ಐದು ಗ್ರಾಮಗಳಿಗೆ ವಕ್ಕರಿಸಿದ ಸೋಂಕು


Team Udayavani, Jun 1, 2020, 10:36 AM IST

01-June-01

ಆಳಂದ: ಮುಂಬೈನಿಂದ ಬಂದವರು ಇನ್ನೇನು ಕ್ವಾರಂಟೈನ್‌ ಅವಧಿ ಮುಗಿಯತು ಎಂದು ತಪಾಸಣೆ ವರದಿ ಬರುವ ಮೊದಲೆ ಮನೆಗಳಿಗೆ ತೆರೆಳಿ 7 ದಿನ ಅವಧಿಗಾಗಿ ಹೋಂ ಕ್ವಾರಂಟೈನ್‌ ಗೆ ಒಳಗಾಗಿದ್ದ ಸುಮಾರು 10 ಜನರಿಗೆ ಕೋವಿಡ್ ಸೋಂಕು ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ತಾಲೂಕಿನ ಭೂಸನೂರ ಗ್ರಾಮದಲ್ಲಿ ಇಬ್ಬರು ಬಾಲಕಿಯರು ಮತ್ತು ಓರ್ವ ಬಾಲಕ ಹಾಗೂ ಓರ್ವ ಪುರುಷನಿಗೆ ಸೋಂಕು ಕಂಡು ಬಂದಿದೆ ಎಂದು ಆರೋಗ್ಯ ಇಲಾಖೆ ಹೇಳಿಕೊಂಡಿದೆ. ಮತ್ತೊಂದೆಡೆ ನರೋಣಾ ಕೆ. ತಾಂಡಾದಲ್ಲಿ ಓರ್ವ ಮಹಿಳೆ, ಕಿಣ್ಣಿಸುಲ್ತಾನ ತಾಂಡಾದಲ್ಲಿ 18 ವರ್ಷದ ಯುವತಿ, ಕೊರಳ್ಳಿಯ ಗ್ರಾಮದಲ್ಲಿ ಓರ್ವ ಯುವತಿ ಹಾಗೂ ಓರ್ವ ಮಹಿಳೆಗೆ ಸೋಂಕು ದೃಢಪಟಿದೆ. ಇವರೆಲ್ಲರು ಮುಂಬೈನಿಂದ ಆಗಮಿಸಿ ಗ್ರಾಮಗಳಲ್ಲಿನ ಕ್ವಾರಂಟೈನ್‌ಲ್ಲಿದ್ದರು. ಅಲ್ಲದೆ, ಧುತ್ತರಗಾಂವ ಗ್ರಾಮಕ್ಕೆ ಪುಣೆಯಿಂದ ಆಗಮಿಸಿದ್ದ ಓರ್ವ ಯುವತಿಗೂ ಕೋವಿಡ್‌-19 ಸೋಂಕು ತಗುಲಿದೆ.

ಇವರೆಲ್ಲರು ವಲಸೆ ಹೋಗಿ ಬಂದಿದ್ದರಿಂದ ಆಯಾ ಗ್ರಾಮಗಳ ಕ್ವಾರಂಟೈನ್‌ನಲ್ಲಿ ಸುಮಾರು 14 ದಿನಗಳವರೆಗೆ ಇರಿಸಲಾಗಿತ್ತು. ಅವಧಿ ಮುಗಿಯುತ್ತ ಬರುತ್ತಿದ್ದಂತೆ ಮನೆಗಳಿಗೆ ತೆರಳಿದ್ದಾರೆ. ಮನೆಗೆ ತೆರಳುವ ಮೊದಲು ಆರೋಗ್ಯ ಇಲಾಖೆಯಿಂದ ಇವರ ಗಂಟಲು ದ್ರವ ಮಾದರಿಯ ಪಡೆದು ತಪಾಸಣೆಗೆ ಜಿಲ್ಲಾಸ್ಪತ್ರೆಗೆ ಕಳುಹಿಸಿಕೊಡಲಾಗಿದೆ. ವರದಿ ಬರುವ ತನಕ ಕ್ವಾರಂಟೈನ್‌ನಲ್ಲಿರಬೇಕಾದವರು ಮನೆಗಳಿಗೆ ಕಳುಹಿಸಲಾಗಿದೆ. ಮನೆಗೆ ಬಿಟ್ಟ ಎರಡ್ಮೂರು ದಿನಗಳಾದ ಬಳಿಕ ಈ 10 ಜನರಲ್ಲಿ ಸಕಾರಾತ್ಮಕವಾಗಿ ಸೋಂಕು ಪತ್ತೆಯಾದ ಮೇಲೆ ಮತ್ತೆ ಇವರೆಲ್ಲರನ್ನು ಹುಡುಕಿ ಆಸ್ಪತ್ರೆಗೆ ಸೇರಿಸಲಾಗಿದೆ. ಸುಮಾರು 14ನೇ ದಿನಗಳ ಕಾಲ ಇವರೆಲ್ಲರಿಗೂ ಸರ್ಕಾರಿ ಕ್ವಾರಂಟೈನ್‌ ಲ್ಲಿದ್ದಾಗ ಕೋವಿಡ್ ಸೋಂಕಿನ ಕುರಿತು ಯಾವುದೇ ಲಕ್ಷಣಗಳಿರಲಿಲ್ಲ. ತಪಾಸಣೆ ಬಳಿಕ ಸೋಂಕು ದೃಢಪಟ್ಟಿದ್ದು,ಇದರಿಂದ ಜನರಲ್ಲಿ ಮತ್ತಷ್ಟು ಆತಂಕ ಸೃಷ್ಟಿಯಾಗಿದೆ.

ಆಡಳಿತ ಹೈ ಅಲರ್ಟ್‌: ಕ್ವಾರಂಟೈನಲ್ಲಿದ್ದ ನೂರಾರು ಜನರ ಪೈಕಿ ಪ್ರಾಥಮಿಕ ವರದಿಯಲ್ಲಿ 10 ಜನರಿಗೆ ಯಾವುದೇ ಲಕ್ಷಣ ಇಲ್ಲವೆಂದು ವರದಿ ಬರುವ ಮೊದಲೆ ಮನೆಗೆ ಕಳುಹಿಸಿಲಾಗಿದೆ. ಆದರೆ ವರದಿಯಲ್ಲಿ ಸೋಂಕು ಪತ್ತೆಯಾಗಿದ್ದರಿದ ಈಗ ತಾಲೂಕು ಆಡಳಿತ ಹೈ ಅಲರ್ಟ್‌ ಆಗುವ ಮೂಲಕ ಕ್ವಾರಂಟೈನ್‌ ಮುಗಿದ ಮನೆಗೆ ತೆರಳಿದವರ ಮೇಲೂ ಹದ್ದಿನ ಕಣ್ಣಿಟ್ಟು, ಎಲ್ಲಾ ಕ್ವಾರಂಟೈನ್‌ಗಳ ಆರೋಗ್ಯದ ಮಾಹಿತಿ ಕಲೆಹಾಕಲು ಚುರುಕಿನ ಕಾರ್ಯಾಚರಣೆ ಆರಂಭಿಸಿದೆ.

ಸಭೆ ಕರೆದು ತಾಕೀತು: ಹೋಂ ಕ್ವಾರಂಟೈನ್‌ಗಳ ಮೇಲೆ ನಿಗಾವಹಿಸಲು ಸರ್ಕಾರ ಕ್ವಾರಂಟೈನ್‌ ವಾಚ್‌ ಆ್ಯಪ್‌ ಮೂಲಕ ಗ್ರಾಪಂ ಸಿಬ್ಬಂದಿ ಮನೆ, ಮನೆಗೆ ತೆರಳಿ ಅವರ ಆರೋಗ್ಯದ ಪರಿಸ್ಥಿತಿ ಕುರಿತು ಮಾಹಿತಿ ಸಂಗ್ರಹಿಸುವಂತೆ ತಹಶೀಲ್ದಾರ್‌ ದಯಾನಂದ ಪಾಟೀಲ ಗ್ರಾಪಂ ಸಿಬ್ಬಂದಿಗೆ ಭಾನುವಾರ ಸಭೆ ಕರೆದು ತಾಕೀತು ಮಾಡಿದ್ದಾರೆ.

ಕಟ್ಟುನಿಟ್ಟಿನ ಕ್ರಮ: ಕ್ವಾರಂಟೈನ್‌ನಲ್ಲಿದ್ದು 14 ದಿನಗಳ ಮುಗಿದವರಿಗೆ ಗಂಟಲು ದ್ರವದ ಮಾದರಿ ಪಡೆದು, ಥರ್ಮಲ್‌ ಸ್ಕ್ರೀನಿಂಗ್‌ ತಪಾಸಣೆ ಕೈಗೊಂಡು ಬಿಡುಗಡೆ ಮಾಡಲಾಗುತ್ತಿದೆ. ಅಲ್ಲದೆ ಇನ್ನೂ 7 ದಿನಗಳ ಕಾಲ ತಮ್ಮ ಮನೆಯಲ್ಲೂ ಸ್ವಯಂ ಕ್ವಾರಂಟೈನ್‌ ಕೈಗೊಳ್ಳುವಂತೆ ಸೂಚಿಸುತ್ತೇವೆ. ಹೋ ಕ್ವಾರಂಟೈನ್‌ಗೆ ಒಳಗಾದ ಈ 10 ಜನರಲ್ಲಿ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂಳಿದ ಹೋಂ ಕ್ವಾರಂಟೈನ್‌ಗಳ ಮೇಲೆ ನಿಗಾವಹಿಸಲು ಆಶಾ ಕಾರ್ಯಕರ್ತೆಯರ ಮೂಲಕವೂ ವರದಿ ಪಡೆಯಲಾಗುತ್ತದೆ ಎಂದು ಆರೋಗ್ಯಾಧಿಕಾರಿ ಡಾ| ಶ್ರೀನಿವಾಸ್‌ ತಿಳಿಸಿದ್ದಾರೆ.

Ad

ಟಾಪ್ ನ್ಯೂಸ್

ಫಿಡೆ ಮಹಿಳಾ ವಿಶ್ವಕಪ್‌ ಚೆಸ್‌: ಪ್ರಿ ಕ್ವಾರ್ಟರ್‌ಗೆ ದಿವ್ಯಾ, ಹಂಪಿ

FIDE ಮಹಿಳಾ ವಿಶ್ವಕಪ್‌ ಚೆಸ್‌: ಪ್ರಿ ಕ್ವಾರ್ಟರ್‌ಗೆ ದಿವ್ಯಾ, ಹಂಪಿ

Tokyo ಜಪಾನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ

Tokyo ಜಪಾನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ

ಸನ್‌ರೈಸರ್ ಹೈದರಾಬಾದ್‌ಗೆ ವರುಣ್‌ ಆರೋನ್‌ ಬೌಲಿಂಗ್‌ ಕೋಚ್‌

IPL: ಸನ್‌ರೈಸರ್ ಹೈದರಾಬಾದ್‌ಗೆ ವರುಣ್‌ ಆರೋನ್‌ ಬೌಲಿಂಗ್‌ ಕೋಚ್‌

ವಿಂಬಲ್ಡನ್‌ ಗೆಲ್ಲಬೇಕಾದರೆ ಅಲ್ಕರಾಜ್‌ ಅವರನ್ನು ಮಣಿಸಲೇಬೇಕಿತ್ತು: ಸಿನ್ನರ್‌ವಿಂಬಲ್ಡನ್‌ ಗೆಲ್ಲಬೇಕಾದರೆ ಅಲ್ಕರಾಜ್‌ ಅವರನ್ನು ಮಣಿಸಲೇಬೇಕಿತ್ತು: ಸಿನ್ನರ್‌

ವಿಂಬಲ್ಡನ್‌ ಗೆಲ್ಲಬೇಕಾದರೆ ಅಲ್ಕರಾಜ್‌ ಅವರನ್ನು ಮಣಿಸಲೇಬೇಕಿತ್ತು: ಸಿನ್ನರ್‌

Australia Vs West Indies; ಕಿಂಗ್‌ಸ್ಟನ್‌ ಟೆಸ್ಟ್‌ : 181 ರನ್‌ ಮುನ್ನಡೆಯಲ್ಲಿ ಆಸ್ಟ್ರೇಲಿಯ

AUS Vs WI: ಕಿಂಗ್‌ಸ್ಟನ್‌ ಟೆಸ್ಟ್‌ : 181 ರನ್‌ ಮುನ್ನಡೆಯಲ್ಲಿ ಆಸ್ಟ್ರೇಲಿಯ

T20 ತ್ರಿಕೋನ ಸರಣಿ: ದಕ್ಷಿಣ ಆಫ್ರಿಕಾಕ್ಕೆ ಗೆಲುವು

T20 ತ್ರಿಕೋನ ಸರಣಿ: ದಕ್ಷಿಣ ಆಫ್ರಿಕಾಕ್ಕೆ ಗೆಲುವು

Supreme Court: ದ್ವೇಷ ಭಾಷಣ ನಿಯಂತ್ರಿಸಿ: ಸರಕಾರಕ್ಕೆ ಸುಪ್ರೀಂ ಸೂಚನೆ

Supreme Court: ದ್ವೇಷ ಭಾಷಣ ನಿಯಂತ್ರಿಸಿ: ಸರಕಾರಕ್ಕೆ ಸುಪ್ರೀಂ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಅಕ್ಟೋಬರ್‌ದಲ್ಲಿ ಸಂಪುಟ ಪುನಾರಚನೆ… ಸಚಿವ ಸ್ಥಾನದ ವಿಶ್ವಾಸ; ಡಾ.ಅಜಯಸಿಂಗ್

ಅಕ್ಟೋಬರ್‌ದಲ್ಲಿ ಸಂಪುಟ ಪುನಾರಚನೆ… ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ: ಡಾ.ಅಜಯಸಿಂಗ್

Kalaburagi: ಹಾಡಹಗಲೇ ಜ್ಯವೆಲರಿ ಶಾಪ್ ಗೆ ನುಗ್ಗಿ ಗನ್‌ ತೋರಿಸಿ ದರೋಡೆ

Kalaburagi: ಹಾಡಹಗಲೇ ಜ್ಯವೆಲರಿ ಶಾಪ್ ಗೆ ನುಗ್ಗಿ ಗನ್‌ ತೋರಿಸಿ ದರೋಡೆ

Kalaburagi: ಹೃದಯಾಘಾತದಿಂದ ಕಾಲೇಜು ಉಪ ಪ್ರಾಂಶುಪಾಲ ಸಾವು

Kalaburagi: ಹೃದಯಾಘಾತದಿಂದ ಕಾಲೇಜು ಉಪ ಪ್ರಾಂಶುಪಾಲ ಸಾವು

Kalaburagi: ಕಾಮಗಾರಿ ಬಿಲ್ ಮಾಡಲು ಕಮಿಷನ್ ಕೇಳಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್

Kalaburagi: ರಸ್ತೆ ಕಾಮಗಾರಿ ಬಿಲ್ ಮಾಡಲು ಕಮಿಷನ್ ಕೇಳಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್

ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರಕಾರ ಆದೇಶಕ್ಕೆ ಹೈಕೋರ್ಟ್‌ ತಡೆ

ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರಕಾರ ಆದೇಶಕ್ಕೆ ಹೈಕೋರ್ಟ್‌ ತಡೆ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

ಫಿಡೆ ಮಹಿಳಾ ವಿಶ್ವಕಪ್‌ ಚೆಸ್‌: ಪ್ರಿ ಕ್ವಾರ್ಟರ್‌ಗೆ ದಿವ್ಯಾ, ಹಂಪಿ

FIDE ಮಹಿಳಾ ವಿಶ್ವಕಪ್‌ ಚೆಸ್‌: ಪ್ರಿ ಕ್ವಾರ್ಟರ್‌ಗೆ ದಿವ್ಯಾ, ಹಂಪಿ

suicide (2)

Mangaluru:ಕಾರು ಪಲ್ಟಿಯಾಗಿ ಗಂಭೀರ ಗಾಯಗೊಂಡ ಯುವಕ ಸಾ*ವು

Tokyo ಜಪಾನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ

Tokyo ಜಪಾನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ

ಸನ್‌ರೈಸರ್ ಹೈದರಾಬಾದ್‌ಗೆ ವರುಣ್‌ ಆರೋನ್‌ ಬೌಲಿಂಗ್‌ ಕೋಚ್‌

IPL: ಸನ್‌ರೈಸರ್ ಹೈದರಾಬಾದ್‌ಗೆ ವರುಣ್‌ ಆರೋನ್‌ ಬೌಲಿಂಗ್‌ ಕೋಚ್‌

1-aa-aa-RSS

ಗುರುದಕ್ಷಿಣೆ ಸಮರ್ಪಿಸಿ ಕೊನೆಯುಸಿರೆಳೆದ ಆರೆಸ್ಸೆಸ್‌ ಕಾರ್ಯಕರ್ತ ಬಾಬು ದೇವಾಡಿಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.