಾ.ಪಂ ಸಹಾಯಕ ಅಧಿಕಾರಿ ಮೊಮ್ಮದ್‌ ಸಲೀಂ, ಶಿರಸ್ತೇದಾರ ಶ್ರೀನಿವಾಸ ಕುಲಕರ್ಣಿ, ಅರುಣಕುಮಾರ, ಮನೋಜ, ಆನಂದ ಲಕ್ಕಾ ಮತ್ತಿತರರು ಇದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.